Asianet Suvarna News Asianet Suvarna News

ಬ್ರಿಟನ್ ವೈರಸ್ ಸ್ಥಿತಿ-ಗತಿ ಬಗ್ಗೆ ವಿವರಿಸಿದ ಸಚಿವ ಸುಧಾಕರ್...!

ಬ್ರಿಟನ್ ಕೊರೋನಾ ವೈರಸ್ ಇದೀಗ ದೇಶದೆಲ್ಲೆಡೆ ಬೀತಿ ಶುರುವಾಗಿದ್ದು, ಮುಂಜಾಗ್ರತಾ ಕ್ರಮವಾಗಿ ರಾಜ್ಯದಲ್ಲಿ ನೈಟ್  ಕರ್ಫ್ಯೂ ಜಾರಿ ಮಾಡಲಾಗಿದೆ. ಇನ್ನು ಈ ಬಗ್ಗೆ ಆರೋಗ್ಯ ಸಚಿವ ಸುಧಾಕರ್ ಅವರು ಮಾಹಿತಿ ಕೊಟ್ಟಿದ್ದಾರೆ.

Health Minister Dr  Sudhakar talks about UK Coronavirus rbj
Author
Bengaluru, First Published Dec 23, 2020, 2:46 PM IST

ಬೆಂಗಳೂರು, (ಡಿ.23): ಕೊರೋನಾ ರೂಪಾಂತರ ವೈರಸ್ ಆತಂಕದ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಇಂದು (ಬುಧವಾರ) ರಾತ್ರಿಯಿಂದಲೇ ನೈಟ್ ಕರ್ಫ್ಯೂ ಜಾರಿಯಾಗಲಿದೆ. 

"

ರಾತ್ರಿ 10 ಗಂಟೆಯಿಂದ ಬೆಳಗ್ಗೆ 6 ಗಂಟೆವರೆಗೆ ನೈಟ್​ ಕರ್ಫ್ಯೂ ಇರಲಿದೆ ಎಂದು ಮುಖ್ಯಮಂತ್ರಿ ಬಿ ಎಸ್​ ಯಡಿಯೂರಪ್ಪ ಘೋಷಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಜನವರಿ 2ರವರೆಗೂ ರಾತ್ರಿ ಕರ್ಫ್ಯೂ ಇರಲಿದ್ದು, ಅಗತ್ಯ ಸೇವೆಗಳಿಗೆ ಮಾತ್ರ ಅವಕಾಶ ದೊರೆಯಲಿವೆ.

ರಾಜ್ಯದಲ್ಲಿ ನೈಟ್ ಕರ್ಫ್ಯೂ: ರಾತ್ರಿ ಪ್ರಯಾಣಿಕರಿಗೆ ಸವದಿ ವಿಶೇಷ ಮನವಿ

ಸುಧಾಕರ್ ಸುದ್ದಿಗೋಷ್ಠಿಯ ವಿವರಣೆ
ಇಂಗ್ಲೆಂಡ್​​ನಲ್ಲಿ ರೂಪಾಂತರಗೊಂಡ ಹೊಸ ಮಾದರಿ ಕೊರೋನಾ ವೈರಸ್​ ಪತ್ತೆಯಾಗಿರುವ ಹಿನ್ನೆಲೆ ರಾಜ್ಯದಲ್ಲಿ ಏನೆಲ್ಲಾ ಮುನ್ನೆಚ್ಚರಿಕೆ ಕ್ರಮಗಳನ್ನ ಕೈಗೊಳ್ಳಬೇಕು ಎಂಬ ಬಗ್ಗೆ ಇಂದು (ಬುಧವಾರ) ನಿರ್ಧಾರ ಮಾಡಲಾಗುತ್ತದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್​ ಹೇಳಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಚಿವರು, ರೂಪಾಂತರಗೊಂಡ ಹೊಸ ಕೊರೋನಾ ವೈರಸ್​ ಬಗ್ಗೆ ನಿನ್ನೆ ತಾಂತ್ರಿಕ ಸಲಹಾ ಸಮಿತಿ ಸದಸ್ಯರು ಸಭೆ ನಡೆಸಿದ್ದಾರೆ. ಈ ಬಗ್ಗೆ ವರದಿ ನೀಡಲಿದ್ದು, ಅದನ್ನಾಧರಿಸಿ ಮುಂದಿನ ಕ್ರಮ ಕೈಗೊಳ್ಳಲಾಗುತ್ತದೆ ಎಂದರು.

ಅನಾರೋಗ್ಯ ಹಾಗೂ ಸಾವಿನ ವಿಚಾರದಲ್ಲಿ ಯಾರೂ ಆಟ ಆಡಲ್ಲ, ಸದ್ಯ ರಾಜ್ಯಕ್ಕೆ ಬ್ರಿಟನ್​ನಿಂದ ವಾಪಸ್ಸಾಗಿರುವ 138 ಜನರನ್ನೂ ಟ್ರೇಸ್​ ಮಾಡಲಾಗಿದೆ. ಅವರಲ್ಲಿ ಶೇಕಡಾ 70 ರಷ್ಟು ಜನರ ಕೊರೋನಾ ಪರೀಕ್ಷೆಗಳನ್ನು ಮಾಡಲಾಗಿದ್ದು, ಉಳಿದವರಿಗೆ ಇಂದು ಪರೀಕ್ಷೆ ನಡೆಸಲಾಗುತ್ತದೆ. ಅದರಲ್ಲಿ ಶೇಕಡಾ 80- 90 ರಷ್ಟು ಜನಕ್ಕೆ ಕೊರೊನಾ ನೆಗೆಟಿವ್ ವರದಿ​ ಬಂದಿದೆ ಎಂದು ತಿಳಿಸಿದರು.

ಕೇಂದ್ರ ಸರ್ಕಾರದ ಎಚ್ಚರಿಕೆಯಂತೆ ನಾವು ಕ್ರಮಕೈಗೊಂಡಿದ್ದೇವೆ. ಮುಂದೆಯೂ ಎಚ್ಚರಿಕೆ ವಹಿಸಲಾಗುತ್ತದೆ. ಆ ಸೀಕ್ವೆನ್ಸಿಂಗ್​ ಟೆಸ್ಟ್​ ನಿಮಾನ್ಸ್​ನಲ್ಲಿ ನಡೆಸಲಾಗುತ್ತಿದೆ. ಅದಕ್ಕೆ ಸಂಬಂಧಿಸಿದಂತೆ ಈಗಾಗಲೇ ಸೂಚನೆಯನ್ನೂ ನೀಡಿದ್ದೇನೆ. ಈ ವೈರೆಸ್​ ಬಗ್ಗೆ ಯಾರೂ ಆತಂಕ ಪಡುವ ಅಗತ್ಯವಿಲ್ಲ. ನಾನು ಈ ಮೊದಲೇ ಈ ಬಗ್ಗೆ ತಿಳಿಸಿದ್ದೇನೆ. ಇದಕ್ಕೂ ಮುಂಚಿನ ವೈರೆಸ್​ಗೂ ಅಂತದ್ದೇನೂ ದೊಡ್ಡ ವ್ಯತ್ಯಾಸವಿಲ್ಲ. ರೋಗ ವೇಗವಾಗಿ ಹರಡುತ್ತಿದೆ, ಆದರೆ ಅಷ್ಟೊಂದು ತೀವ್ರವಾಗಿಲ್ಲ. ಯುರೋಪ್​ನಲ್ಲೂ ಲಕ್ಷಂತರ ಜನರಿಗೆ ಹರಡಿದೆ ಆದರೆ ಸಾವು ನೋವುಗಳೇನು ಹೆಚ್ಚಾಗಿಲ್ಲ. ಆದ್ದರಿಂದ ಯಾರೂ ಈ ಬಗ್ಗೆ ಹೆಚ್ಚು ಆತಂಕ ಪಡಬೇಕಾಗಿಲ್ಲ ಎಂದು ಮಾಹಿತಿ ನೀಡಿದರು.

ಚೆನ್ನೈಸೇರಿದಂತೆ ನೆರೆಯ ರಾಜ್ಯಗಳಲ್ಲಿ ಹೊಸ ಪ್ರಭೇದದ ಕೊರೊನಾವೈರಸ್ ಕಾಣಿಸಿಕೊಂಡಿರೋ ಬಗ್ಗೆ ಮಾಹಿತಿಗಳು ತಿಳಿದುಬರುತ್ತಿವೆ, ಆದರೆ ಖಚಿತವಾಗಿಲ್ಲ. ಇಂದು ಈ ಸಂಬಂಧ ಸ್ಪಷ್ಟವಾದ ಮಾಹಿತಿ ಪಡೆದು ನಂತರ ಅದು ಖಚಿತವಾದರೆ ಅದಕ್ಕೆ ಅನುಸರಿಸಬೇಕಾದ ಕ್ರಮಗಳನ್ನು ಕೈಗೊಳ್ಳುತ್ತೇನೆ ಎಂದು ಹೇಳಿದರು.
 

Follow Us:
Download App:
  • android
  • ios