ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ರಾಜಕಾರಣದ ಬಗ್ಗೆ ಮಾತನಾಡಿದ್ದು, ತಮಗೆ ರಾಜಕೀಯದಲ್ಲಿ ಯಾವುದೇ ಆಸಕ್ತಿ ಇಲ್ಲ ಎಂದು ಹೇಳಿದ್ದಾರೆ.
ಕಲಬುರಗಿ: ರಾಜಕೀಯಕ್ಕೆ ಬರುವ ಯಾವುದೇ ಆಸಕ್ತಿ ಇಲ್ಲ ಎಂದು ಸ್ಪಷ್ಟಪಡಿಸಿರುವ ಮೈಸೂರು ರಾಜವಂಶಸ್ಥ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್, ರಾಜಕೀಯದ ಹೊರತಾಗಿಯೂ ಸಮಾಜ ಸೇವೆ ಮಾಡಬಹುದು ಎಂದು ಅಭಿಪ್ರಾಯಪಟ್ಟಿದ್ದಾರೆ.
Add Asianetnews Kannada as a Preferred Source

ಕಲಬುರಗಿ ನಗರದಲ್ಲಿ ಮಂಗಳವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಮೈಸೂರು ಅರಮನೆ ಮೂಲಕ ಅನೇಕ ಸಾಮಾಜಿಕ ಕಾರ್ಯಗಳನ್ನು ಮಾಡಲಾಗುತ್ತಿದೆ.
ನನ್ನನ್ನು ಪ್ರವಾಸೋದ್ಯಮ ರಾಯಭಾರಿಯಾಗಿ ಮಾಡುವ ಬಗ್ಗೆ ಚರ್ಚೆ ನಡೆಯುತ್ತಿವೆ ಎಂದರು.
