Asianet Suvarna News Asianet Suvarna News

ಬ್ಲ್ಯಾಕ್ ಫಂಗಸ್‌ಗೂ ಔಷಧಿ ಕೊರತೆ: ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ

* ರಾಜ್ಯದಲ್ಲಿ ತೀವ್ರಗೊಳ್ಳುತ್ತಿರುವ ಬ್ಲ್ಯಾಕ್ ಫಂಗಸ್ 
* ಬ್ಲ್ಯಾಕ್ ಫಂಗಸ್  ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆತಂಕ
* ಈ ಬಗ್ಗೆ ಸರ್ಕಾರಕ್ಕೆ ಎಚ್ಚರಿಕೆ ಕೊಟ್ಟ ಕುಮಾರಸ್ವಾಮಿ

HD Kumaraswamy Talks about black fungus In Karnataka rbj
Author
Bengaluru, First Published May 16, 2021, 7:54 PM IST

ಬೆಂಗಳೂರು, (ಮೇ.16): ಕೊರೋನಾ ಆತಂಕದ ಮಧ್ಯೆ ಇದೀಗ ರಾಜ್ಯದಲ್ಲಿ ಬ್ಲ್ಯಾಕ್ ಫಂಗಸ್ ತೀವ್ರಗೊಳ್ಳುತ್ತಿದ್ದು, ಈ ಬಗ್ಗೆ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಆತಂಕ ವ್ಯಕ್ತಪಡಿಸಿದ್ದಾರೆ. 

ಈ ಕುರಿತು ಸಾಮಾಜಿಕ ಜಾಲತಾಣಗಳ ಮೂಲಕ ಆತಂಕ ವ್ಯಕ್ತಪಡಿಸಿದ್ದು, ಜೊತಗೆ ಹಲವು ಅಂಶಗಳ ಬಿಚ್ಚಿಟ್ಟಿದ್ದಾರೆ. ಅಲ್ಲದೇ ಸರ್ಕಾರಕ್ಕೆ ಎಚ್ಚರಿಕೆ ನೀಡಿದ್ದಾರೆ.

'ಬೌರಿಂಗ್ ಆಸ್ಪತ್ರೆಯಲ್ಲಿ ಬ್ಲ್ಯಾಕ್ ಫಂಗಸ್ ಚಿಕಿತ್ಸೆಗೆ ವ್ಯವಸ್ಥೆ'

ಕುಮಾರಸ್ವಾಮಿ ಬರೆದುಕೊಂಡಿದ್ದು ಹೀಗಿದೆ
ಕಪ್ಪು ಶಿಲಿಂಧ್ರದ ಸಮಸ್ಯೆಯು ಪಿಡುಗಾಗಿ, ಮಹಾಮಾರಿಯಾಗಿ ಕಾಡುವ ಆತಂಕವನ್ನು ಜನರ ಮುಂದೊಡ್ಡಿದೆ. ಅದರ ಚಿಕಿತ್ಸೆಗೆ ಅಗತ್ಯವಿರುವ Liposomal Amphotericin B ಔಷಧ ಕೊರತೆಯನ್ನು ಕರ್ನಾಟಕ ಎದುರಿಸುತ್ತಿರುವುದು ಬಹಿರಂಗವಾಗಿದೆ. ರಾಜ್ಯದಲ್ಲಿ ಔಷಧದ 1,050 ವಾಯ್ಲ್‌ಗಳು (ಶೀಶೆ) ಮಾತ್ರ ಇವೆ ಎಂಬ ಆಘಾತಕಾರಿ ಅಂಶವು ಭಯ ಸೃಷ್ಟಿಸಿದೆ.

ಕಪ್ಪು ಶಿಲೀಂಧ್ರ ಸಮಸ್ಯೆ ರಾಜ್ಯದಲ್ಲಿ ಈಗಾಗಲೇ ಗಂಭೀರ ಸ್ವರೂಪದಲ್ಲೇ ಕಾಣಿಸಿಕೊಂಡಿದೆ. ಹಲವರು ಬಲಿಯಾಗಿದ್ದಾರೆ. ಕೋವಿಡ್‌ನಿಂದ ಗುಣವಾಗುವ 400 ಮಂದಿ ಪ್ರತಿ ವಾರ ಈ ಸಮಸ್ಯೆಗೆ ಸಿಲುಕುವ ಸಾಧ್ಯತೆಯನ್ನು ಕೋವಿಡ್‌ ತಾಂತ್ರಿಕ ಸಲಹಾ ಸಮಿತಿ ಸರ್ಕಾರಕ್ಕೆ ತಿಳಿಸಿದೆ. ಹೀಗಿರುವಾಗ ಎದುರಾಗಿರುವ ಔಷಧ ಕೊರತೆ ದುರಂತದ ಮುನ್ಸೂಚನೆ ನೀಡುತ್ತಿದೆ.

Liposomal Amphotericin B ಔಷಧಿಯ 20,000 ವಯಲ್‌ಗಳನ್ನು ಶೀಘ್ರವೇ ಪೂರೈಕೆ ಮಾಡುವಂತೆ ರಾಜ್ಯ ಔಷಧ ಉಗ್ರಾಣ ಕೇಂದ್ರವು ಕೇಂದ್ರ ಸರ್ಕಾರವನ್ನು ಕೋರಿದೆ. ರಾಜ್ಯ ಸರ್ಕಾರ ಕೂಡಲೇ ಕೇಂದ್ರದ ಮೇಲೆ ಒತ್ತಡ ತಂದು ಅಗತ್ಯ ಪ್ರಮಾಣದ ಔಷಧಗಳನ್ನು ತರಿಸಿಕೊಳ್ಳುವುದರತ್ತ ಗಮನಹರಿಸಬೇಕು. ಇಲ್ಲವಾದಲ್ಲಿ ಮತ್ತೊಂದು ಭೀಕರತೆಗೆ ಜನ ಸಿಲುಕುವ ಅಪಾಯವಿದೆ.

ಇದು ಸಂದಿಗ್ಧ ಕಾಲದ ಸೂಕ್ತ ಸಲಹೆ ಎಂದು ಎಲ್ಲರೂ ಭಾವಿಸಿಕೊಳ್ಳಬೇಕು. ಹಲವು ದಿನಗಳಿಂದ ಸರ್ಕಾರಕ್ಕೆ ನಾನು ನೀಡಿದ ಸಲಹೆಗಳನ್ನು ಕೆಲ ಕಿಡಿಗೇಡಿಗಳು 'ರಾಜಕೀಯ'ವೆಂದು ಭಾವಿಸಿದ್ದಾರೆ. ಪಿಡುಗೊಂದು ಕಾಡುವಾಗ 'ಹಿಂದೆಂದೂ ನೋಡಿರದಷ್ಟು ಜನಸ್ತೋಮ' ಸೇರಿಸಿ ರ‍್ಯಾಲಿ ಮಾಡಿದ್ದು, ಜನರನ್ನು ಕಂಡು ಉದ್ಘಾರಿಸಿದ್ದು ನಾವಲ್ಲ ಎಂಬುದು ಅರಿವಲ್ಲಿರಲಿ ಎಂದು ಸರ್ಕಾರಕ್ಕೆ ಚಾಟಿ ಬೀಸಿದರು.

Follow Us:
Download App:
  • android
  • ios