Asianet Suvarna News Asianet Suvarna News

ಬರಿಗಾಲಿನಲ್ಲಿ ತಿರುಪತಿ ಬೆಟ್ಟವೇರಿ ಶ್ರೀನಿವಾಸನ ದರ್ಶನ ಪಡೆದ ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ

ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ  ನಾಯಕರು ರಿಲ್ಯಾಕ್ಸ್ ಮೂಡ್‌ಗೆ ವಿದೇಶಗಳಿಗೆ ಪ್ರಯಾಣಿಸಿದ್ದಾರೆ. ಆದರೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಜಾದ್ ಜೋಶಿ ಮತದಾನ ಮುಗಿದ ಬೆನ್ನಲ್ಲೇ ತಿರುಪತಿಗೆ ದರ್ಶನಕ್ಕೆ ತೆರಳಿದ್ದಾರೆ.

Karnataka assembly election union mister pralhad joshi visit tirupati offered special pooja after assembly election rav
Author
First Published May 11, 2023, 9:50 PM IST

ತಿರುಪತಿ (ಮೇ.11) ಕರ್ನಾಟಕ ರಾಜ್ಯ ವಿಧಾನಸಭಾ ಚುನಾವಣೆ ಮುಗಿದ ಬೆನ್ನಲ್ಲೇ  ನಾಯಕರು ರಿಲ್ಯಾಕ್ಸ್ ಮೂಡ್‌ಗೆ ವಿದೇಶಗಳಿಗೆ ಪ್ರಯಾಣಿಸಿದ್ದಾರೆ. ಆದರೆ ಕೇಂದ್ರ ಸಂಸದೀಯ ವ್ಯವಹಾರಗಳ ಸಚಿವ ಪ್ರಲ್ಜಾದ್ ಜೋಶಿ ಮತದಾನ ಮುಗಿದ ಬೆನ್ನಲ್ಲೇ ತಿರುಪತಿಗೆ ದರ್ಶನಕ್ಕೆ ತೆರಳಿದ್ದಾರೆ.

 ತಿರುಪತಿ ದರ್ಶನ ಪಡೆದ ಜೋಶಿ:

ರಾಜ್ಯದ ವಿಧಾನ ಸಭಾ ಚುನಾವಣೆಯಲ್ಲಿ ಬಿಜೆಪಿ ಪರ ಪ್ರಚಾರ ಕಾರ್ಯದಲ್ಲಿ ಬ್ಯುಸಿಯಾಗಿದ್ದ ಪ್ರಲ್ಹಾದ್ ಜೋಶಿ, ಮತದಾನ ಮುಗಿದ ಬಳಿಕ  ತಿರುಪತಿಗೆ ಪ್ರಯಾಣ ಬೆಳೆಸಿದ್ದರು. ಇಂದು ಬೆಳಗ್ಗೆಯಿಂದ ಬರಿಗಾಲಲ್ಲಿ ತಿರುಪತಿ ಬೆಟ್ಟ(Tirupati tirumala)ವೇರಲು ಆರಂಭಿಸಿದ ಜೋಶಿ(Pralhad joshi),ಕಾಲ್ನಡಿಗೆಯ ಮೂಲಕವೇ ಸಾಗಿ ತಿರುಪತಿ ತಿಮ್ಮಪ್ಪನ ದರ್ಶನ ಪಡೆದರು. 

ಚುನಾವಣೆ ಮುಗಿದ ಬಳಿಕ ಬಹುತೇಕ ರಾಜಕಾರಣಿಗಳು ರಿಲ್ಯಾಕ್ಸ್ ಮೂಡ್ ಮೊರೆಹೋಗಿದ್ರೆ, ಕೇಂದ್ರ ಸಚಿವ ಪ್ರಲ್ಜಾದ್ ಜೋಶಿ ದೇವಸ್ಥಾನಕ್ಕೆ ತೆರಳಿ ತಿರುಪತಿ ದರ್ಶನ ಪಡೆದು ನಿರಾಳರಾದರು. ಕಾಲ್ನಡಿಗೆಯ ಮೂಲಕವೇ ಬೆಟ್ಟವೇರಿ ದೇವರ ದರ್ಶನ ಪಡೆಯುವ ಆಶಯ ಹೊಂದಿದ್ದ ಜೋಶಿ, ಯಶಸ್ವಿಯಾಗಿ ಮೆಟ್ಟಿಲುಗಳನ್ನ ಏರಿ ತಿರುಪತಿಯ ಶ್ರೀನಿವಾಸನ ದರ್ಶನ ಪಡೆದರು.

ಜೋಶಿ 4 ಬಾರಿ ಸಂಸದ, ಮಂತ್ರಿಯಾಗಿದ್ದಾರೆ ರಾಜಕಾರಣ ಬಿಡಲಿ: ಜಗದೀಶ್‌ ಶೆಟ್ಟರ್‌ ಪ್ರಶ್ನೆ

Follow Us:
Download App:
  • android
  • ios