ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನಲ್ಲಿ ಖಾಸಗಿ ಶಾಲಾ ಶಿಕ್ಷಕರೊಬ್ಬರು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ. ರಾಜ್ಯದಲ್ಲಿ ಹೃದಯಾಘಾತ ಪ್ರಕರಣಗಳು ಹೆಚ್ಚುತ್ತಿರುವುದು ಆತಂಕಕಾರಿಯಾಗಿದೆ. ಈ ಘಟನೆ ಆರೋಗ್ಯ ತಜ್ಞರಲ್ಲಿ ಚಿಂತೆ ಮೂಡಿಸಿದೆ.

ದಾವಣಗೆರೆ (ಜುಲೈ16): ರಾಜ್ಯಾದ್ಯಂತ ಹೃದಯಾಘಾತ ಪ್ರಕರಣಗಳು ಗಣನೀಯವಾಗಿ ಏರಿಕೆಯಾಗುತ್ತಿರುವ ಬೆನ್ನಲ್ಲೇ, ದಾವಣಗೆರೆ ಜಿಲ್ಲೆಯ ಹೊನ್ನಾಳಿ ತಾಲೂಕಿನ ದುರ್ಗಿಗುಡಿಯಲ್ಲಿ ಮತ್ತೊಂದು ದುರಂತ ಸಂಭವಿಸಿದೆ. 

Add Asianetnews Kannada as a Preferred SourcegooglePreferred

ಹೊನ್ನಾಳಿಯ ಖಾಸಗಿ ಶಾಲೆಯ ದೈಹಿಕ ಶಿಕ್ಷಕ ರವಿಕುಮಾರ್ (42) ಅವರು ಶಾಲಾ ಆವರಣದಲ್ಲಿ ಸಂಜೆ ಕುಸಿದು ಬಿದ್ದು ಹೃದಯಾಘಾತದಿಂದ ಸಾವನ್ನಪ್ಪಿದ್ದಾರೆ.

ಕಳೆದ ಒಂದು ತಿಂಗಳಲ್ಲಿ ರಾಜ್ಯದಲ್ಲಿ ನೂರಾರು ಜನರು, ಯುವಕರು ಮತ್ತು ಮಕ್ಕಳು ಸೇರಿದಂತೆ ಹೃದಯಾಘಾತಕ್ಕೆ ಬಲಿಯಾಗಿದ್ದು, ಈ ಘಟನೆಗಳು ಆತಂಕಕಾರಿ ವಾತಾವರಣ ಸೃಷ್ಟಿಸಿವೆ. ಹಾಸನ, ಮೈಸೂರು, ಬಾಗಲಕೋಟೆ, ರಾಯಚೂರು ಸೇರಿದಂತೆ ಇದೀಗ ದಾವಣಗೆರೆಯಲ್ಲೂ ಹೃದಯಾಘಾತದಿಂದ ಸಾವಿನ ಪ್ರಮಾಣ ಹೆಚ್ಚುತ್ತಿರುವುದು ಆರೋಗ್ಯ ತಜ್ಞರಲ್ಲಿ ಗಂಭೀರ ಚಿಂತೆ ಮೂಡಿಸಿದೆ.