ರಾಜ್ಯದಲ್ಲಿ ಸಾರಿಗೆ ನೌಕರರು ಮುಷ್ಕರ ನಡೆಸುತ್ತಿದ್ದು, ಇದರಿಂದ ಇಲಾಖೆಗೆ ಭಾರೀ ಪ್ರಮಾಣದಲ್ಲಿ ನಷ್ಟ ಉಂಟಾಗಿದೆ.
ಬೆಂಗಳೂರು (ಡಿ.13): ಸಾರಿಗೆ ಸಂಸ್ಥೆ ನೌಕರರು ನಡೆಸುತ್ತಿರುವ ಪ್ರತಿಭಟನೆಯಿಂದ ಶನಿವಾರ ಕೂಡ ರಾಜ್ಯಾದ್ಯಂತ ಬಸ್ ಸಂಚಾರ ಇರಲಿಲ್ಲ.
ಹೀಗಾಗಿ ಶನಿವಾರ ಒಟ್ಟು ನಾಲ್ಕು ನಿಗಮಗಳಿಂದ ಸುಮಾರು .16.5 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಬೆಂಗಳೂರು ಮಹಾನಗರ ಸಾರಿಗೆ ಸಂಸ್ಥೆ(ಬಿಎಂಟಿಸಿ)ಗೆ 2.1 ಕೋಟಿ, ಕೆಎಸ್ಆರ್ಟಿಸಿಗೆ 4 ಕೋಟಿ, ಕಲಬುರಗಿ ಕೇಂದ್ರವಾಗಿರುವ ಈಶಾನ್ಯ ಸಾರಿಗೆ ಸಂಸ್ಥೆಗೆ 4.5 ಕೋಟಿ, ಹುಬ್ಬಳ್ಳಿ ಕೇಂದ್ರವಾಗಿರುವ ವಾಯುವ್ಯ ರಸ್ತೆ ಸಾರಿಗೆ ಸಂಸ್ಥೆಗೆ 5.5 ಕೋಟಿ ನಷ್ಟವಾಗಿದೆ ಎಂದು ಅಂದಾಜಿಸಲಾಗಿದೆ.
ಮುಷ್ಕರ ನಿರತರಿಗೆ ಮಾತುಕತೆಗೆ ಮುಕ್ತ ಅಹ್ವಾನ ನೀಡಿದ ಸಾರಿಗೆ ಸಚಿವರು .
ಕಳೆದ ಎರಡು ದಿನಗಳಿಂದಲೂ ಕೂಡ ಕೆಎಸ್ಆರ್ಟಿಸಿ ನೌಕರರು ಪ್ರತಿಭಟನೆ ನಡೆಸುತ್ತಿದ್ದಾರೆ.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Dec 13, 2020, 7:27 AM IST