09:48 AM (IST) Jul 31

Karnataka News Live: ಮಾವ ಜೈಲು ಪಾಲು, ಅಳಿಯನ ಕನಸು ಮಣ್ಣು ಪಾಲು..? ದರ್ಶನ್ ಕುಟುಂಬದ ಕುಡಿ ಚಂದು ಸಿನಿಮಾ ಏನಾಯ್ತು? ಈ ಸ್ಟೋರಿ ನೋಡಿ..

ದರ್ಶನ್ ಅಕ್ಕನ‌ ಮಗ ಚಂದು ನಾಯಕನಾಗಿ ಪರಿಚಯಿಸಲು ದರ್ಶನ್ ಸಹೋದರರು ಸಿದ್ದರಾಗಿದ್ರು. ಚಂದು ನಾಯಕನಾಗಿ ನಟಿಸಬೇಕಿದ್ದ ಚಿತ್ರದ ಮುಹೂರ್ತ ಕಳೆದ ವರ್ಷ ಆಗಸ್ಟ್​ನಲ್ಲಿ ಆಗಬೇಕಿತ್ತು. ಅಷ್ಟರಲ್ಲಿ ಕೊಲೆ ಆರೋಪ ದರ್ಶನ್ ಮೇಲೆ ಬಂದು ಬಿಡ್ತು. ಈಗ ಈ ಸಿನಿಮಾ ಗತಿ ಏನು? ಉತ್ತರಕ್ಕೆ ಈ ಸ್ಟೋರಿ ನೋಡಿ..

Read Full Story
08:59 AM (IST) Jul 31

Karnataka News Live: ಕಾವೇರಿ ನೀರು ಬಿಡುಗಡೆಗೆ ನಿರ್ವಹಣಾ ಪ್ರಾಧಿಕಾರದಿಂದಲೂ ಆದೇಶ ಕಾವೇರಿ ಇಕ್ಕಟ್ಟಿನಲ್ಲಿ ಸರ್ಕಾರ - ಮುಂದೇನು?

ತಮಿಳುನಾಡಿಗೆ ನಿತ್ಯ 3500 ಕ್ಯುಸೆಕ್‌ ನೀರು ಬಿಡಬೇಕೆಂಬ ಸಿಡಬ್ಲ್ಯುಆರ್‌ಸಿ ಆದೇಶವನ್ನು ಕಾವೇರಿ ನೀರು ನಿರ್ವಹಣಾ ಪ್ರಾಧಿಕಾರ ಎತ್ತಿಹಿಡಿದಿದೆ. ಮುಂಗಾರು ಮಳೆ ಕೊರತೆಯಿಂದ ಸಂಕಷ್ಟದಲ್ಲಿರುವ ರಾಜ್ಯ ಸರ್ಕಾರ, ಮುಂದಿನ ಕ್ರಮದ ಬಗ್ಗೆ ಚರ್ಚಿಸಲು ಸರ್ವಪಕ್ಷ ಸಭೆ ಕರೆದಿದೆ.
Read Full Story
08:58 AM (IST) Jul 31

Karnataka News Live: ಜನರಿಗೆ ಮತ್ತೆ ಬೆಲೆ ಏರಿಕೆ ಬರೆ..! ಆಗಸ್ಟ್‌ನಿಂದ ಇವುಗಳ ಭಾರೀ ಹೆಚ್ಚಳ.. ಲಿಸ್ಟ್‌ ನೋಡಿ ಗಾಬರಿ ಆಗಬೇಡಿ!

ಸಾಮಾನ್ಯ ಜನರಿಗೆ ಮತ್ತೊಂದು ಶಾಕಿಂಗ್ ಸುದ್ದಿ ಎದುರಾಗಿದೆ. ಆಗಸ್ಟ್ ತಿಂಗಳಿನಿಂದ ನಿಮ್ಮ ಜೇಬಿಗೆ ಕತ್ತರಿ ಬೀಳುವುದು ಖಚಿತವಾಗಿದ್ದು, ಹಲವು ದಿನಬಳಕೆ ಮತ್ತು ಎಲೆಕ್ಟ್ರಾನಿಕ್ಸ್ ವಸ್ತುಗಳ ಬೆಲೆಗಳು ಭಾರಿ ಪ್ರಮಾಣದಲ್ಲಿ ಹೆಚ್ಚಾಗಲಿವೆ. ಹೇರ್ ಆಯಿಲ್, ಟೀ ಪುಡಿ, ಬಟ್ಟೆಗಳು ಹಾಗೂ ಎಲೆಕ್ಟ್ರಾನಿಕ್ ಸರಕುಗಳ ಬೆಲೆಗಳು ಶೀಘ್ರದಲ್ಲೇ ಗಗನಕ್ಕೇರಲಿವೆ.

Read Full Story
08:50 AM (IST) Jul 31

Karnataka News Live: ಯೋಗೇಶ್ ಗೌಡ ಹತ್ಯೆ ಕೇಸ್ - ಜಾಮೀನು ಕೋರಿ ವಿನಯ್‌ ಕುಲಕರ್ಣಿ ಅರ್ಜಿ ಇಂದು ಹೈಕೋರ್ಟ್‌ ತೀರ್ಪು

ಯೋಗೇಶ್ ಗೌಡ ಕೊಲೆ ಪ್ರಕರಣದಲ್ಲಿ ಜೀವಾವಧಿ ಶಿಕ್ಷೆಗೆ ಗುರಿಯಾಗಿರುವ ಮಾಜಿ ಸಚಿವ ವಿನಯ್ ಕುಲಕರ್ಣಿ, ಶಿಕ್ಷೆ ಅಮಾನತುಗೊಳಿಸಿ ಜಾಮೀನು ನೀಡುವಂತೆ ಕೋರಿ ಹೈಕೋರ್ಟ್‌ಗೆ ಮಧ್ಯಂತರ ಮನವಿ ಸಲ್ಲಿಸಿದ್ದಾರೆ. ಈ ಮನವಿಯ ಕುರಿತ ತೀರ್ಪನ್ನು ಹೈಕೋರ್ಟ್ ಶುಕ್ರವಾರ ಪ್ರಕಟಿಸಲಿದೆ.
Read Full Story
08:04 AM (IST) Jul 31

Karnataka News Live: ಫುಟ್ಬಾಲ್‌ ವಿಶ್ವಕಪ್‌ ಬಹಿಷ್ಕಾರ - ಸ್ಪೇನ್‌ ಸೇರಿ 55 ದೇಶ ಎಚ್ಚರಿಕೆ! ಅಷ್ಟಕ್ಕೂ ಆಗಿದ್ದೇನು?

ಫಿಫಾದ ವಾಣಿಜ್ಯ ಚಟುವಟಿಕೆಗಳಲ್ಲಿ ಖಾಸಗಿ ಹೂಡಿಕೆದಾರರಿಗೆ ಪಾಲು ನೀಡುವ ಯೋಜನೆಗೆ ಯುಇಎಫ್‌ಎ ತೀವ್ರ ವಿರೋಧ ವ್ಯಕ್ತಪಡಿಸಿದ್ದು, ಈ ಪ್ರಸ್ತಾವನೆ ಮುಂದುವರಿದರೆ ವಿಶ್ವಕಪ್‌ ಸೇರಿದಂತೆ ಪ್ರಮುಖ ಟೂರ್ನಿಗಳನ್ನು ಬಹಿಷ್ಕರಿಸುವುದಾಗಿ ಎಚ್ಚರಿಸಿದೆ. ಇದೇ ವೇಳೆ, ಅಕ್ಟೋಬರ್ 3ರಂದು ಕೋಲ್ಕತಾದಲ್ಲಿ ಭಾರತ ಮತ್ತು ಬ್ರೆಜಿಲ್ ನಡುವೆ ಸ್ನೇಹಾರ್ಥ ಫುಟ್ಬಾಲ್ ಪಂದ್ಯ ನಡೆಯಲಿದೆ.
Read Full Story
08:04 AM (IST) Jul 31

Karnataka News Live: ಕೆಆರ್ ಪೇಟೆ - ಪೌತಿ ಖಾತೆ ಬಗ್ಗೆ ವಿಚಾರಿಸಲು ಬಂದ ರೈತನನ್ನ ಕೂಡಿಹಾಕಿದ ತಹಸೀಲ್ದಾರ್‌!

ಕೆ.ಆರ್.ಪೇಟೆ ತಾಲೂಕು ಕಚೇರಿಯಲ್ಲಿ ಪೌತಿ ಖಾತೆ ಬಗ್ಗೆ ವಿಚಾರಿಸಲು ಹೋದ ರೈತನನ್ನು ತಹಸೀಲ್ದಾರ್ ಮತ್ತು ಸಿಬ್ಬಂದಿ ಕೊಠಡಿಯಲ್ಲಿ ಕೂಡಿಹಾಕಿದ್ದಾರೆ. ಈ ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದ್ದು, ಅಧಿಕಾರಿಯ ನಡೆಗೆ ತೀವ್ರ ಟೀಕೆ ವ್ಯಕ್ತವಾಗಿದೆ.
Read Full Story