ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣ ಸಂಬಂಧ ನಿವೃತ್ತ ನ್ಯಾ. ಕೆ.ಎನ್‌. ಕೇಶವನಾರಾಯಣ ಆಯೋಗ ಸಲ್ಲಿಸಿರುವ ವರದಿ, ಶಿಫಾರಸು ತಿರಸ್ಕರಿಸಲು ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆ. ಈ ಹಿಂದೆ ಸಿಬಿಐ ಕ್ಲೀನ್‌ಚಿಟ್‌ ನೀಡಿತ್ತು. ಆಯೋಗ ಯಾವ ಶಿಫಾರಸು ಮಾಡಿತ್ತು ಎಂಬ ಕುತೂಹಲ.

ಬೆಂಗಳೂರು(ಸೆ.25): ಡಿವೈಎಸ್‌ಪಿ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ನಿವೃತ್ತ ನ್ಯಾ. ಕೆ.ಎನ್‌. ಕೇಶವನಾರಾಯಣ ಆಯೋಗ ಸಲ್ಲಿಸಿರುವ ವರದಿ ಹಾಗೂ ಶಿಫಾರಸುಗಳನ್ನು ತಿರಸ್ಕರಿಸಲು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ಪ್ರಸ್ತಾವನೆ ಸಲ್ಲಿಸುವ ಸಾಧ್ಯತೆಯಿದೆ.

Add Asianetnews Kannada as a Preferred SourcegooglePreferred

2016ರಲ್ಲಿ ರಾಜ್ಯದಲ್ಲಿ ತೀವ್ರ ವಿವಾದ ಸೃಷ್ಟಿಸಿದ್ದ ಎಂ.ಕೆ. ಗಣಪತಿ ಆತ್ಮಹತ್ಯೆ ಪ್ರಕರಣದಲ್ಲಿ ಆಗಿನ ಗೃಹ ಸಚಿವರಾಗಿದ್ದ ಕೆ.ಜೆ. ಜಾರ್ಜ್‌ ಸೇರಿ ಹಲವು ಹಿರಿಯ ಪೊಲೀಸ್‌ ಅಧಿಕಾರಿಗಳ ಮೇಲೆ ಆರೋಪಗಳು ಕೇಳಿ ಬಂದಿದ್ದವು. ಈ ಪ್ರಕರಣದ ಬಗ್ಗೆ ಸಿಬಿಐ ವಿಚಾರಣೆ ನಡೆಸಿ ಕ್ಲೀನ್‌ಚಿಟ್‌ ನೀಡಿತ್ತು.

ಇದನ್ನೂ ಓದಿ: ಸರ್ಕಾರಕ್ಕೆ ನುಗ್ಗಲಾರದ ತುತ್ತಾಗಿದೆ ಡಿವೈಎಸ್ಪಿ ಗಣಪತಿ ಕೇಸ್; ಪ್ರಕರಣಕ್ಕೆ ಸಿಕ್ಕಿದೆ ಬಿಗ್ ಟ್ವಿಸ್ಟ್

ಆದರೆ, ಇದೇ ವೇಳೆ 2016ರಲ್ಲಿ ಲಾಡ್ಜ್‌ ಒಂದರಲ್ಲಿ ಆತ್ಮಹತ್ಯೆಗೆ ಶರಣಾಗಿದ್ದ ಎಂ.ಕೆ. ಗಣಪತಿ ಪ್ರಕರಣ ವಿಚಾರಣೆ ನಡೆಸಿ ವರದಿ ನೀಡುವಂತೆ ನಿವೃತ್ತ ನ್ಯಾ. ಕೆ.ಎನ್‌. ಕೇಶವ ನಾರಾಯಣ ಆಯೋಗ ರಚನೆ ಮಾಡಿತ್ತು. ಈ ಆಯೋಗ ಸಲ್ಲಿಸಿರುವ ವರದಿ ಹಾಗೂ ಶಿಫಾರಸುಗಳನ್ನು ತಿರಸ್ಕರಿಸಲು ಗುರುವಾರ ನಡೆಯಲಿರುವ ಸಚಿವ ಸಂಪುಟ ಸಭೆಯಲ್ಲಿ ವಿಷಯ ಮಂಡನೆಯಾಗಲಿದೆ. ಹೀಗಾಗಿ ಯಾವ ಶಿಫಾರಸುಗಳನ್ನು ಆಯೋಗ ಮಾಡಿತ್ತು ಎಂಬ ಬಗ್ಗೆ ಕುತೂಹಲ ಮೂಡಿದೆ.