ದೇಶದಾದ್ಯಂತ ಕೊರೋನಾ ವೈರಸ್ ಸೋಂಕಿತರ ಸಂಖ್ಯೆ ಹೆಚ್ಚುತ್ತಿರುವ ಹಿನ್ನೆಲೆಯಲ್ಲಿ ಆಯಾ ರಾಜ್ಯಗಳು ಹೈಅಲರ್ಟ್ ಆಗಿದ್ದು, ವೈರಸ್ ವಿರುದ್ಧ ಹೋರಾಡಲು ಪಣತೊಟ್ಟು ನಿಂತಿವೆ. ಅದರಲ್ಲೂ ಕರ್ನಾಟ ಸರ್ಕಾರ ಫುಲ್ ಅಲರ್ಟ್ ಆಗಿದೆ. ಇನ್ನು ಸಿಎಂ ಮಾಡಿದ ಒಂದೇ ಒಂದು ಫೋನ್ ಕಾಲ್‌ಗೆ ಗೃಹ ಸಚಿವ ತಾವೇ ಕಾರು ಚಾಯಿಸಿಕೊಂಡು ಹೋಗಿದ್ದಾರೆ.

ಬೆಂಗಳೂರು,(ಮಾ.22): ರಾಜ್ಯದಲ್ಲಿ ಕೊರೋನಾ ವೈರಸ್ ನಿಯಂತ್ರಣಕ್ಕೆ ರಾಜ್ಯ ಸರ್ಕಾರ ಕಟ್ಟುನಿಟ್ಟಿನ ಕ್ರಮಗೊಳ್ಳುತ್ತಿದ್ದು, ಈ ಬಗ್ಗೆ ಸಿಎಂ ಯಡಿಯೂರಪ್ಪ ಸರಣಿ ಸಭೆಗಳನ್ನ ನಡೆಸಿದ್ದಾರೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

 ಇಂದು (ಭಾನುವಾರ) ಜನತಾ ಕರ್ಫ್ಯೂ ಪಾಲಿಸಿರುವ ಸಿಎಂ ಬಿಎಸ್ ಯಡಿಯೂರಪ್ಪ ಬೆಂಗಳೂರಿನ ಡಾಲರ್ಸ್ ಕಾಲೋನಿಯಲ್ಲಿರುವ ಧವಣಗಿರಿ ನಿವಾಸದಲ್ಲಿ ಕುಳಿತುಕೊಂಡೇ ಸಭೆಗಳನ್ನ ನಡೆಸುತ್ತಿದ್ದಾರೆ.

ಜನತಾ ಕರ್ಫ್ಯೂ: ಮನೆಯಲ್ಲೇ ಉಳಿದ ಸಿಎಂ ಯಡಿಯೂರಪ್ಪ

ಸಿಎಂ ಕರೆಗೆ ಕಾರು ಚಲಾಯಿಸಿಕೊಂಡು ಹೋದ ಸಚಿವ
ಹೌದು...ಮಹಾಮಾರಿ ವೈರಸ್ ತಡೆಗೆ ಕೆಲ ಮುಂಜಾಗ್ರತಾ ಕ್ರಮಕೈಗೊಳ್ಳಲು ಯಡಿಯೂರಪ್ಪ ಕರೆದ ತುರ್ತು ಸಭೆಗೆ ಗೃಹ ಸಚಿವ ಬಸವರಾಜ್ ಬೊಮ್ಮಾಯಿ ಸ್ವತಃ ತಾವೇ ಕಾರು ಚಲಾಯಿಸಿಕೊಂಡು ಸಿಎಂ ಮನೆ ದೌಡಾಯಿಸುರುವುದು ವಿಶೇಷ.

ಗೃಹ ಸಚಿವರು ಅಂದ್ಮೇಲೆ ಅವರಿಗೆ ಎಸ್ಕಾರ್ಟ್, ಗನ್ ಮ್ಯಾನ್, ಪಿಎಗಳು ಮತ್ತು ಕಾರು ಡ್ರೈವರ್ ಇದ್ದೇ ಇರುತ್ತಾರೆ. ಆದ್ರೆ, ಸಿಎಂ ಪೋನ್ ಮಾಡಿದ ಕೂಡಲೇ ಅಂಗರಕ್ಷಕನ್ನ ಬಿಟ್ಟು ಸ್ವಯಂ ಕಾರು ಚಲಾಯಿಸಿಕೊಂಡು ಸಿಎಂ ನಿವಾಸಕ್ಕೆ ತೆರಳಿ ಸಭೆಯಲ್ಲಿ ಪಾಲ್ಗೊಂಡರು.

Scroll to load tweet…

ಇನ್ನು ಈ ಸಭೆಯಲ್ಲಿ ಸಚಿವ ಸುಧಾಕರ, ಸಿಎಸ್ ವಿಜಯ ಭಾಸ್ಕರ್ ಮತ್ತು ಪೋಲಿಸ್ ಮಹಾನಿರ್ದೇಶಕ ಪ್ರವಿಣ್ ಸೂದ್ ಭಾಗಿಯಾಗಿದ್ದರು.