ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಮತ್ತು ಮಾಜಿ ಸಚಿವ ವೆಂಕಟರಮಣಪ್ಪ (80) ಅವರು ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನಲ್ಲಿ ನಿಧನ. ನಾಲ್ಕು ಬಾರಿ ಶಾಸಕರಾಗಿ, ಎರಡು ಬಾರಿ ಸಚಿವರಾಗಿ ಸೇವೆ ಸಲ್ಲಿಸಿದ್ದ ಅವರ ಅಗಲಿಕೆಯಿಂದ, ಅವರ ಪುತ್ರ ಹಾಗೂ ಹಾಲಿ ಶಾಸಕ ಎಚ್‌.ವಿ ವೆಂಕಟೇಶ್‌ ಅವರಿಗೆ ಪಿತೃ ವಿಯೋಗ 

ತುಮಕೂರು (ಮೇ.29): ತುಮಕೂರು ಜಿಲ್ಲೆಯ ಪಾವಗಡದ ಹಿರಿಯ ರಾಜಕಾರಣಿ ಹಾಗೂ ಮಾಜಿ ಸಚಿವ ವೆಂಕಟರಮಣಪ್ಪ (80) ಇಂದು ಬೆಳಗಿನ ಜಾವ ನಿಧನರಾಗಿದ್ದಾರೆ. ವಯೋಸಹಜ ಅನಾರೋಗ್ಯದಿಂದ ಬೆಂಗಳೂರಿನ ಫೋರ್ಟಿಸ್ ಆಸ್ಪತ್ರೆ (Fortis Hospital) ನಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಅವರು ಇಂದು ಬೆಳಗ್ಗೆ 6 ಗಂಟೆ ಸುಮಾರಿಗೆ ಹೃದಯಾಘಾತ(Heart attack)ದಿಂದ ಕೊನೆಯುಸಿರೆಳೆದಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ನಾಲ್ಕು ಬಾರಿ ಶಾಸಕ, ಎರಡು ಬಾರಿ ಸಚಿವ; ಪಾವಗಡ ರಾಜಕೀಯದ ಪ್ರಭಾವಿ ನಾಯಕ

ವೆಂಕಟರಮಣಪ್ಪ ಅವರು ಪಾವಗಡ ಕ್ಷೇತ್ರದಿಂದ ನಾಲ್ಕು ಬಾರಿ ಶಾಸಕರಾಗಿ ಆಯ್ಕೆಯಾಗಿದ್ದು, ಎರಡು ಬಾರಿ ಸಚಿವರಾಗಿಯೂ ಸೇವೆ ಸಲ್ಲಿಸಿದ್ದರು. ಸರಳ ವ್ಯಕ್ತಿತ್ವ ಹಾಗೂ ಜನಪರ ರಾಜಕಾರಣದ ಮೂಲಕ ಅಪಾರ ಅಭಿಮಾನಿಗಳನ್ನು ಸಂಪಾದಿಸಿದ್ದ ಅವರು, ತುಮಕೂರು ಜಿಲ್ಲೆ ರಾಜಕೀಯದಲ್ಲಿ ತನ್ನದೇ ಆದ ಪ್ರಭಾವ ಹೊಂದಿದ್ದರು. ಅವರ ಅಗಲಿಕೆಯಿಂದ ಪಾವಗಡ ಜನರಿಗೆ ಆಘಾತವುಂಟು ಮಾಡಿದೆ.

ಶಾಸಕ ಎಚ್‌.ವಿ ವೆಂಕಟೇಶ್‌ಗೆ ಪಿತೃ ವಿಯೋಗ

ಮಾಜಿ ಸಚಿವರ ನಿಧನದಿಂದ ಪಾವಗಡ ಶಾಸಕ ಎಚ್‌.ವಿ ವೆಂಕಟೇಶ್ ಅವರಿಗೆ ಪಿತೃ ವಿಯೋಗ ಉಂಟಾಗಿದೆ. ರಾಜಕೀಯ ನಾಯಕರು, ಕಾರ್ಯಕರ್ತರು ಹಾಗೂ ಅಭಿಮಾನಿಗಳು ವೆಂಕಟರಮಣಪ್ಪ ಅವರ ನಿವಾಸದತ್ತ ಆಗಮಿಸುತ್ತಿದ್ದಾರೆ. ಹಲವು ಗಣ್ಯರು ಸಾಮಾಜಿಕ ಜಾಲತಾಣಗಳ ಮೂಲಕ ಸಂತಾಪ ಸೂಚಿಸಿದ್ದು, ರಾಜ್ಯ ರಾಜಕಾರಣದಲ್ಲಿ ಮತ್ತೊಬ್ಬ ಹಿರಿಯ ನಾಯಕರನ್ನು ಕಳೆದುಕೊಂಡಿದೆ.