Asianet Suvarna News Asianet Suvarna News

ಕರ್ನಾಟಕದಲ್ಲಿ ಮುಂದಿನ 48 ಗಂಟೆಯಲ್ಲಿ ಭಾರೀ ಮಳೆ..!

ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 4 ವರೆಗೆ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ತಿಳಿಸಿದ ಹವಾಮಾನ ಇಲಾಖೆ 

Heavy rain in next 48 hours in Karnataka grg
Author
First Published Jul 31, 2024, 6:00 AM IST | Last Updated Jul 31, 2024, 9:12 AM IST

ಬೆಂಗಳೂರು(ಜು.31):  ರಾಜ್ಯಾದ್ಯಂತ ಮತ್ತೆ ಮುಂಗಾರು ಚುರುಕುಗೊಂಡಿದ್ದು, ಮುಂದಿನ 48 ಗಂಟೆಯಲ್ಲಿ ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ ಹಾಗೂ ಕೊಡಗು ಜಿಲ್ಲೆಯ ವ್ಯಾಪ್ತಿಯಲ್ಲಿ 20 ಸೆಂ.ಮೀಗೂ ಅಧಿಕ ಮಳೆಯಾಗುವ ಲಕ್ಷಣ ಇರುವುದರಿಂದ ಈ ಎಲ್ಲ ಜಿಲ್ಲೆಗಳಿಗೆ ರೆಡ್‌ ಅಲರ್ಟ್‌ ಎಚ್ಚರಿಕೆ ನೀಡಲಾಗಿದೆ.

ಉತ್ತರ ಕನ್ನಡ, ಹಾಸನ ಜಿಲ್ಲೆಗಳಿಗೆ ‘ಆರೆಂಜ್‌ ಅಲರ್ಟ್‌’, ಮೈಸೂರು ಹಾಗೂ ಬೆಳಗಾವಿ ಜಿಲ್ಲೆಗಳಿಗೆ ‘ಯೆಲ್ಲೋ ಅಲರ್ಟ್‌’ ಘೋಷಿಸಲಾಗಿದೆ. ಉಳಿದಂತೆ ರಾಜ್ಯದ ವಿವಿಧ ಜಿಲ್ಲೆಗಳಲ್ಲಿ ಆಗಸ್ಟ್ 4 ವರೆಗೆ ಹೆಚ್ಚಿನ ಪ್ರಮಾಣ ಮಳೆಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ತಿಳಿಸಿದೆ. ಮಂಗಳವಾರ ಬೆಳಗ್ಗೆ 8.30ಕ್ಕೆ ಕೊನೆಗೊಂಡ ವರದಿ ಪ್ರಕಾರ, ಚಿಕ್ಕಮಗಳೂರಿನ ಕಳಸ ಹಾಗೂ ಕೊಡಗಿನ ಭಾಗಮಂಡಲದಲ್ಲಿ ಅತಿ ಹೆಚ್ಚು ತಲಾ 25 ಸೆಂ.ಮೀ ಮಳೆಯಾಗಿದೆ.

ಚಿಕ್ಕಮಗಳೂರು: ಭಾರೀ ಮಳೆ ಮಧ್ಯೆ ಕಾಡಾನೆಗಳ ಕಾಟ, ಕಂಗಾಲಾದ ಮಲೆನಾಡಿಗರು..!

ಕೊಟ್ಟಿಗೆಹಾರ ಹಾಗೂ ಆಗುಂಬೆಯಲ್ಲಿ ತಲಾ 21, ಕಮ್ಮರಡಿ 19, ಧರ್ಮಸ್ಥಳ 17, ಕೊಪ್ಪ 15, ಪೊನ್ನಂಪೇಟೆ 15, ಕ್ಯಾಸಲ್‌ ರಾಕ್‌ 14, ಮೂರ್ನಾಡುವಿನಲ್ಲಿ 13 , ಸುಳ್ಯ, ಮಾಣಿಯಲ್ಲಿ ತಲಾ 11, ಮಂಗಳೂರು, ಜೋಯಿಡಾ, ಬೆಳ್ತಂಗಡಿ ಹಾಗೂ ಜಯಪುರದಲ್ಲಿ ತಲಾ 10 ಸೆಂ.ಮೀ ಮಳೆಯಾಗಿದೆ ಎಂದು ಹವಾಮಾನ ಇಲಾಖೆ ತಿಳಿಸಿದೆ.

ಎಲ್ಲೆಲ್ಲಿ ಭಾರೀ ಮಳೆ

ಉಡುಪಿ, ದಕ್ಷಿಣ ಕನ್ನಡ, ಚಿಕ್ಕಮಗಳೂರು, ಶಿವಮೊಗ್ಗ, ಕೊಡಗು

Latest Videos
Follow Us:
Download App:
  • android
  • ios