ನ್ಯಾ.ಎಂ. ನಾಗಪ್ರಸನ್ನ ಅವರ ನ್ಯಾಯಪೀಠದಿಂದ ಆದೇಶ ಹೊರಬೀಳಲಿದೆ. ವಾದ-ಪ್ರತಿವಾದವನ್ನ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನಾಳೆ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಎಚ್‌.ಡಿ. ರೇವಣ್ಣ ಅವರಿಗೆ ಈಗಿನಿಂದಲೇ ತಳಮಳ ಶುರುವಾಗಿದೆ. 

ಬೆಂಗಳೂರು(ಆ.27): ಅತ್ಯಾಚಾರ, ಸಂತ್ರಸ್ತೆಯನ್ನ ಕಿಡ್ನಾಪ್ ಮಾಡಿದ ಆರೋಪದ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಳೆ ಮಾಜಿ ಸಚಿವ ಹೆಚ್.ಡಿ.ರೇವಣ್ಣಗೆ ಬಿಗ್ ಡೇ ಆಗಲಿದೆ. ಹೌದು, ಜಾಮೀನು ರದ್ದುಪಡಿಸುವಂತೆ ಕೋರಿ ಎಸ್ಐಟಿ ಅಧಿಕಾರಿಗಳು ಅರ್ಜಿ ಸಲ್ಲಿಸಿದ್ದರು. 

Add Asianetnews Kannada as a Preferred SourcegooglePreferred

ಅರ್ಜಿ ಸಂಬಂಧ ಹೈಕೋರ್ಟ್ ನಾಳೆ(ಬುಧವಾರ) ಆದೇಶ ಪ್ರಕಟಿಸಲಿದೆ. ಇದೇ ವೇಳೆ ಅಪಹರಣ ಪ್ರಕರಣದ ಇತರೆ ಆರೋಪಿಗಳಾದ ಎಚ್.ಕೆ. ಸುಜಯ್, ಸತೀಶ್ ಬಾಬಣ್ಣ, ರಾಜಗೋಪಾಲ, ಮಾವುಗೌಡ ಅವರ ಜಾಮೀನು ಅರ್ಜಿ ಆದೇಶ ಕೂಡ ಪ್ರಕಟಿಸಲಿದೆ. 

ಪ್ರಜ್ವಲ್‌- ಎಚ್‌.ಡಿ. ರೇವಣ್ಣ ವಿರುದ್ಧ ಜಾರ್ಜ್‌ಶೀಟ್‌: ಮನೆಗೆಲಸದ ಒಬ್ಬಳೇ ಮಹಿಳೆಗೆ ತಂದೆಯಿಂದ ಕಿರುಕುಳ, ಮಗನಿಂದ ರೇಪ್‌!

ನ್ಯಾ.ಎಂ. ನಾಗಪ್ರಸನ್ನ ಅವರ ನ್ಯಾಯಪೀಠದಿಂದ ಆದೇಶ ಹೊರಬೀಳಲಿದೆ. ವಾದ-ಪ್ರತಿವಾದವನ್ನ ಆಲಿಸಿದ ಹೈಕೋರ್ಟ್ ತೀರ್ಪು ಕಾಯ್ದಿರಿಸಿತ್ತು. ನಾಳೆ ಮಧ್ಯಾಹ್ನ 2.30ಕ್ಕೆ ತೀರ್ಪು ಪ್ರಕಟವಾಗಲಿದೆ. ಹೀಗಾಗಿ ಎಚ್‌.ಡಿ. ರೇವಣ್ಣ ಅವರಿಗೆ ಈಗಿನಿಂದಲೇ ತಳಮಳ ಶುರುವಾಗಿದೆ.