ಈಶ್ವರಪ್ಪ ಮೇಲೆ ಹರಿಹಾಯ್ದ ಮಾಜಿ ಸಿಎಂ ಸಿದ್ದರಾಮಯ್ಯ| ಸಿದ್ದರಾಮಯ್ಯ ಹುಚ್ಚ ಎಂಬ ಈಶ್ವರಪ್ಪ ಹೇಳಿಕೆ| ಈಶ್ವರಪ್ಪ ತಲೆಯಲ್ಲಿ ಮೆದುಳಿಲ್ಲ ಎಂದ ಮಾಜಿ ಸಿಎಂ| ಕನಕ ಜಯಂತಿಯಲ್ಲಿ ಭಾಗವಹಿಸಿ ಮಾತನಾಡಿದ ಸಿದ್ದರಾಮಯ್ಯ| ಬಿಜೆಪಿ ಹಿಂಸೆಯಿಂದ ತಪ್ಪಿಸಿಕೊಳ್ಳಲು ಈಗಲ್ಟನ್ ರೆಸಾರ್ಟ್ ಗೆ ಹೋಗಿದ್ದೇವೆ 

ಆನೇಕಲ್(ಜ.19): ಸಿದ್ದರಾಮಯ್ಯ ಓರ್ವ ಹುಚ್ಚ ಎಂಬ ಈಶ್ವರಪ್ಪ ಹೇಳಿಕೆಗೆ ಕಾಂಗ್ರೇಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಸರಿಯಾಗೇ ತಿರುಗೇಟು ಕೊಟ್ಟಿದ್ದಾರೆ. ಆನೇಕಲ್‌ನಲ್ಲಿ ಕನಕ ಜಯಂತಿ ಕಾರ್ಯಕ್ರಮದಲ್ಲಿ ಭಾಗಿಯಾಗಿ ಮಾತನಾಡಿದ ಅವರು, ಈಶ್ವರಪ್ಪಗೆ ಮೆದುಳೇ ಇಲ್ಲ ಎಂದು ವ್ಯಂಗ್ಯವಾಡಿದ್ದಾರೆ.

Add Asianetnews Kannada as a Preferred SourcegooglePreferred

ಬಿಜೆಪಿ ಹಿಂಸೆಯಿಂದ ತಪ್ಪಿಸಿಕೊಳ್ಳಲು ಈಗಲ್ಟನ್ ರೆಸಾರ್ಟ್ ಗೆ ಹೋಗಿದ್ದೇವೆ ಎಂದ ಸಿದ್ದರಾಮಯ್ಯ, ಈಶ್ವರಪ್ಪ ಅವರಿಗೆ ಬುದ್ಧಿ ಭ್ರಮಣೆಯಾಗಿದೆ ಹಾಗಾಗಿಯೇ ಅವರು ಬಾಯಿಗೆ ಬಂದಂತೆ ಮಾತನಾಡುತ್ತಾರೆ. ಅಂತಾ ತಿರುಗೇಟು ನೀಡಿದರು.

"

ಈಶ್ವರಪ್ಪ ಅವರಿಗೆ ಸಂಸ್ಕೃತಿ ಗೊತ್ತಿಲ್ಲ, ಸಮಾಜದಲ್ಲಿ ವರ್ತಿಸುವ ಬಗೆ ಅವರಿಗೆ ಪಾಠ ಹೇಳಿ ಕೊಡಬೇಕಿದೆ ಎಂದು ಸಿದ್ದರಾಮಯ್ಯ ವ್ಯಂಗ್ಯವಾಡಿದರು.