ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ, ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುವ ಬೆಂಗಳೂರು ಮೆಟ್ರೋ ರೈಲಿನಲ್ಲಿ ಸುರಕ್ಷತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಬೆಂಗಳೂರು (ಮೇ.8) ಭಾರತ ಮತ್ತು ಪಾಕಿಸ್ತಾನದ ನಡುವೆ ಉದ್ವಿಗ್ನ ಪರಿಸ್ಥಿತಿ ನಿರ್ಮಾಣವಾಗಿರುವ ಹಿನ್ನೆಲೆಯಲ್ಲಿ, ಬೆಂಗಳೂರಿನಲ್ಲಿ ಸಾರ್ವಜನಿಕರು ಹೆಚ್ಚಾಗಿ ಸೇರುವ ಸ್ಥಳಗಳಲ್ಲಿ ಕಟ್ಟುನಿಟ್ಟಿನ ಭದ್ರತಾ ಕ್ರಮಗಳನ್ನು ಕೈಗೊಳ್ಳಲಾಗಿದೆ. ವಿಶೇಷವಾಗಿ, ಪ್ರತಿನಿತ್ಯ ಲಕ್ಷಾಂತರ ಜನರು ಪ್ರಯಾಣಿಸುವ ಬೆಂಗಳೂರು ಮೆಟ್ರೋ ರೈಲಿನಲ್ಲಿ ಸುರಕ್ಷತೆಯನ್ನು ಇನ್ನಷ್ಟು ಬಿಗಿಗೊಳಿಸಲಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಎಐ ತಂತ್ರಜ್ಞಾನದೊಂದಿಗೆ ಸುಧಾರಿತ ಭದ್ರತೆ:
ಬೆಂಗಳೂರು ಮೆಟ್ರೋ ರೈಲ್ವೆ ಕಾರ್ಪೊರೇಷನ್ ಲಿಮಿಟೆಡ್ (BMRCL) ಬೈಯಪ್ಪನಹಳ್ಳಿ ಮತ್ತು ಎಂಜಿ ರೋಡ್ ನಡುವಿನ ಆರು ಮೆಟ್ರೋ ನಿಲ್ದಾಣಗಳಲ್ಲಿ ಎಐ ಆಧಾರಿತ ಸುಧಾರಿತ ಸಿಸಿಟಿವಿ ಕ್ಯಾಮರಾಗಳನ್ನು ಅಳವಡಿಸಿದೆ. ಈ ಕ್ಯಾಮರಾಗಳು ನಿಲ್ದಾಣದ ಒಳಗೆ ಮತ್ತು ಸುತ್ತಮುತ್ತಲಿನ ಪ್ರದೇಶಗಳನ್ನು 24/7 ನಿಗಾ ಇಡಲಿದ್ದು, ಎಐ ತಂತ್ರಜ್ಞಾನದ ಸಹಾಯದಿಂದ ಅನುಮಾನಾಸ್ಪದ ಘಟನೆಗಳು ಅಥವಾ ಅಪಾಯಗಳನ್ನು ತಕ್ಷಣ ಗುರುತಿಸಿ, ಪ್ರಯಾಣಿಕರ ಸುರಕ್ಷತೆಯನ್ನು ಖಾತ್ರಿಪಡಿಸಲಿವೆ.

ಆಟೋಮಾಟಿಕ್ ನಂಬರ್ ಪ್ಲೇಟ್ ರೆಕಗ್ನಿಷನ್ (ANPR) ತಂತ್ರಜ್ಞಾನ:
ನಿಲ್ದಾಣಗಳ ಸುತ್ತಮುತ್ತಲಿನ ವಾಹನಗಳ ನಂಬರ್ ಪ್ಲೇಟ್‌ಗಳನ್ನು ಗುರುತಿಸಲು ANPR ತಂತ್ರಜ್ಞಾನವನ್ನು ಬಳಸಲಾಗಿದೆ. ಈ ವ್ಯವಸ್ಥೆಯು ಅನುಮಾನಾಸ್ಪದ ವಾಹನಗಳನ್ನು ತಕ್ಷಣ ಪತ್ತೆಹಚ್ಚಿ, ಭದ್ರತಾ ಸಿಬ್ಬಂದಿಗೆ ಮಾಹಿತಿ ಒದಗಿಸಲಿದೆ.

ಈ ಅತ್ಯಾಧುನಿಕ ನಿಗಾ ವ್ಯವಸ್ಥೆಯನ್ನು ಮೇ 6, 2025 ರಂದೇ ಆರಂಭಿಸಲಾಗಿದೆ. ಕಟ್ಟುನಿಟ್ಟಿನ ಭದ್ರತೆಯೊಂದಿಗೆ ಬೆಂಗಳೂರಿನ ಜನರಿಗೆ ಯಾವುದೇ ಆತಂಕವಿಲ್ಲದೇ ಸುರಕ್ಷಿತ ಪ್ರಯಾಣ ಮಾಡಬಹುದಾಗಿಗದೆ. ಪ್ರಸ್ತುತ ಭಾರತ-ಪಾಕಿಸ್ತಾನದ ನಡುವಿನ ರಾಜಕೀಯ ಒತ್ತಡದಿಂದಾಗಿ, ಸಾರ್ವಜನಿಕರು ಜಾಗರೂಕರಾಗಿರುವಂತೆ ಸೂಚಿಸಲಾಗಿದೆ. ಯಾವುದೇ ಅನುಮಾನಾಸ್ಪದ ಚಟುವಟಿಕೆ ಕಂಡುಬಂದಲ್ಲಿ ತಕ್ಷಣ ಭದ್ರತಾ ಸಿಬ್ಬಂದಿಗೆ ಮಾಹಿತಿ ನೀಡಲು ಕೋರಲಾಗಿದೆ.