09:40 AM (IST) Mar 06

Karnataka Budget Live: ಬಜೆಟ್ ಪುಸ್ತಕ ತೆಗೆದುಕೊಂಡು ವಿಧಾನಸೌಧಕ್ಕೆ ತೆರಳಿದ ಸಿಎಂ ಸಿದ್ದರಾಮಯ್ಯ

ವಿಧಾನಸೌಧದ ಮೂರನೇ ಮಹಡಿಯಲ್ಲಿರೋ ಕ್ಯಾಬಿನೆಟ್ ಹಾಲ್ ಗೆ ತೆರಳಿದ ಸಿಎಂ ಸಿದ್ದರಾಮಯ್ಯ
ಸಿಎಂ ಸಿದ್ದರಾಮಯ್ಯಗೆ ಜಮೀರ್ ಅಹ್ಮದ್, ಎಂಬಿ ಪಾಟೀಲ್, ಶರಣ ಪ್ರಕಾಶ ಪಾಟೀಲ್ , ಬೋಸರಾಜ್ ಸೇರಿ‌ ಹಲವು ಶಾಸಕರು ಸಾಥ್.

07:55 AM (IST) Mar 06

Karnataka Budget Live: Karnataka Budget 2026-27: ಧಾರವಾಡಕ್ಕೆ ಕೊಟ್ಟಿದ್ದು ಬೆಟ್ಟದಷ್ಟು, ಅನುಷ್ಠಾನ ಮಾತ್ರ ಎಳ್ಳಷ್ಟು!

ಕಳೆದ ವರ್ಷದ ಬಜೆಟ್‌ನಲ್ಲಿ ಧಾರವಾಡ ಜಿಲ್ಲೆಗೆ ನೀಡಿದ ಭರವಸೆಗಳ ಪೈಕಿ ಬೆಣ್ಣಿಹಳ್ಳ ಕಾಮಗಾರಿ ಮತ್ತು ಶಾಲಾ ಉನ್ನತೀಕರಣದಂತಹ ಕೆಲವು ಕಾರ್ಯಗಳು ಆರಂಭ ಆದರೆ, ತಂತ್ರಜ್ಞಾನ ಕೇಂದ್ರ, ಆರೋಗ್ಯ ಕೇಂದ್ರಗಳ ಪ್ರತ್ಯೇಕ ಪಾಲಿಕೆಯಂತಹ ಪ್ರಮುಖ ಘೋಷಣೆ ಇನ್ನೂ ಅನುಷ್ಠಾನಗೊಂಡಿಲ್ಲ ಅಥವಾ ವಿವಾದದಲ್ಲಿ ಸಿಲುಕಿವೆ.

Read Full Story
07:55 AM (IST) Mar 06

Karnataka Budget Live: Karnataka Budget 2026-27: ಇಂದಿನ ಬಜೆಟ್‌ನಲ್ಲಿ ಬೆಳಗಾವಿಗೆ ಸಿಗುತ್ತಾ ಬಂಪರ್‌? ಬೇಡಿಕೆಗಳೇನು?

ಮುಖ್ಯಮಂತ್ರಿ ಸಿದ್ದರಾಮಯ್ಯ ಮಂಡಿಸಲಿರುವ ಬಜೆಟ್‌ನಲ್ಲಿ ಬೆಳಗಾವಿ ಜಿಲ್ಲೆಯು ಬೆಟ್ಟದಷ್ಟು ನಿರೀಕ್ಷೆಗಳನ್ನು ಇಟ್ಟುಕೊಂಡಿದೆ. ಜಿಲ್ಲಾ ವಿಭಜನೆ, ರಿಂಗ್ ರಸ್ತೆ, ಮಹದಾಯಿ ಸೇರಿದಂತೆ ನೀರಾವರಿ ಯೋಜನೆಗಳು, ಐಟಿ ಪಾರ್ಕ್ ಸೇರಿ ಹಲವು ಸುಧಾರಣೆಯಂತಹ ಪ್ರಮುಖ ಬೇಡಿಕೆಗಳ ಈಡೇರಿಕೆಗಾಗಿ ಜನರು ಕಾಯುತ್ತಿದ್ದಾರೆ.

Read Full Story
07:54 AM (IST) Mar 06

Karnataka Budget Live: Karnataka Budget 2026–27 ಸಿದ್ದು ದಾಖಲೆಯ 17ನೇ ಬಜೆಟ್‌: ಇಂದು ಬೆಳಗ್ಗೆ 10.15ಕ್ಕೆ ಮಂಡನೆಗೆ ಕ್ಷಣಗಣನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ತಮ್ಮ 17ನೇ ಬಜೆಟ್ ಮಂಡಿಸುತ್ತಿದ್ದು, ಆರ್ಥಿಕ ಶಿಸ್ತು ಮತ್ತು ಜನಪರ ಯೋಜನೆಗಳ ನಡುವೆ ಸಮತೋಲನ ಸಾಧಿಸುವ ಸವಾಲು ಎದುರಿಸುತ್ತಿದ್ದಾರೆ. ಗ್ಯಾರಂಟಿಗಳ ನಡುವೆಯೂ ಮೂಲಸೌಕರ್ಯ ಅಭಿವೃದ್ಧಿ ಹಾಗೂ ಹಿಂದುಳಿದ ತಾಲೂಕುಗಳಿಗೆ ಅನುದಾನ ನೀಡುವ ನಿರೀಕ್ಷೆಯಿದೆ.

Read Full Story