ಪ್ರಿಯಾಂಕಾ ಗಾಂಧಿ ಕಿತ್ತೂರು ಚೆನ್ನಮ್ಮಳ ಕಾಲಿನ ಧೂಳಿಗೂ ಸಮಾ ಅಲ್ಲ, ಖರ್ಗೆ ವಿರುದ್ಧ ಜಯಮೃತ್ಯುಂಜಯಶ್ರೀ ಕಿಡಿ!

ಕಿತ್ತೂರು ರಾಣಿ ಚೆನ್ನಮ್ಮರಿಗೆ ಯಾರನ್ನೂ ಹೋಲಿಸಬಾರದು ಎಂದು ಬಸವ ಜಯಮೃತ್ಯುಂಜಯ ಶ್ರೀಗಳು ಹೇಳಿದ್ದಾರೆ. ಪ್ರಿಯಾಂಕಾ ಗಾಂಧಿಯವರನ್ನು ಚೆನ್ನಮ್ಮರಿಗೆ ಹೋಲಿಸಿದ ಮಲ್ಲಿಕಾರ್ಜುನ ಖರ್ಗೆ ಹೇಳಿಕೆಗೆ ಅವರು ಆಕ್ಷೇಪ ವ್ಯಕ್ತಪಡಿಸಿದರು. ಮೀಸಲಾತಿ ಹೋರಾಟದಲ್ಲಿ ಪೊಲೀಸರ ಲಾಠಿ ಚಾರ್ಜ್ ಬಗ್ಗೆಯೂ ಅವರು ಅಸಮಾಧಾನ ವ್ಯಕ್ತಪಡಿಸಿದರು.

Jaya Mrityunjaya Swamiji outraged against kharge for compare Priyanka Gandhi with kittur chennamma rav

ಗದಗ (ಜ.22): ಯಾರನ್ನೂ ಕಿತ್ತೂರು ರಾಣಿ ಚೆನ್ನಮ್ಮಗೆ ಹೋಲಿಕೆ ಮಾಡಬಾರದು, ಚೆನ್ನಮ್ಮಳ ಕಾಲಿನ ಧೂಳಿಗೂ ಸಹ ಯಾರೂ ಸಮ ಇಲ್ಲ ಎಂದು ಬಸವ ಜಯಮೃತ್ಯುಂಜಯ ಶ್ರೀಗಳು ಆಕ್ರೋಶ ವ್ಯಕ್ತಪಡಿಸಿದರು.

ಇಂದು ಬೆಳಗಾವಿಯಲ್ಲಿ ನಡೆದ 'ಗಾಂಧಿ ಭಾರತ' ಕಾಂಗ್ರೆಸ್ ಸಮಾವೇಶದಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಅವರು ಭಾಷಣದ ವೇಳೆ ಪ್ರಿಯಾಂಕಾ ಗಾಂಧಿಯವರನ್ನ ಕಿತ್ತೂರು ರಾಣಿ ಚೆನ್ನಮ್ಮಳಿಗೆ ಹೋಲಿಕೆ ಮಾಡಿದ್ದರು. ಈ ವಿಚಾರವಾಗಿ ಮಾತನಾಡಿದ ಶ್ರೀಗಳು, ಚೆನ್ನಮ್ಮ ಹಾಗೂ ಬ್ರಿಟಿಷರ ನಡುವೆ ಯುದ್ದದ ರೀತಿ ಆಗಿತ್ತು. ಬ್ರಿಟಿಷರನ್ನ ಹಿಮ್ಮೆಟ್ಟಿಸಿದ ಅಂಥ ವೀರರಾಣಿಗೆ ಯಾರನ್ನೂ ಹೋಲಿಕೆ ಮಾಡಬಾರದು ಎಂದು ಮಲ್ಲಿಕಾರ್ಜು ಖರ್ಗೆ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿದರು.

ಗದಗನಲ್ಲಿ ಪಂಚಮಸಾಲಿ ವೀರ ಬಸವ ರಕ್ಷೆ ಅಭಿಯಾನ ಮುಂದುವರಿದಿದೆ. ಮೀಸಲಾತಿ ಹೋರಾಟದಲ್ಲಿ ಲಾಠಿ ಏಟು ತಿಂದವರ ಮನೆಗೆ ಶ್ರೀಗಳು ಭೇಟಿ ನೀಡಿ ಆತ್ಮಸ್ಥೈರ್ಯ ತುಂಬಿದರು. ಈ ವೇಳೆ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

ಇದನ್ನೂ ಓದಿ: ಪ್ರಿಯಾಂಕಾ ಗಾಂಧಿಯವರನ್ನ ಕಿತ್ತೂರು ರಾಣಿ ಚೆನ್ನಮ್ಮಗೆ ಹೋಲಿಸಿದ್ರೆ ತಪ್ಪೇನು? : ಸಚಿವ ಶಿವರಾಜ ತಂಗಡಗಿ

ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ:

ಸಿಎಂ ಸಿದ್ದರಾಮಯ್ಯ ನಮ್ಮ ಮೀಸಲಾತಿ ಹೋರಾಟ ಸಂವಿಧಾನ ವಿರೋಧಿ ಎಂದಿದ್ದಾರೆ. ಆ ಮೂಲಕ ಪಂಚಮಸಾಲಿ ಸಮುದಾಯವನ್ನು ಹೀಯಾಳಿಸುವ ಕೆಲಸ ಮಾಡಿದ್ದಾರೆ.ಅಧಿವೇಶನದಲ್ಲಿ ಮೀಸಲಾತಿ ನೀಡಲು ಆಗೋದಿಲ್ಲ ಅಂತಿದ್ದಾರೆ. ಹೀಗಾಗಿ 8 ನೇ ಹಂತದ ಹೋರಾಟ ಆರಂಭ ಮಾಡಲಾಗಿದೆ. ಹೋರಾಟದ ವೇಳೆ ಪೊಲೀಸರು ಸರ್ಕಾರದ ಕುಮ್ಮಕ್ಕಿನಿಂದ ಲಾಠಿಚಾರ್ಜ್ ಮಾಡಿದ್ದಾರೆ. ಆದರೆ ನಮ್ಮ ಸಮುದಾಯ ಇದಕ್ಕೆಲ್ಲ ಹೆದರುವುದಿಲ್ಲ. ಲಾಠಿ ಚಾರ್ಜ್ ಒಳಗಾದವರಿಗೆ 'ಪಂಚಮಸಾಲಿ ವೀರ' ಎನ್ನುವ ಬಸವ ರಕ್ಷಣೆ ನೀಡಲಾಗುತ್ತದೆ.ಪ್ರತಿ ವಿಧಾನಸಭಾ ಕ್ಷೇತ್ರದಲ್ಲಿ ಅರಿವು ಮೂಡಿಸುವ ಕೆಲಸ ಮಾಡುತ್ತೇವೆ.ಲಾಠಿ ಚಾರ್ಜ್ ಮಾಡಿದವರಿಗೆ ಯಾವ ರೀತಿ ಅಸಹಕಾರ ನೀಡ್ಬೇಕು ಅಂತಾ ಹೇಳುತ್ತೇವೆ.ನಮ್ಮ ಮನಸ್ಸು ಗೆದ್ದು, ‌ಮೀಸಲಾತಿ ನೀಡುವವರಿಗೆ ಯಾವ ರೀತಿ ಸಹಕಾರ ಕೊಡ್ಬೇಕು.ಪ್ರತಿ ಹಳ್ಳಿಯಲ್ಲಿ ಪ್ರತಿಜ್ಞಾ ಕ್ರಾಂತಿ ಅಭಿಯಾನ  ಮಾಡುತ್ತೇವೆ ಎಂದರು.

ಇದನ್ನೂ ಓದಿ: ಗಾಂಧಿ ಕಂಡ ಭಾರತ ಮಾಡ್ತಿರೋದು ಕಾಂಗ್ರೆಸ್ ಅಲ್ಲ.. ಮೋದಿ! BJP MLC Ravi Kumar on Congress | Suvarna News

ರಾಜ್ಯದಲ್ಲಿ ರಾಜಕೀಯ ಧ್ರುವೀಕರಣ ಆಗುತ್ತದೆ. ನಾವು ಹೊಡೆದವರಿಗೆ ಆಶೀರ್ವಾದ ಮಾಡ್ಬೇಕಾ? ಪ್ರೀತಿ ಮಾಡುವವರಿಗೆ ಆಶೀರ್ವಾದ ಮಾಡ್ಬೇಕಾ ಎನ್ನೋದನ್ನ ಜನ ನಿರ್ಧಾರ ಮಾಡ್ತಾರೆ. ಜನರ ಅಭಿಪ್ರಾಯ ಪಡೆದು ಮುಂದೆ ಒಂದು ನಿರ್ಧಾರಕ್ಕೆ ಬರುತ್ತೇವೆ. ಕಾಂಗ್ರೆಸ್ ಪಕ್ಷದ ಸಚಿವರು ಹಾಗೂ ಶಾಸಕದ ಮೇಲೆ ಜನ ಅಸಮಾಧಾನಗೊಂಡಿದ್ದಾರೆ. 12 ಜನ ಶಾಸಕರ ಪೈಕಿ ಇಬ್ಬರು ಮಾತ್ರ ಮಾತನಾಡಿದ್ದಾರೆ. ಉಳಿದವರು ಯಾರೂ ಮಾತನಾಡಿಲ್ಲ, ಹೀಗಾಗಿ ಜನಾಕ್ರೋಶ ವ್ಯಕ್ತವಾಗಿದೆ. ನಮ್ಮ ಸಮಾಜದವರು ಸಿಎಂ ಆದಾಗ ಯಾವ ಸಮಾಜದ ಮೇಲೆ ಲಾಠಿ ಚಾರ್ಜ್ ಮಾಡಿಲ್ಲ. ಆದರೆ ಸಿದ್ದರಾಮಯ್ಯ ಸರ್ಕಾರ ನಮ್ಮ ಜನಾಂಗದವರ ಮೇಲೆ ಪ್ಲಾನ್ ಮಾಡಿ ಹಲ್ಲೆ ಮಾಡಿದ್ದಾರೆ ಎಂದು ಸಿಎಂ ಸಿದ್ದರಾಮಯ್ಯ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದರು.

Latest Videos
Follow Us:
Download App:
  • android
  • ios