ಎಸ್ಐಟಿ ಘೋಷಣೆ ಹಿಂದೆ ನಾನಿಲ್ಲ: ಸಿದ್ದು| ನನ್ನದು ಸಲಹೆ ಅಷ್ಟೇ, ಘೋಷಿಸಿದ್ದು ಸಿಎಂ| ನನ್ನ ಒತ್ತಡವೇ ಕಾರಣ ಎಂಬ ಬಿಜೆಪಿ ಆರೋಪ ಮೂರ್ಖತನ| ಆದಷ್ಟುಬೇಗ ಆಡಿಯೋ ಎಸ್ಐಟಿ ರಚನೆ
ಬೆಂಗಳೂರು[ಫೆ.15]: ಆಪರೇಷನ್ ಕಮಲ ಧ್ವನಿ ಸುರಳಿ ಪ್ರಕರಣದ ತನಿಖೆಯನ್ನು ಎಸ್ಐಟಿಗೆ ವಹಿಸುವುದಾಗಿ ಘೋಷಿಸಿದ್ದು ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿ ಅವರೇ ಹೊರತು ನಾನಲ್ಲ. ಸದನದ ಒಬ್ಬ ಸದಸ್ಯನಾಗಿ ನಾನು ಸಲಹೆ ನೀಡಿದ್ದೇನೆ ಅಷ್ಟೆ. ಎಸ್ಐಟಿ ತನಿಖೆಗೆ ನನ್ನ ಒತ್ತಡವೇ ಕಾರಣ ಎಂಬ ಬಿಜೆಪಿಯ ಆರೋಪ ಮೂರ್ಖತನದ್ದು ಎಂದು ಕಾಂಗ್ರೆಸ್ ಶಾಸಕಾಂಗ ಪಕ್ಷದ ನಾಯಕ ಸಿದ್ದರಾಮಯ್ಯ ಆರೋಪಿಸಿದ್ದಾರೆ.
ವಿಧಾನಸೌಧದಲ್ಲಿ ಗುರುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಎಸ್ಐಟಿ ರಚನೆಗೆ ಸಿದ್ದರಾಮಯ್ಯ ಒತ್ತಡ ಕಾರಣ ಎಂದು ಬಿಜೆಪಿ ನಾಯಕರು ಆರೋಪಿಸುತ್ತಾರೆ. ಆದರೆ, ಸದನದ ಒಬ್ಬ ಸದಸ್ಯನಾಗಿ ನಾನು ಸಲಹೆ ನೀಡಿದ್ದೇನೆ ಅಷ್ಟೇ. ಎಸ್ಐಟಿ ರಚನೆ ಮಾಡುವುದಾಗಿ ಕುಮಾರಸ್ವಾಮಿ ಅವರೇ ಘೋಷಣೆ ಮಾಡಿದ್ದು ಎಂದರು.
ಎಸ್ಐಟಿ ವಿಚಾರದಲ್ಲಿ ಮುಖ್ಯಮಂತ್ರಿ ಅವರು ಸಾಫ್ಟ್ ಆಗಿರುವ ಮಾತುಗಳು ಕೇಳುಬರುತ್ತಿವೆಯಲ್ಲಾ ಎಂಬ ಸುದ್ದಿಗಾರರ ಪ್ರಶ್ನೆಗೆ, ಎಸ್ಐಟಿ ರಚಿಸುವುದಾಗಿ ಘೋಷಿಸಿದವರೆ ಮುಖ್ಯಮಂತ್ರಿಯವರು. ಆ ವಿಚಾರದಲ್ಲಿ ಈಗ ಏಕೆ ಸಾಫ್ಟ್ ಆಗುತ್ತಾರೆ? ಆದಷ್ಟುಬೇಗ ಎಸ್ಐಟಿ ತಂಡ ರಚನೆ ಮಾಡ್ತಾರೆ ಎಂಬ ವಿಶ್ವಾಸವಿದೆ ಎಂದರು.
Read Exclusive COVID-19 Coronavirus News updates, from Karnataka, India and World at Asianet News Kannada.
ವರ್ಚುಯಲ್ ಬೋಟ್ ರೇಸಿಂಗ್ ಗೇಮ್ ಆಡಿ ಮತ್ತು ನಿಮಗೆ ನೀವೇ ಸವಾಲು ಹಾಕಿಕೊಳ್ಳಿ ಈಗಲೇ ಆಡಲು ಕ್ಲಿಕ್ಕಿಸಿ
Last Updated Feb 15, 2019, 9:22 AM IST