Asianet Suvarna News Asianet Suvarna News

ಅಮೇಜಾನ್‌ಗೆ ಬುದ್ಧಿ ಕಲಿಸಿದ ಕನ್ನಡಿಗರು, ಭೇಷ್ ಎಂದ ಮಾಜಿ ಮುಖ್ಯಮಂತ್ರಿ!

* ಗೂಗಲ್ ಬೆನ್ನಲ್ಲೇ ಅಮೇಜಾನ್‌ ಉದ್ಧಟತನ

* ಕನ್ನಡಿಗರ ಸ್ವಾಭಿಮಾನ ಕೆಣಕುವ ಯತ್ನ ಮಾಡಿದ ಕಂಪನಿಗೆ ಬುದ್ಧಿ ಕಲಿಸಿದ ಕರುನಾಡಿನ ಮಂದಿ

* ಕನ್ನಡಿಗರಿಗೆ ಭೇಷ್ ಎಂದ ಮಾಜಿ ಸಿಎಂ ಕುಮಾರಸ್ವಾಮಿ

Former CM JDS Leader HD Kumaraswamy Slams Amazon On Insulting Kannada Flag pod
Author
Bangalore, First Published Jun 6, 2021, 12:29 PM IST

ಬೆಂಗಳೂರು(ಜೂ.06): ಗೂಗಲ್ ಬೆನ್ನಲ್ಲೇ  ವಿಶ್ವದ ಅತೀದೊಡ್ಡ ಆನ್‌ಲೈನ್ ಶಾಪಿಂಗ್ ಕಂಪನಿ ಅಮೇಜಾನ್ ಕೂಡಾ ಕನ್ನಡಿಗರ ಸ್ವಾಭಿಮಾನ ಕೆಣಕುವ ಯತ್ನ ಮಾಡಿತ್ತು. ಆದರೆ ಕಂಪನಿಯ ಈ ಉದ್ಧಟತನದಿಂದ ಕೆರಳಿದ ಕನ್ನಡಿಗರು ಅಮೇಜಾನ್‌ಗೆ ಬಿಸಿ ಮುಟ್ಟಿಸಿದ್ದಾರೆ. ಹೀಗಿರುವಾಗ ಕನ್ನಡಿಗರನ್ನು ಮಾಜಿ ಸಿಎಂ ಎಚ್. ಡಿ. ಕುಮಾರಸ್ವಾಮಿ ಮೆಚ್ಚುಗೆ ವ್ಯಕ್ತಪಡಿಸಿದ್ದಾರೆ.

ಹೌದು ಈ ಬಗ್ಗೆ ಸರಣಿ ಟ್ವೀಟ್ ಮಾಡಿರುವ ಮಾಜಿ ಸಿಎಂ ಕುಮಾರಸ್ವಾಮಿ ಕನ್ನಡದ ಧ್ವಜವನ್ನು ಅಪಮಾನಿಸಿದ ಕೆನಡಾದ ಅಮೇಜಾನ್‌ಗೆ ಕನ್ನಡಿಗರು ಬಿಸಿಮುಟ್ಟಿಸಿದ್ದಾರೆ. ಅಮೆಜಾನ್‌ ತನ್ನ ತಪ್ಪು ಸರಿಪಡಿಸಿಕೊಂಡಿದೆ. ಕನ್ನಡವನ್ನು ಅವಮಾನಿಸಿದ ಗೂಗಲ್‌ಗೆ ಪಾಠ ಕಲಿಸಿದ್ದು, ಈಗ ಅಮೆಜಾನ್‌ಗೆ ಬುದ್ಧಿ ಕಲಿಸಿದ್ದರಲ್ಲಿ ಎದ್ದು ಕಾಣುವಂಥದ್ದು ಕನ್ನಡಿಗರ ‘ಅಭಿಮಾನ’. ಅದಕ್ಕಾಗಿ ಕನ್ನಡದ ಮನಸ್ಸುಗಳನ್ನು ಅಭಿನಂದಿಸುತ್ತೇನೆ ಎಂದಿದ್ದಾರೆ. 

ಇದೇ ವೇಳೆ ಕಂಪನಿಗಳಿಗೂ ಪ್ರಶ್ನಿಸಿರುವ ಮಾಜಿ ಸಿಎಂ ಕುಮಾರಸ್ವಾಮಿ ಕನ್ನಡ, ಕರ್ನಾಟಕದ ವಿಚಾರದಲ್ಲಿ ಇತ್ತೀಚೆಗೆ ಬಹುರಾಷ್ಟ್ರೀಯ ಕಂಪನಿಗಳು ಅತ್ಯಂತ ಅಜಾಗರೂಕವಾಗಿ, ಅಸೂಕ್ಷ್ಮವಾಗಿ ವರ್ತಿಸುತ್ತಿವೆ. ಗೂಗಲ್ ನಂತರ ಈಗ ಅಮೇಜಾನ್‌ನ ಕೆನಡಾ ವಿಭಾಗ ನಿರ್ಲಕ್ಷ್ಯ ಮೆರೆದಿದೆ. ಈ ಸಂಸ್ಥೆಗಳು ಭಾಷೆ ಮತ್ತು ಭಾವನೆಗಳ ವಿಚಾರದಲ್ಲಿ ಯಾಕಿಂಥ ನಿರ್ಲಕ್ಷ್ಯವಹಿಸುತ್ತಿವೆ? ಈ ಬಗ್ಗೆ ಅಮೇಜಾನ್ ಪ್ರತಿಕ್ರಿಯೆ ನೀಡಬೇಕು ಎಂದು ಆಗ್ರಹಿಸಿದ್ದಾರೆ.

ಇನ್ನು ಅಮೇಜಾನ್‌ ಈ ನಡೆ ವಿರುದ್ಧ ಕ್ರಮ ಕೈಗೊಳ್ಳಬೇಕೆಂದು ಆಗ್ರಹಿಸಿರುವ ಎಚ್‌ಡಿಕೆ ಬಾವುಟದ ಜೊತೆಗೇ, ಕರ್ನಾಟಕದ ರಾಜಲಾಂಛನವನ್ನೂ ಅಮೆಜಾನ್‌ ಅಮಾನಿಸಿದೆ. ಇದು ಸರ್ಕಾರಕ್ಕೆ ಮಾಡಲಾದ ಅಪಮಾನ. ಸರ್ಕಾರ ಸಂವಿಧಾನದ ಅಂಗ. ಹೀಗಾಗಿ ಅಮೇಜಾನ್‌ನಿಂದ ಬಹುದೊಡ್ಡ ಅಪಚಾರವಾಗಿದೆ. ಅಮೆಜಾನ್‌ ವಿರುದ್ಧ ಕ್ರಮ ಕೈಗೊಳ್ಳಲು ಸಾಧ್ಯವೇ ಎಂಬುದರತ್ತ ರಾಜ್ಯ ಸರ್ಕಾರ ಗಮನ ಹರಿಸಬೇಕು. ಮುಂದೆ ಇಂಥ ಮುಜುಗರ ತಪ್ಪಿಸಲು ಇದು ಅಗತ್ಯ ಎಂದಿದ್ದಾರೆ.

ಅಲ್ಲದೇ ‘ಕನ್ನಡ ಕೆಟ್ಟ ಭಾಷೆ‘ ಎಂಬ ವಿಚಾರ ಗೂಗಲ್‌ನಲ್ಲಿ ಕಾಣಿಸಿಕೊಂಡ ಬೆನ್ನಲ್ಲೇ ಈ ಘಟನೆಯೂ ಬಯಲಾಗಿರುವುದನ್ನು ಗಮನಿಸುತ್ತಿದ್ದರೆ, ಕನ್ನಡ, ಕರ್ನಾಟಕಕ್ಕೆ ಅಪಚಾರ ಮಾಡಲು ಪಟ್ಟಭದ್ರ ಹಿತಾಸಕ್ತಿ ಕೆಲಸ ಮಾಡುತ್ತಿರುವ ಅನುಮಾನ ಮೂಡುತ್ತಿದೆ. ಜನಸಮುದಾಯವೊಂದರ ಭಾವನೆಗಳ ಜೊತೆಗೆ ಆಟವಾಡುತ್ತಿರುವವರನ್ನು ಪತ್ತೆ ಹಚ್ಚುವ ಸಂದರ್ಭ ಈಗ ಸೃಷ್ಟಿಯಾಗಿದೆ ಎಂದಿದ್ದಾರೆ.

ಅಮೇಜಾನ್‌ ಕ್ಷಂಎ ಕೇಳಬೇಕೆಂದು ಆಗ್ರಹಿಸಿರುವ ಮಾಜಿ ಸಿಎಂ ಇಂಥ ಅಪಮಾನಗಳ ಮೂಲಕ ಕನ್ನಡಿಗರ ಸಹನೆ ಕೆಣಕುವ ಕೆಲಸ ಇಂಥ ಸಂಸ್ಥೆಗಳಿಂದ ಆಗುತ್ತಲೇ ಇವೆ. ಕನ್ನಡಿಗರ ಕೋಪದಿಂದ ಸಿಡಿಯುವ ಕಿಡಿಯಿಂದ ಅನಾಹುತಗಳು ಸಂಭವಿಸಿದರೆ, ಅದನ್ನು ತಾಳಿಕೊಳ್ಳುವ ಶಕ್ತಿ ಈ ಸಂಸ್ಥೆಗಳಿಗೆ ಉಳಿಯಲಾರದು. ಪರಿಸ್ಥಿತಿ ಅಲ್ಲಿಗೆ ಹೋಗುವ ಮೊದಲು ಅಮೇಜಾನ್ ಜಾಗತಿಕವಾಗಿ ಕ್ಷಮೆ ಕೋರಬೇಕು. ತಪ್ಪಿತಸ್ಥರನ್ನು ಹಿಡಿದುಕೊಡಬೇಕು ಎಂದು ಒತ್ತಾಯಿಸಿದ್ದಾರೆ.

Follow Us:
Download App:
  • android
  • ios