Asianet Suvarna News Asianet Suvarna News

ಕುಮಾರಸ್ವಾಮಿ V/s ರಾಜ್ಯ ಸರ್ಕಾರ ಗಣಿಗಾರಿಗೆ ಸಂಘರ್ಷ?

ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕಾರದ ನಂತರ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್)ಯ ಸಭೆ ನಡೆಸಿ ದೇವ ದಾರಿ ಅರಣ್ಯದ 401.57 ಹೆಕ್ಟೇರ್‌ನಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ನಡೆಸುವುದಕ್ಕೆ ಕುಮಾರ ಸ್ವಾಮಿ ಅನುಮೋದನೆ ನೀಡಿದ್ದರು. ಆದರೆ, ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಮೊದಲು ಸಹಿ ಹಾಕಿದ್ದ ಕಡತದ ಯೋಜನೆಗೆ ರಾಜ್ಯ ಅರಣ್ಯ ಇಲಾಖೆ ತಡೆಯೊಡ್ಡಿದೆ.

Government of Karnataka Stoped Mining the Approval Given to Union Minister HD Kumaraswamy grg
Author
First Published Jun 23, 2024, 4:29 AM IST | Last Updated Jun 23, 2024, 4:29 AM IST

ಬೆಂಗಳೂರು(ಜೂ.23):  ಬಳ್ಳಾರಿ ಜಿಲ್ಲೆ ಸಂಡೂರಿನ ದೇವದಾರಿ ಅರಣ್ಯ ದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಯೋಜನೆ ವಿಚಾರವೀಗ ರಾಜ್ಯ ಸರ್ಕಾರ ಹಾಗೂ ಕೇಂದ್ರ ಉಕ್ಕು ಸಚಿವ ಎಚ್.ಡಿ.ಕುಮಾರಸ್ವಾಮಿ ನಡುವಿನ ಸಂಘರ್ಷಕ್ಕೆ ಕಾರಣವಾಗಿದ್ದು, ಕುಮಾರಸ್ವಾಮಿ ಸಚಿವರಾದ ನಂತರ ಗಣಿಗಾರಿಕೆಗೆ ನೀಡಿದ್ದ ಅನುಮೋದನೆಗೆ ರಾಜ್ಯ ತಡೆಯೊಡ್ಡಿದೆ.

ಕೇಂದ್ರ ಉಕ್ಕು ಸಚಿವರಾಗಿ ಅಧಿಕಾರ ಸ್ವೀಕಾರದ ನಂತರ ಕುದುರೆಮುಖ ಕಬ್ಬಿಣ ಅದಿರು ಸಂಸ್ಥೆ (ಕೆಐಒಸಿಎಲ್)ಯ ಸಭೆ ನಡೆಸಿ ದೇವ ದಾರಿ ಅರಣ್ಯದ 401.57 ಹೆಕ್ಟೇರ್‌ನಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ನಡೆಸುವುದಕ್ಕೆ ಕುಮಾರ ಸ್ವಾಮಿ ಅನುಮೋದನೆ ನೀಡಿದ್ದರು. ಆದರೆ, ಕುಮಾರಸ್ವಾಮಿ ಕೇಂದ್ರ ಸಚಿವರಾಗಿ ಮೊದಲು ಸಹಿ ಹಾಕಿದ್ದ ಕಡತದ ಯೋಜನೆಗೆ ರಾಜ್ಯ ಅರಣ್ಯ ಇಲಾಖೆ ತಡೆಯೊಡ್ಡಿದೆ.

ಬಳ್ಳಾರಿಯ ಗಣಿಗಾರಿಕೆ ಯೋಜನೆಗೆ ಕೇಂದ್ರ ಸಚಿವ ಕುಮಾರಸ್ವಾಮಿ ಸಹಿ: ಕರ್ನಾಟಕಕ್ಕೆ ಸಂಬಂಧಿಸಿದ ಮೊದಲ ಕಡತಕ್ಕೆ ಸೈನ್‌..!

ರಾಜ್ಯ ಸರ್ಕಾರದ ತಡೆಗೆ ಕಾರಣ: ಕೆಐಒಸಿಎಲ್ ಈ ಹಿಂದೆ ಕುದುರೆಮುಖ ರಾಷ್ಟ್ರೀಯ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ನಡೆಸಿದ ಸಂದರ್ಭದಲ್ಲಿ ಹಲವು ಲೋಪಗಳನ್ನು ಎಸಗಿದೆ. ಅಲ್ಲದೆ, ಅರಣ್ಯ ಕಾಯ್ದೆಯನ್ನು ಉಲ್ಲಂಘಿಸಿದೆ. ಈ ಕಾರಣಕ್ಕಾಗಿ ಕೇಂದ್ರ ಉನ್ನತಾಧಿಕಾರ ಸಮಿತಿ (ಸಿಇಸಿ) ನಿಗದಿತ ಕಾಲಮಿತಿಯೊಳಗೆ ಅರಣ್ಯ ಅಭಿವೃದ್ಧಿ ಸೇರಿದಂತೆ ಇನ್ನಿತರ ಕ್ರಮಗಳನ್ನು ಕೈಗೊಳ್ಳುವಂತೆ ಕೆಐಒಸಿಎಲ್‌ಗೆ ನಿರ್ದೇಶಿಸಿತ್ತು. ಆದರೆ, ಕೆಐಒಸಿಎಲ್ ನಿರ್ದೇಶನಗಳನ್ನು ಜಾರಿ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ನಿರ್ದೇಶನಗಳನ್ನು ಅನುಷ್ಠಾನಗೊಳಿಸುವವರಿಗೆ ದೇವದಾರಿ ಬೆಟ್ಟ ಪ್ರದೇಶದಲ್ಲಿ ಗಣಿಗಾರಿಕೆಗಾಗಿ ನೀಡಲಿರುವ ಅರಣ್ಯ ಭೂಮಿಯನ್ನು ಕೆಐಒಸಿಎಲ್‌ಗೆ ಹಸ್ತಾಂತರಿಸಬಾರದು ಹಾಗೂ ಅರಣ್ಯ ತೀರುವಳಿ ಗುತ್ತಿಗೆ ಪತ್ರಕ್ಕೆ ಅಧಿಕಾರಿಗಳು ಸಹಿ ಹಾಕದಿರುವಂತೆ ಅರಣ್ಯ ಸಚಿವ ಈಶ್ವರ್ ಖಂಡ್ರೆ ನಿರ್ದೇಶಿಸಿದ್ದಾರೆ.

ಎಚ್‌ಡಿಕೆ ಅನುಮತಿಸಿದಮೊದಲ ಯೋಜನೆ: ಉಕ್ಕು ಸಚಿವರಾಗಿ ಅಧಿಕಾರ ಸ್ವೀಕರಿಸಿದ ನಂತರ ಕೆಐಒಸಿಎಲ್ ಅಧಿಕಾರಿಗಳೊಂದಿಗೆ ಸಭೆ ವೆ ನಡೆಸಿದ್ದ ಎಚ್.ಡಿ.ಕುಮಾರ ಸ್ವಾಮಿ, ದೇವದಾರಿ ಪ್ರದೇಶದಲ್ಲಿ ಕಬ್ಬಿಣ ಅದಿರು ಗಣಿಗಾರಿಕೆ ಕುರಿತು ವಿಸ್ತ್ರತ ಚರ್ಚೆ ನಡೆಸಿದ್ದರು. ರಾಜ್ಯ ಸರ್ಕಾರ ಅರಣ್ಯ ಪ್ರದೇಶಹಸ್ತಾಂತರಕ್ಕೆ ಅನುಮತಿಸಿರುವ ಕಾರಣ ಗಣಿಗಾರಿಕೆ ಆರಂಭಿಸುವಂತೆ ಸೂಚಿಸಿದ್ದರು. ಜತೆಗೆ ಅದಕ್ಕೆ ಸಂಬಂಧಿಸಿದ ಕಡತಕ್ಕೆ ಸಹಿ ಹಾಕಿದ್ದರು. ಅವರು ಉಕ್ಕು ಸಚಿವರಾದ ನಂತರ ಅನುಮತಿಸಿದ ಮೊದಲ ಯೋಜನೆ ಇದಾಗಿತ್ತು.

ಇಂದಿನಿಂದ ಕರ್ನಾಟಕ-ಆಂಧ್ರಪ್ರದೇಶ ಗಡಿ ಪ್ರದೇಶದಲ್ಲಿ ಗಣಿ ಸರ್ವೆ ಶುರು: ಕಾರಣವೇನು?

ಪರಿಸರವಾದಿಗಳಿಂದ ವಿರೋಧ:

ಎಚ್‌.ಡಿ.ಕುಮಾರ ಸ್ವಾಮಿ ನಿರ್ಧಾರಕ್ಕೆ ಪರಿಸರವಾದಿಗಳಿಂದ ಭಾರೀ ವಿರೋಧ ವ್ಯಕ್ತವಾಗಿತ್ತು. ಆದರೆ, ಅದಕ್ಕೆ ಸಮಜಾಯಿಷಿ ನೀಡಿದ್ದ ಎಚ್.ಡಿ.ಕುಮಾರಸ್ವಾಮಿ ಒಮ್ಮೆಲೇ ಎಲ್ಲ ಅರಣ್ಯ ಪ್ರದೇಶದಲ್ಲಿ ಗಣಿಗಾರಿಕೆ ಆರಂಭವಾಗುವುದಿಲ್ಲ, ಬದಲಿಗೆ ಅದಿರಿನ ಪ್ರಮಾಣ ನೋಡಿಕೊಂಡು ಗಣಿಗಾರಿಕೆ ಮಾಡಲಾಗುವುದು ಹಾಗೂ ಅರಣ್ಯ ನಾಶದ ಬದಲಾಗಿ ಬೇರೆ ಪ್ರದೇಶದಲ್ಲಿ ಅರಣ್ಯ ಬೆಳೆಸಲಾಗುವುದು ಎಂದು ಹೇಳಿದ್ದರು.

ಹೊಸ ಸಂಘರ್ಷ?

ಗಣಿಗಾರಿಕೆಗೆ ತಡೆ ನೀಡಿರುವ ರಾಜ್ಯ ಸರ್ಕಾ ರದ ನಿರ್ಧಾರವು ಎಚ್.ಡಿ.ಕುಮಾರಸ್ವಾಮಿ ಅವರ ಅನುಮೋದನೆಗೆ ವಿರುದ್ಧವಾಗಿದೆ. ಹೀಗಾಗಿ ರಾಜ್ಯ ಸರ್ಕಾರ ಮತ್ತು ಕುಮಾರ ಸ್ವಾಮಿ ನಡುವೆ ಮತ್ತೊಂದು ಸಂಘರ್ಷಕ್ಕೆ ದಾರಿ ಮಾಡಿ ಕೊಡುವ ಸಾಧ್ಯತೆಗಳಿವೆ.

Latest Videos
Follow Us:
Download App:
  • android
  • ios