ಶಿರಸಿಯ ಗೌರಿ ನಾಯ್ಕ ಅವರು ಕುಂಭಮೇಳಕ್ಕೆ ಹೋಗದೆ, ತಮ್ಮ ಮನೆಯಲ್ಲಿ 30 ಅಡಿ ಆಳದ ಬಾವಿ ತೋಡಿ ನೀರು ಕಂಡುಕೊಂಡಿದ್ದಾರೆ. ಎರಡು ತಿಂಗಳ ಸತತ ಪರಿಶ್ರಮದ ಫಲವಾಗಿ ಬಾವಿಯಿಂದ ನೀರು ಬಂದಿದ್ದು, ಕಳೆದ ವರ್ಷ ಅಂಗನವಾಡಿ ಕೇಂದ್ರದಲ್ಲಿ ಬಾವಿ ತೋಡಿದ್ದಕ್ಕೆ ವಿವಾದಕ್ಕೀಡಾಗಿದ್ದರು.

ಕಾರವಾರ : ಉತ್ತರಪ್ರದೇಶದ ಪ್ರಯಾಗರಾಜ್‌ನಲ್ಲಿ ನಡೆಯುತ್ತಿರುವ ಕುಂಭಮೇಳಕ್ಕೆ ಹೋಗಲಾಗಿಲ್ಲ ಎಂದು ಶಿರಸಿಯ ಗೌರಿ ನಾಯ್ಕ ತಮ್ಮ ಮನೆಯ ಆವರಣದಲ್ಲಿ ಮತ್ತೊಂದು ಬಾವಿ ತೋಡಿ ಗಂಗೆಯನ್ನು ಕಾಣಿಸುವಲ್ಲಿ ಯಶಸ್ವಿಯಾಗಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಶಿರಸಿಯ ಗಣೇಶನಗರದ ಜಲಸಾಧಕಿ 56 ವರ್ಷದ ಗೌರಿ ನಾಯ್ಕ, ಏಕಾಂಗಿಯಾಗಿ 30 ಅಡಿ ಆಳದ ಬಾವಿ ತೆಗೆದಿದ್ದಾರೆ. ಸತತ ಎರಡು ತಿಂಗಳ ಪ್ರಯತ್ನದ ತರುವಾಯ ಬಾವಿ ಸಂಪೂರ್ಣಗೊಂಡಿದ್ದು, ನೀರು ಬಂದಿದೆ. ‘ನಂಗೆ ಮಹಾಕುಂಭಮೇಳಕ್ಕೆ ಹೋಗಲು ಆಗುವುದಿಲ್ಲ. ಆದರೆ, ನಾನು ಈಗ ತೆಗೆದ ಬಾವಿಯಲ್ಲೇ ಗಂಗೆಯನ್ನು ನೋಡಿ ಖುಷಿಪಟ್ಟಿದ್ದೇನೆ. ನಾನು ಬಾವಿ ಕೆಲಸಕ್ಕೆ ಕೈ ಹಾಕಿದಲ್ಲೆಲ್ಲಾ ಗಂಗೆ ಸಿಕ್ಕಿದೆ. ಇದೇ ನನ್ನ ಪುಣ್ಯ’ ಎನ್ನುತ್ತಾರೆ ಗೌರಿ ನಾಯ್ಕ.

ಇದನ್ನೂ ಓದಿ: ಬಾವಿ ತೋಡುವ ಕೆಲಸವನ್ನು ಕೈಬಿಡಿ: ಗೌರಿ ನಾಯ್ಕ್ ಅವರಿಗೆ ಮನವಿ ಮಾಡಿದ ಸಚಿವ ಮಂಕಾಳು ವೈದ್ಯ!

ಕಳೆದ ವರ್ಷ ಶಿರಸಿಯ ಗಣೇಶನಗರದ ಅಂಗನವಾಡಿ ಕೇಂದ್ರದ ಆವರಣದಲ್ಲಿ ಮಕ್ಕಳ ಕುಡಿಯುವ ನೀರಿಗಾಗಿ ಅವರು ಬಾವಿ ತೆಗೆದಿದ್ದರು. ಅದು ತೀವ್ರ ವಿವಾದಕ್ಕೆ ಈಡಾಗಿತ್ತು. ಎರಡು ಬಾರಿ ಅದನ್ನು ಸ್ಥಗಿತಗೊಳಿಸಲು ಅಧಿಕಾರಿಗಳು ಸೂಚಿಸಿದ್ದರು. ಕೊನೆಗೂ ಗೌರಿ ಅವರ ಹಠ ಗೆದ್ದಿತ್ತು. ಶಾಲೆಯ ಮಕ್ಕಳಿಗೆ ಬಾವಿಯ ಮೂಲಕ ನೀರು ಕೊಡುವಲ್ಲಿ ಯಶಸ್ವಿಯಾಗಿದ್ದರು. ಶಿರಸಿ: ಅಂಗನವಾಡಿ ಮಕ್ಕಳಿಗೆ ಬಾವಿ ತೋಡುತ್ತಿರುವ ಮಹಿಳೆ