Asianet Suvarna News Asianet Suvarna News

ಸಿಎಂ-ಜಿಲ್ಲಾಧಿಕಾರಿ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನದ ಪ್ರಮುಖಾಂಶಗಳು..!

ಕೇಂದ್ರ ಸರ್ಕಾರ ಮೇ.17ರ ವರೆಗೆ ಲಾಕ್‌ಡೌನ್ ವಿಸ್ತರಿಸಿದೆ. ಆದ್ರೆ, ಇತ್ತ ರಾಜ್ಯ ಸರ್ಕಾರ ಆರ್ಥಿಕ ಪುನಶ್ಚೇತನಕ್ಕಾಗಿ ಲಾಕ್‌ಡೌನ್ ಸಡಿಲಿಕೆ ಮಾಡಿದ್ದು, ಈ ಸಂಬಂಧ ಶನಿವಾರ ನಡೆದ ಸಭೆಯಲ್ಲಿ ತೆಗೆದುಕೊಂಡ ತೀರ್ಮಾನಗಳೇನು..? ಪ್ರಮುಖಾಂಶಗಳು ಇಲ್ಲಿವೆ.

Here Is highlights Of Yediyurappa and district commissioners Meeting Ove Lock Down
Author
Bengaluru, First Published May 2, 2020, 2:38 PM IST

ಬೆಂಗಳೂರು, (ಮೇ.೦2): ಲಾಕ್‌ಡೌನ್‌ ಅನ್ನು ಕೇಂದ್ರ ಸರ್ಕಾರ ಮೇ.17ರ ವರೆಗೆ ವಿಸ್ತರಿಸಿದ ಬೆನ್ನಲ್ಲೇ ಇತ್ತ ರಾಜ್ಯ ಸರ್ಕಾರ ಮುಂದೆ ಏನ್ಮಾಡ್ಬೇಕು ಎನ್ನುವ ಬಗ್ಗೆ ಸಿಎಂ ಸಭೆ ನಡೆಸಿದರು. 

ಕೋವಿಡ್-19 ನಿಯಂತ್ರಣ ಹಾಗೂ ಲಾಕ್ ಡೌನ್ ವಿಷಯಗಳ ಕುರಿತು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಶನಿವಾರ ಜಿಲ್ಲಾಧಿಕಾರಿಗಳೊಂದಿಗೆ ವೀಡಿಯೋ ಕಾನ್ಫರೆನ್ಸ್ ನಡೆಸಿ ಚರ್ಚಿಸಿದರು.

ಮದ್ಯ ಬೆನ್ನಲ್ಲೇ KSRTC ಬಸ್ ಸಂಚಾರಕ್ಕೂ ಅನುಮತಿ: ಯಾವಾಗಿನಿಂದ..? 

ಇಂದು (ಶನಿವಾರ) ವೀಡಿಯೊ ಕಾನ್ಫರೆನ್ಸ್‌ನಲ್ಲಿ ವಿಜಯಪುರ, ಬೆಳಗಾವಿ, ಬಾಗಲಕೋಟೆ, ಮೈಸೂರು, ದಕ್ಷಿಣ ಕನ್ನಡ, ಬೆಂಗಳೂರು ನಗರ, ಬೆಂಗಳೂರು ಗ್ರಾಮಾಂತರ, ಕಲಬುರಗಿ ಜಿಲ್ಲೆಗಳ ಜನಪ್ರತಿನಿಧಿಗಳು ಹಾಗೂ ಅಧಿಕಾರಿಗಳೊಂದಿಗೆ ಸಮಾಲೋಚನೆ ನಡೆಸಲಾಯಿತು.

ಸಭೆಯ ಪ್ರಮುಖಾಂಶಗಳು ಇಂತಿವೆ...!

* ಕಂಟೈನ್ಮೆಂಟ್ ಝೋನ್ ಹೊರತುಪಡಿಸಿ ಉಳಿದೆಡೆ ಕೇಂದ್ರ ಸರಕಾರದ ಮಾರ್ಗಸೂಚಿಯಂತೆ ಆರ್ಥಿಕ ಚಟುವಟಿಕೆಗಳನ್ನು ಪ್ರಾರಂಭಿಸುವಂತೆ ಮುಖ್ಯಮಂತ್ರಿ ಸೂಚಿಸಿದರು. 

* ಸಮಾಜ ಕಲ್ಯಾಣ ಇಲಾಖೆಯ ವಿದ್ಯಾರ್ಥಿ ನಿಲಯಗಳಲ್ಲಿ ಆಹಾರ ಧಾನ್ಯಗಳನ್ನು ಸಾರ್ವಜನಿಕರಿಗೆ ಹಂಚಿಕೆ ಮಾಡುವ ಕುರಿತು ಕ್ರಮ ವಹಿಸಲು ಅವರು ನಿರ್ದೇಶಿಸಿದರು.

* ರಾಜ್ಯದ ವಿವಿಧ ಜಿಲ್ಲೆಗಳಿಗೆ ತೆರಳ ಬಯಸಿರುವ ವಲಸೆ ಕಾರ್ಮಿಕರಿಗೆ ಕೆಎಸ್‌ಆರ್‌ಟಿಸಿ ಬಸ್ಸುಗಳಲ್ಲಿ ಒನ್ ವೇ ದರ ಪಾವತಿಸಿ ಪ್ರಯಾಣಿಸಲು ಅವಕಾಶ ಕಲ್ಪಿಸಲು ತೀರ್ಮಾನ.

* ಹೊರ ಜಿಲ್ಲೆಗಳಿಂದ ಆಗಮಿಸಿದವರನ್ನು ಸಾಂಸ್ಥಿಕ ಕ್ವಾರಂಟೈನ್ ಮಾಡಲು ಸೂಚನೆ. 

* ಲಾಕ್ ಡೌನ್ ಸಂದರ್ಭದಲ್ಲಿ ಬೇರೆ ಊರಿನಲ್ಲಿ ಸಿಲುಕಿಕೊಂಡವರು ತಮ್ಮ ಊರಿಗೆ ಅಥವಾ ಕೆಲಸದ ಸ್ಥಳಗಳಿಗೆ ಹಿಂದಿರುಗಲು ಒಂದು ದಿನಕ್ಕೆ, ಒಂದು ಬಾರಿಗೆ ಪ್ರಯಾಣಿಸಲು ಅಂತರ್ ಜಿಲ್ಲಾ ಪ್ರಯಾಣಕ್ಕೆ ಪಾಸ್ ನೀಡಲು ನಿರ್ಧಾರ.

* ನೇಕಾರರ ಸಮಸ್ಯೆಗಳನ್ನು ಪರಿಹರಿಸುವ ಕುರಿತು ಪ್ರತ್ಯೇಕ ಸಭೆ ಕರೆದು ಚರ್ಚಿಸಲಾಗುವುದು ಎಂದು ಮುಖ್ಯಮಂತ್ರಿ ತಿಳಿಸಿದರು.

Follow Us:
Download App:
  • android
  • ios