ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್‌, ತಮಗೆ ಓದಲು ಪುಸ್ತಕಗಳ ವ್ಯವಸ್ಥೆ ಮಾಡಿ ಎಂದು ಜೈಲಧಿಕಾರಿಗಳಿಗೆ ಮನವಿ ಮಾಡಿದ್ದರು. ಜೈಲಲ್ಲಿರುವ ಕಾರಣ ಅವರ ಆತ್ಮಬಲ ಕುಸಿದಿದೆ. ಅವರಲ್ಲಿ ಆಧ್ಯಾತ್ಮಿಕ ಬಲ ಬರಲಿ ಎಂದು ಆಶಿಸಿ, ಡಾ.ಮಣ್ಣೂರ ಅವರು ಶ್ರೀ ಸಿದ್ಧಾರೂಢರ ಚರಿತ್ರೆಯ ಪುಸ್ತಕವನ್ನು ಕೊರಿಯರ್‌ ಮೂಲಕ ಕಳುಹಿಸಿದ್ದಾರೆ. 

ಹುಬ್ಬಳ್ಳಿ(ಆ.01):  ಕೊಲೆ ಆರೋಪದಲ್ಲಿ ಜೈಲು ಸೇರಿರುವ ನಟ ದರ್ಶನ್‌ಗೆ ಸಿದ್ಧಾರೂಢ ಅಜ್ಜನ ಚರಿತ್ರೆಯ ಕೃತಿಯನ್ನು ಶ್ರೀಮಠದ ಧರ್ಮದರ್ಶಿ ಡಾ.ಗೋವಿಂದ ಮಣ್ಣೂರ ವೈಯಕ್ತಿಕವಾಗಿ ಕಳುಹಿಸಿಕೊಟ್ಟಿದ್ದಾರೆ. ಅದೀಗ ವೈರಲ್‌ ಆಗಿದೆ.

Add Asianetnews Kannada as a Preferred SourcegooglePreferred

ರೇಣುಕಾಸ್ವಾಮಿ ಕೊಲೆ ಕೇಸ್‌ನಲ್ಲಿ ಪರಪ್ಪನ ಅಗ್ರಹಾರದಲ್ಲಿರುವ ದರ್ಶನ್‌, ತಮಗೆ ಓದಲು ಪುಸ್ತಕಗಳ ವ್ಯವಸ್ಥೆ ಮಾಡಿ ಎಂದು ಜೈಲಧಿಕಾರಿಗಳಿಗೆ ಮನವಿ ಮಾಡಿದ್ದರು. ಜೈಲಲ್ಲಿರುವ ಕಾರಣ ಅವರ ಆತ್ಮಬಲ ಕುಸಿದಿದೆ. ಅವರಲ್ಲಿ ಆಧ್ಯಾತ್ಮಿಕ ಬಲ ಬರಲಿ ಎಂದು ಆಶಿಸಿ, ಡಾ.ಮಣ್ಣೂರ ಅವರು ಶ್ರೀಸಿದ್ಧಾರೂಢರ ಚರಿತ್ರೆಯ ಪುಸ್ತಕವನ್ನು ಕೊರಿಯರ್‌ ಮೂಲಕ ಕಳುಹಿಸಿದ್ದಾರೆ. ಈ ಬಗ್ಗೆ ಕನ್ನಡಪ್ರಭದೊಂದಿಗೆ ಮಾತನಾಡಿದ ಮಣ್ಣೂರ, ದರ್ಶನ್‌ ಅವರ ಆಧ್ಯಾತ್ಮಿಕ ಬಲ ಹೆಚ್ಚಲಿ ಎಂದು ಆಶಿಸಿ ಈ ಪುಸ್ತಕ ವೈಯಕ್ತಿಕವಾಗಿ ಕಳುಹಿಸಿದ್ದೇನೆ ಎಂದರು.

ದರ್ಶನ್‌ ಬಗ್ಗೆ ಸುಳ್ಳು 'ಬಿಲ್ಡಪ್‌' ಕೊಟ್ಟಿದ್ದ ಅಭಿಮಾನಿ ಸಿದ್ಧಾರೂಢಗೆ ಮತ್ತೆ ಜೈಲುವಾಸ?

ನಟ ದರ್ಶನ್‌ ಈ ಹಿಂದೆ ಹುಬ್ಬಳ್ಳಿಯ ಸಿದ್ಧಾರೂಢಮಠಕ್ಕೆ ಭೇಟಿ ನೀಡಿ ಆಶೀರ್ವಾದ ಪಡೆದಿರುವ ಫೋಟೋ ಹಾಗೂ ಪೋಸ್ಟ್ ಮಾಡಿರುವ ಕವರ್ ಈಗ ವೈರಲ್ ಆಗಿದೆ.