ಎಚ್ಡಿಕೆ ನಟ : ಜನರನ್ನು ಮೂರ್ಖ ಮಾಡುತ್ತಿದ್ದಾರೆ
ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ನಟನಾಗಿದ್ದು, ತಮ್ಮ ಅಪರೂಪದ ಕೌಶಲ್ಯ ಗಳಿಂದ ಜನರನ್ನು ಮೂರ್ಖ ರನ್ನಾಗಿಸುತ್ತಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಹೇಳಿದೆ.
ಬೆಂಗಳೂರು: ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಅವರು ಒಬ್ಬ ನಟನಾಗಿದ್ದು, ತಮ್ಮ ಅಪರೂಪದ ಕೌಶಲ್ಯ ಗಳಿಂದ ಜನರನ್ನು ಮೂರ್ಖ ರನ್ನಾಗಿಸುತ್ತಲೇ ಇರುತ್ತಾರೆ ಎಂದು ರಾಜ್ಯ ಬಿಜೆಪಿ ವ್ಯಂಗ್ಯವಾಗಿ ಹೇಳಿದೆ.
ನಮ್ಮ ದೇಶ ಅನೇಕ ಪ್ರತಿಭಾವಂತ ನಟರನ್ನು ಕೊಟ್ಟಿದೆ. ಆ ನಟರು ತಮ್ಮ ಅದ್ಭುತ ನಟನೆಯಿಂದ ಪ್ರೇಕ್ಷಕರನ್ನು ವಿಸ್ಮಯರನ್ನಾಗಿ ಮಾಡಿದ್ದಾರೆ. ಇಲ್ಲಿ ಕುಮಾರಸ್ವಾಮಿ ಅವರು ಮತ್ತೊಬ್ಬ ಮೇರುನಟರಾಗಿದ್ದು, ಸತತವಾಗಿ ಜನಸಾಮಾನ್ಯರನ್ನು ಮೂರ್ಖರನ್ನಾಗಿಸುತ್ತಲೇ ಇದ್ದಾರೆ ಎಂದು ಟ್ವೀಟರ್ನಲ್ಲಿ ತಿಳಿಸಿದೆ.