Asianet Suvarna News Asianet Suvarna News

ಬೆಳಗಾವಿ: ಈದ್‌ ಮೆರಣಿಗೆಯಲ್ಲಿ ಹರ ಹರಮಹಾದೇವ, ಅಲ್ಲಾಹು ಅಕ್ಬರ್‌ ಘೋಷಣೆ!

ಬೆಳಗಾವಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಹರ ಹರ ಮಹಾದೇವ ಘೋಷಣೆ ಕೇಳುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲಾಹು ಅಕ್ಟರ್‌ ಎಂದು ಪ್ರತಿಯಾಗಿ ಘೋಷಣೆ ಕೂಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

Harahar Mahadeva Allah Hu Akbar raised slogans during Eid Milad at belagavi rav
Author
First Published Sep 23, 2024, 10:08 AM IST | Last Updated Sep 23, 2024, 10:08 AM IST

ಬೆಳಗಾವಿ (ಸೆ.23): ಬೆಳಗಾವಿಯಲ್ಲಿ ಈದ್‌ ಮಿಲಾದ್‌ ಮೆರವಣಿಗೆ ವೇಳೆ ಹರ ಹರ ಮಹಾದೇವ ಘೋಷಣೆ ಕೇಳುತ್ತಿದ್ದಂತೆಯೇ ಮುಸ್ಲಿಂ ಯುವಕರು ಅಲ್ಲಾಹು ಅಕ್ಟರ್‌ ಎಂದು ಪ್ರತಿಯಾಗಿ ಘೋಷಣೆ ಕೂಗಿದ್ದರಿಂದ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು.

ಬೆಳಗಾವಿಯ ಚನ್ನಮ್ಮ ಪ್ರತಿಮೆಗೆ ಮಾಲಾರ್ಪಣೆಗೆ ಕೂಡಲಸಂಗಮದ ಬಸವಜಯ ಮೃತ್ಯುಂಜಯ ಸ್ವಾಮೀಜಿ ನೇತೃತ್ವದಲ್ಲಿ ವಕೀಲರು ಕಾಲೇಜು ರಸ್ತೆ ಮಾರ್ಗವಾಗಿ ತೆರಳುತ್ತಿದ್ದರು. ಈ ವೇಳೆ ಈದ್‌ ಮಿಲಾದ್ ಮೆರವಣಿಗೆಯಲ್ಲಿ ಟಿಪ್ಪು ಸುಲ್ತಾನ ಫೋಟೋ ಪ್ರದರ್ಶಿಸಿದರು. ಆಗ ವಕೀಲರು ಹರ ಹರ ಮಹಾದೇವ ಘೋಷಣೆ ಕೂಗಿದರು. ಇದಕ್ಕೆ ಪ್ರತಿಯಾಗಿ ಮೆರವಣಿಗೆಯಲ್ಲಿದ್ದ ಮುಸ್ಲಿಂ ಯುವಕರು ಅಲ್ಲಾ ಹು ಅಕ್ಬರ್ ಎಂದು ಘೋಷಣೆ ಕೂಗಿದರು. ಇದರಿಂದಾಗಿ ಕೆಲ ಕಾಲ ಬಿಗುವಿನ ವಾತಾವರಣ ನಿರ್ಮಾಣವಾಗಿತ್ತು. ಸ್ಥಳದಲ್ಲಿದ್ದ ಪೊಲೀಸರು ಮುಸ್ಲಿಂ ಯುವಕರನ್ನು ಸಮಾಧಾನಗೊಳಿಸಿ ಅಲ್ಲಿಂದ ಮೆರ‍ವಣಿಗೆಯನ್ನು ಮುಂದೆ ಸಾಗಿಸಿದರು.

 

ಗಣೇಶೋತ್ಸವದಲ್ಲಿ 'ಡಿಜೆ'ಗೆ ಅವಕಾಶ ನಿರಾಕರಣೆ ಹಿಂದೂ ಸಂಘಟನೆಗಳಿಂದ ಪ್ರತಿಭಟನೆ

ಪಂಚಮಸಾಲಿ ವಕೀಲರ ಸಮಾವೇಶದ ನಿರ್ಣಯ:2ಎ ಮೀಸಲಾತಿಗೆ ಆಗ್ರಹಿಸಿ ಪಂಚಮಸಾಲಿ ಸಮಾಜದಿಂದ ಏಳನೇ ಹಂತದ ಹೋರಾಟಕ್ಕೆ ರಾಜ್ಯ ಪಂಚಮಸಾಲಿ ವಕೀಲರ ಮಹಾಪರಿಷತ್‌ ಸಮಾವೇಶದಲ್ಲಿ ನಿರ್ಣಯಗೊಳ್ಳಲಾಗಿದೆ. ಕೂಡಲಸಂಗಮ ಪಂಚಮಸಾಲಿ ಪೀಠದ ಬಸವಜಯ ಮೃತ್ಯುಂಜಯಸ್ವಾಮೀಜಿ ಅವರು ಸಮಾವೇಶದ ನಿರ್ಣಯಗಳನ್ನು ಘೋಷಿಸಿದರು. 

ಬೆಂಕಿ ಹಚ್ಚೋದು ಬಿಟ್ರೆ ಅವನಿಗೆ ಏನೂ ಗೊತ್ತಿಲ್ಲ..' ಪ್ರಮೋದ್ ಮುತಾಲಿಕ್ ವಿರುದ್ಧ ಏಕವಚನದಲ್ಲಿ ಹರಿಹಾಯ್ದ ಶಾಸಕ ಅಬ್ಬಯ್ಯ!

ಹಿಂದುಳಿದ ‌ಆಯೋಗದಿಂದ ಪೂರ್ಣಪ್ರಮಾಣದ ‌ವರದಿ ಪಡೆದು 2ಎ ಮೀಸಲಾತಿ ನೀಡಬೇಕು. ಪಂಚಮಸಾಲಿ ‌ಸೇರಿ ಎಲ್ಲ ಲಿಂಗಾಯತರನ್ನು ಕೇಂದ್ರದ ಒಬಿಸಿಗೆ ಸೇರ್ಪಡೆ ಕ್ರಮ ವಹಿಸಬೇಕು. ಸಂಪುಟ ‌ಸಭೆಯಲ್ಲಿ ನಿರ್ಣಯಿಸಿ ಕೇಂದ್ರ ಸರ್ಕಾರಕ್ಕೆ ಈ ನಿಟ್ಟಿನಲ್ಲಿ ‌ಕ್ರಮವಹಿಸಬೇಕು. ಬೆಳಗಾವಿಯಲ್ಲಿ ನಡೆಯುವ ಚಳಿಗಾಲ ಅಧಿವೇಶನದೊಳಗೆ ನಮ್ಮ ಬೇಡಿಕೆ ಈಡೇರಿಸಬೇಕು. ಇಲ್ಲವಾದರೆ ಚಳಿಗಾಲ ಅಧಿವೇಶನದಲ್ಲಿ ಉಗ್ರ ಹೋರಾಟ ಮಾಡುವುದಾಗಿ ಎಚ್ಚರಿಕೆ ನೀಡಿದರು.

Latest Videos
Follow Us:
Download App:
  • android
  • ios