ಸುಳ್ವಾಡಿ ವಿಷ ಪ್ರಸಾದ ದುರಮತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ವಿಷವೂಟ ಸೇವಿಸಿ ನಾಲ್ವರು ಸಾವನ್ನಪ್ಪಿದ್ದಾರೆ.

ಚಿತ್ರದುರ್ಗ[ಡಿ.21]: ಸುಳ್ವಾಡಿ ವಿಷ ಪ್ರಸಾದ ದುರಂತ ಮಾಸುವ ಮುನ್ನವೇ ಚಿತ್ರದುರ್ಗದಲ್ಲಿ ವಿಷ ಆಹಾರ ಸೇವಿಸಿ ಒಂದೇ ಕುಟುಂಬದ ನಾಲ್ವರು ಮೃತಪಟ್ಟಿದ್ದರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಚಿತ್ರದುರ್ಗದ ಹಿರಿಯೂರು ತಾಲೂಕಿನ ಹುಲಿತೊಟ್ಲು ಗ್ರಾಮದಲ್ಲಿ ಘಟನೆ ನಡೆದಿದ್ದು,ಮೃತರನ್ನು ಚಿತ್ತಪ್ಪ[80], ಶಶಿಧರ್[40], ಭಾಗ್ಯಮ್ಮ[35], ಹೇಮಲತಾ[35] ಎಂದು ಗುರುತಿಸಲಾಗಿದೆ. ಈ ಆಹಾರ ಸೇವಿಸಿದ ಇನ್ನೂ ನಾಲ್ವರನ್ನು ದಾವಣಗೆರೆಯ ಆಸ್ಪತ್ರೆಗೆ ದಾಖಲಿಸಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾಗಿದೆ ಎನ್ನಲಾಗಿದೆ.

ನಿನ್ನೆ ರಾತ್ರಿ ಜೋಳದ ಮುದ್ದಿ, ಕಾಳು ಸಾರು ಊಟ ಮಾಡಿದ್ದ ಚಿತ್ತಪ್ಪ ಕುಟುಂಬದ ಒಟ್ಟು 8 ಮಂದಿಗೆ ವಾಂತಿ ಭೇದಿಯಾಗಿದೆ. ಕೂಡಲೇ ಇವರೆಲ್ಲರನ್ನೂ ದಾವಣಗೆರೆ ಜಿಲ್ಲಾಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ನಾಕಲ್ವರು ಚಿಕಿತ್ಸೆ ಫಲಕಾರಿಯಾಗದೆ ಸಾವನ್ನಪ್ಪಿದ್ದು, ಇನ್ನೂ ನಾಲ್ವರಿಗೆ ಚಿಕಿತ್ಸೆ ಮುಂದುವರೆದಿದೆ.