ಅನಿಲ ಸಿಲಿಂಡರ್‌ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಅನಿಲ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಬೆಂಗಳೂರು : ಅನಿಲ ಸಿಲಿಂಡರ್‌ ಕೊರತೆಗೆ ಸಂಬಂಧಿಸಿದಂತೆ ಮುಖ್ಯ ಕಾರ್ಯದರ್ಶಿಗಳ ನೇತೃತ್ವದಲ್ಲಿ ಸೋಮವಾರ ಅನಿಲ ಕಂಪನಿಗಳ ಜೊತೆ ಸಭೆ ನಡೆಸಲಾಗುತ್ತದೆ ಎಂದು ಆಹಾರ ಸಚಿವ ಕೆ.ಎಚ್‌.ಮುನಿಯಪ್ಪ ಸ್ಪಷ್ಟಪಡಿಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಗ್ಯಾಸ್‌ ಕಂಪನಿಗಳ ಜೊತೆ ಸಭೆ

ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸೋಮವಾರ ಸಂಜೆ 4 ಗಂಟೆಗೆ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌ ಅವರ ನೇತೃತ್ವದಲ್ಲಿ ಗ್ಯಾಸ್‌ ಕಂಪನಿಗಳ ಜೊತೆ ಸಭೆ ನಡೆಯಲಿದೆ. ಹೋಟೆಲ್‌ಗಳಿಗೆ ಸ್ವಲ್ಪ ಸಿಲಿಂಡರ್‌ ನೀಡುವ ಬಗ್ಗೆ ಮಾತನಾಡಲಾಗುವುದು.

ಅನಿಲ ತುಂಬಿದ ಎರಡು ಹಡಗುಗಳು ದೇಶಕ್ಕೆ

ಅನಿಲ ತುಂಬಿದ ಎರಡು ಹಡಗುಗಳು ದೇಶಕ್ಕೆ ಆಗಮಿಸಿರುವುದರಿಂದ ಅನುಕೂಲ ಆಗುತ್ತದೆ ಎಂದು ಭಾವಿಸಿದ್ದೇವೆ. ಇನ್ನೂ ಯುದ್ಧ ನಿಂತಿಲ್ಲ. ಮಿತವ್ಯಯವಾಗಿ ಗ್ಯಾಸ್‌ ಬಳಸಬೇಕು ಎಂದು ಮನವಿ ಮಾಡಿದರು.