ದೇಶದಲ್ಲಿ ಸಿಎಎ ವಿರೋಧಿಸಿ ಪ್ರತಿಭಟನೆ ನಡೆಯುತ್ತಿದ್ದು ಈ ಪ್ರತಿಭಟನೆಯು ಮಂಗಳೂರಿನಲ್ಲಿ ಹಿಂಸಾರೂಪ ಪಡೆದಿತ್ತು. ಪ್ರತಿಭಟನೆ ವೇಳೆ ನಡೆದ ಹಿಂಸಾಚಾರ ವಿಡಿಯೋ ಬಿಡುಗಡೆಯಾಗಿದ್ದು ಈ ಬಗ್ಗೆ ತನಿಖೆ ನಡೆಯಲಿ ಎಂದು ಮಾಜಿ ಸಿಎಂ ಸಿದ್ದಾರಾಮಯ್ಯ ಹೇಳಿದ್ದಾರೆ. 

ರಾಮನಗರ [ಡಿ.24]: ಮಂಗಳೂರಿನಲ್ಲಿ ಪ್ರತಿಭಟನೆ ವೇಳೆ ನಡೆದ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಪೊಲೀಸರು ವಿಡಿಯೋ ಬಿಡುಗಡೆ ಮಾಡಿದ್ದಾರೆ. ಕಲ್ಲು ತಂದು ಎಸೆಯುವ ವಿಡಿಯೋ ಬಿಡುಗಡೆಯಾಗಿದ್ದು ಈ ಬಗ್ಗೆ ತನಿಖೆ ನಡೆಯಲಿ ಎಂದು ಮಾಜಿ ಸಿಎಂ ಎಚ್.ಡಿ.ಕುಮಾರಸ್ವಾಮಿ ಹೇಳಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ರಾಮನಗರದ ಜನ್ನಪಟ್ಟಣದಲ್ಲಿ ಮಾತನಾಡಿದ ಎಚ್.ಡಿ.ಕುಮಾರಸ್ವಾಮಿ, ಕಲ್ಲುಗಳನ್ನು ತಂದು ಎಸೆದಿರುವ ಈ ದೃಶ್ಯ ಸತ್ಯವೋ ಅಸತ್ಯವೋ ಎನ್ನುವ ಬಗ್ಗೆ ನಡೆಯಲಿ. ಯಾರಾದರೂ ಕಾನೂನು ಬಾಹಿರವಾಗಿ ಗಲಭೆಗೆ ಕಾರಣವಾಗಿದ್ದಲ್ಲಿ ಅವರ ವಿರುದ್ಧ ಕ್ರಮ ಕೈಗೊಳ್ಳಲಿ ಇದು ಸರ್ಕಾರ ಕರ್ತವ್ಯ ಎಂದರು. 

ಈ ಬಗ್ಗೆ ಕ್ರಮ ಕೈಗೊಳ್ಳಲಿ ಎಂದು ನಾನು ಕೂಡ ಒತ್ತಾಯ ಮಾಡುತ್ತೇಮೆ. ಗಲಭೆ ನಡೆಸುವವರಿಗೆ ನನ್ನ ಬೆಂಬಲ ಇಲ್ಲ. ಈ ಬಗ್ಗೆ ಸತ್ಯಾಂಶಗಳು ಹೊರಕ್ಕೆ ಬರಲಿ ಎಂದು ಕುಮಾರಸ್ವಾಮಿ ಹೇಳಿದರು. 

ಮಂಗಳೂರಿನಲ್ಲಿ ನಡೆದ ಹಿಂಸಾಚಾರದ ಬಗೆಗಿನ ಸಮಗ್ರ ಸುದ್ದಿಗಳಿಗೆ ಇಲ್ಲಿ ಕ್ಲಿಕ್ಕಿಸಿ

ಇಂದು ಮಂಗಳೂರು ಹಿಂಸಾಚಾರದ ಬಗ್ಗೆ ವಿಡಿಯೋ ವೈರಲ್ ಮಾಡಿರುವುದು ಏಕೆ. ಅಂದೇ ಯಾಕೆ ವಿಡಿಯೋ ವೈರಲ್ ಮಾಡಲಿಲ್ಲವೇಕೆ. ಈ ಬಗ್ಗೆ ಸಂಶಯವಿದೆ ಎಂದೂ ಕುಮಾರಸ್ವಾಮಿ ಅನುಮಾನ ವ್ಯಕ್ತಪಡಿಸಿದರು. 

ಪ್ರತಿಭಟನಾಕಾರರು ಪೊಲೀಸ್ ಶಸ್ತ್ರಾಸ್ತ್ರ ತುಂಬಿದ್ದ ಕೊಠಡಿಗಳಿಗೆ ನುಗ್ಗಲು ಯತ್ನ ಮಾಡಿದ್ದರು ಎಂದು ಹೇಳಿಕೆ ನೀಡಿದ್ದಾರೆ. ಇನ್ನು ಕಮಿಷನರ್ ಶಸ್ತ್ರಾಸ್ತ್ರ ಮಾರಾಟ ಮಾಡುವ ಅಂಗಡಿ ಪಕ್ಕದಲ್ಲೇ ಒತ್ತು ಎಂದು ಹೇಳಿದ್ದಾರೆ. ಗೊಂದಲದ ವೇಳೆಇಕೆ ನೀಡುತ್ತಿದ್ದಾರೆ. ಇದರ ವಾಸ್ತವತೆಯನ್ನು ಜನರ ಮುಂದೆ ಇಡಬೇಕು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಹೇಳಿದರು. 

ಇವರ ತಪ್ಪುಗಳನ್ನು ಮುಚ್ಚಿ ಹಾಕಲು ಈ ಸರ್ಕಾರ ಏನಾದರೂ ಹುನ್ನಾರ ನಡೆಸಿದರೆ ಅದನ್ನ ಕೆಳಿಕೊಂಡು ಸುಮ್ಮನೆ ಇರಲು ನಾನು ಕಿವಿಗೆ ಹೂ ಮುಡಿದುಕೊಂಡಿಲ್ಲ. ಪೌರತ್ವ ವಿಚಾರ ಒಂದು ಕಡೆ ಇರಲಿ. ಈ ವಿಚಾರದಲ್ಲಿ ರಾಜ್ಯದ ಹಲವು ಕಡೆ ಪ್ರತಿಭಟನೆ ನಡೆದಿವೆ. ಎಲ್ಲಿಯೂ ಗಲಾಟೆ ನಡೆದಿಲ್ಲ. ಆದರೆ ಮಂಗಳೂರಿನಲ್ಲೆ ಇಷ್ಟು ದೊಡ್ಡ ಮಟ್ಟದ ಗಲಾಟೆ ಏಕೆ ನಡೆಯಿತು ಎಂದು ಮಾಜಿ ಸಿಎಂ ಕುಮಾರಸ್ವಾಮಿ ಪ್ರಶ್ನೆ ಮಾಡಿದರು.