Asianet Suvarna News Asianet Suvarna News

Chikkamagaluru: ಮಲೆನಾಡಿನಲ್ಲಿ ಧಾರಾಕಾರ ಮಳೆ: ಕಾಫಿ ಬೆಳೆಗಾರರಲ್ಲಿ ಹರ್ಷ

ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. 

heavy rain in chikkamagaluru farmers are happy gvd
Author
First Published Apr 11, 2024, 10:08 PM IST

ಚಿಕ್ಕಮಗಳೂರು (ಏ.11): ಕಾಫಿನಾಡು ಚಿಕ್ಕಮಗಳೂರು ಜಿಲ್ಲೆಯ ಮಲೆನಾಡು ಭಾಗ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನಲ್ಲಿ ಸುಮಾರು ಒಂದು ಗಂಟೆಗಳ ಕಾಲ ಧಾರಾಕಾರ ಮಳೆಯಾಗಿದೆ. ಸಂಜೆ 4 ಗಂಟೆ ಸುಮಾರಿಗೆ ಆರಂಭವಾದ ಮಳೆ 5.30ರ ತನಕವೂ ಒಂದೇ ಸಮನೆ ಧಾರಾಕಾರವಾಗಿ ಸುರಿದಿದ್ದು ಮಳೆ ನೀರು ರಸ್ತೆಯಲ್ಲಿ ಹರಿದಿದೆ. ಚಿಕ್ಕಮಗಳೂರು ತಾಲೂಕಿನ ಕೆರೆಮಕ್ಕಿ, ಹಂಗರವಳ್ಳಿ, ಬೈಗೂರು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಲ್ಲೂ ಉತ್ತಮ ಮಳೆಯಾಗಿದೆ.

ಬಿಸಿಲ ಧಗೆಗೆ ಮಲೆನಾಡಿಗರು ಹೈರಾಣು: ಕಾಫಿನಾಡ ಮಲೆನಾಡು ಭಾಗದಲ್ಲೂ ನಿತ್ಯ 30 ರಿಂದ 35 ಡಿಗ್ರಿಯಷ್ಟು ಬಿಸಿಲಿನ ತಾಪಮಾನವಿತ್ತು. ಬಿಸಿಲ ಧಗೆಗೆ ಮಲೆನಾಡಿಗರು ಹೈರಾಣಾಗಿದ್ದರು. ಬಿಸಿಲಿನಿಂದ ಕಂಗೆಟ್ಟಿದ್ದ ಜನರಿಗೆ ವರುಣದೇವ ತಂಪೆರೆದಿದ್ದು ಮಳೆ ಕಂಡು ಮಲೆನಾಡಿಗರ ಮೊಗದಲ್ಲಿ ಮಂದಹಾಸ ಮೂಡಿದೆ. ಮಲೆನಾಡಿಗರು ಕಾಫಿ-ಅಡಿಕೆ-ಮೆಣಸು ಬೆಳೆಯನ್ನ ಉಳಿಸಿಕೊಳ್ಳಲು ಹೋರಾಡುತ್ತಿದ್ದು. ಮಲೆನಾಡಲ್ಲೂ ಬೋರ್‍ವೆಲ್‍ಗಳು ನಿಂತು ಹೋಗಿದ್ದವು. ಬೆಳೆಗಾರರು ಟ್ಯಾಂಕರ್‍ನಲ್ಲಿ ನೀರಾಯಿಸಿಕೊಂಡು ಬೆಳೆ ಉಳಿಸಿಕೊಳ್ಳೋದಕ್ಕೆ ಮುಂದಾಗಿದ್ದರು. 

ಯದುವಂಶದ ಋಣ ತೀರಿಸುವ ಸಮಯ ಬಂದಿದೆ, ಪ್ರಚಾರಕ್ಕೆ ಹೋಗುತ್ತೇನೆ: ಎಚ್.ವಿಶ್ವನಾಥ್

ಸುಮಾರು ಒಂದು ಗಂಟೆ ಧಾರಾಕಾರ ಮಳೆಯಾದ ಪರಿಣಾಮ ಬೆಳೆಗಾರರ ಮೊಗದಲ್ಲಿ ಮಂದಹಾಸ ಮೂಡಿದೆ. ಮಲೆನಾಡ ಕುಗ್ರಾಮಗಳಲ್ಲಿ ಜನ ಕುಡಿಯೋ ನೀರಿಗೂ ಕೂಡ ಹಾಹಾಕಾರ ಅನುಭವಿಸುತ್ತಿದ್ದರು. ನದಿ-ಹಳ್ಳ-ಕೊಳ್ಳ-ಕೆರೆ-ಕಟ್ಟೆಗಳು ನೀರಿಲ್ಲದೆ ಒಣಗಿ ನಿಂತಿವೆ. ಮೂಡಿಗೆರೆಯಂತಹಾ ಮಳೆ ತವರಲ್ಲೂ ಜನ ಕುಡಿಯೋ ನೀರಿಗೆ ಟ್ಯಾಂಕರ್ ಮೊರೆ ಹೋಗಿದ್ದರು. ಇದೀಗ, ಮಲೆನಾಡಲ್ಲಿ ಅಲ್ಲಲ್ಲೇ ಮಳೆಯಾಗಿದ್ದು ಈ ಮಳೆ ಹೀಗೆ ಸುರಿಯಲೆಂದು ಜನ ವರುಣದೇವನಲ್ಲಿ ಬೇಡಿಕೊಂಡಿದ್ದಾರೆ.

Follow Us:
Download App:
  • android
  • ios