ಶಾಸಕರಿಗೆ ಐಪಿಎಲ್‌ ಉಚಿತ ಟಿಕೆಟ್‌ ವಿತರಣೆಗೂ, ಐಪಿಎಲ್‌ ಅಂತಿಮ ಪಂದ್ಯ ಬೆಂಗಳೂರಿನಿಂದ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದು ಡಿಸಿಎಂ ಡಿ.ಕೆ. ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದ್ದು, ಹೆಚ್ಚು ಜನ ಸೇರುತ್ತಾರೆಂಬ ಕಾರಣಕ್ಕೆ ಸ್ಥಳಾಂತರಿಸಲಾಗಿದೆ ಎಂದು ಸ್ಪಷ್ಟನೆ.

ಬೆಂಗಳೂರು (ಮೇ.7): ‘ಶಾಸಕರಿಗೆ ಐಪಿಎಲ್‌ ಉಚಿತ ಟಿಕೆಟ್‌ ವಿತರಣೆಗೂ ಐಪಿಎಲ್‌ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ. ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದ್ದು, ಹೆಚ್ಚು ಜನ ಸೇರುತ್ತಾರೆಂಬ ಉದ್ದೇಶದಿಂದ ಸ್ಥಳಾಂತರಿಸಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.

Add Asianetnews Kannada as a Preferred SourcegooglePreferred

ಬುಧವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಅಹಮದಾಬಾದ್‌ನಲ್ಲಿ ಹೆಚ್ಚು ಜನ ಸೇರುತ್ತಾರೆ ಎಂಬ ಉದ್ದೇಶದಿಂದ ಐಪಿಎಲ್ ಫೈನಲ್ ಪಂದ್ಯವನ್ನು ಸ್ಥಳಾಂತರ ಮಾಡಿರಬೇಕು. ಶಾಸಕರಿಗೆ ಟಿಕೆಟ್ ವಿತರಣೆಗೂ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ ಎಂದರು.

ಶಾಸಕರಿಗೆ ಐಪಿಎಲ್ ಟಿಕೆಟ್ ಬೇಡಿಕೆ ಹಿನ್ನೆಲೆಯಲ್ಲೇ ಸ್ಥಳಾಂತರಿಸಲಾಗಿದೆ ಎಂಬ ವಿಚಾರಕ್ಕೆ ಪ್ರತಿಕ್ರಿಯಿಸಿ, ‘ಬೇರೆ ಕಡೆ ಶೇ. 50ರಷ್ಟು ಟಿಕೆಟ್‌ ಮೀಸಲಿರುತ್ತದೆ’ ಎಂದು ಹೇಳಿದರು.

ಟಿಕೆಟ್ ವಿಚಾರಕ್ಕೆ ಸ್ಥಳಾಂತರ ನಿರ್ಧಾರ ಮಾಡಿದ್ದೇವೆ ಎಂದು ಬಿಸಿಸಿಐ ಹೇಳಿಕೆ ನೀಡಿದೆ ಎಂಬ ಬಗ್ಗೆ ಮಾತನಾಡಿ, ‘ಅವರು ಈ ರೀತಿ ಹೇಳಿಕೆ ನೀಡಲಿ, ನಾನು ಅದಕ್ಕೆ ಸರಿಯಾದ ಉತ್ತರ ಕೊಡುತ್ತೇನೆ’ ಎಂದರು. 

‘ಶಾಸಕರಿಗೆ ಐಪಿಎಲ್‌ ಉಚಿತ ಟಿಕೆಟ್‌ ವಿತರಣೆಗೂ ಐಪಿಎಲ್‌ ಅಂತಿಮ ಪಂದ್ಯ ಸ್ಥಳಾಂತರಕ್ಕೂ ಸಂಬಂಧವಿಲ್ಲ. ಅಹಮದಾಬಾದ್‌ನಲ್ಲಿ ದೊಡ್ಡ ಕ್ರೀಡಾಂಗಣವಿದ್ದು, ಹೆಚ್ಚು ಜನ ಸೇರುತ್ತಾರೆಂಬ ಉದ್ದೇಶದಿಂದ ಸ್ಥಳಾಂತರಿಸಲಾಗಿದೆ’ ಎಂದು ಉಪಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಸ್ಪಷ್ಟನೆ ನೀಡಿದ್ದಾರೆ.