LIVE NOW
| Updated : May 04 2026, 08:00 AM IST Karnataka By-Election Results 2026 LIVE: Sharath R Ashok scuba diving - ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
ಸಾರಾಂಶ
ಉಪಚುನಾವಣೆ ನಡೆದ ದಾವಣಗೆರೆ ದಕ್ಷಿಣ, ಬಾಗಲಕೋಟೆ ವಿಧಾನಸಭಾ ಕ್ಷೇತ್ರಗಳ ಮತಗಳ ಎಣಿಕೆ ನಡೆಯಲಿದ್ದು ಜಿಲ್ಲಾಡಳಿತ ಸಕಲ ಸಿದ್ಧತೆ ಮಾಡಿಕೊಂಡಿದೆ. ದಾವಣಗೆರೆ ದಕ್ಷಿಣ ಕ್ಷೇತ್ರದ ಮತಗಳ ಎಣಿಕೆ ನಗರದ ಡಿ.ಆರ್.ಆರ್. ವಿದ್ಯಾಸಂಸ್ಥೆಯಲ್ಲಿ, ಬಾಗಲಕೋಟೆ ಕ್ಷೇತ್ರದ ಮತಗಳ ಎಣಿಕೆ ನಗರದ ತೋಟಗಾರಿಕೆ ವಿವಿಯಲ್ಲಿ ನಡೆಯಲಿದೆ.
ಬೆಳಗ್ಗೆ 8 ಗಂಟೆಗೆ ಪೋಸ್ಟಲ್ ಬ್ಯಾಲೆಟ್ ಎಣಿಕೆ ಆರಂಭವಾಗಲಿದ್ದು, 8.30ಕ್ಕೆ ಇವಿಎಂ ಯಂತ್ರಗಳ ಎಣಿಕೆ ಕಾರ್ಯ ಶುರುವಾಗಲಿದೆ. ಮಧ್ಯಾಹ್ನ 12 ಗಂಟೆಯ ವೇಳೆಗೆ ಅಂತಿಮ ಫಲಿತಾಂಶ ಲಭ್ಯವಾಗುವ ನಿರೀಕ್ಷೆಯಿದೆ. ಮತ ಎಣಿಕೆ ಕೇಂದ್ರದ ಸುತ್ತಮುತ್ತಲಿನ 100 ಮೀಟರ್ ಪ್ರದೇಶವನ್ನು ನಿಷೇಧಿತ ಪ್ರದೇಶವೆಂದು ಘೋಷಿಸಲಾಗಿದ್ದು, ಮತ ಎಣಿಕೆ ಕೇಂದ್ರದ ಸುತ್ತ ಬಿಗಿ ಪೊಲೀಸ್ ಬಂದೋಬಸ್ತ್ ಏರ್ಪಡಿಸಲಾಗಿದೆ.
ದಾವಣಗೆರೆ ದಕ್ಷಿಣದಲ್ಲಿ ನಾಯಕ ಶಾಮನೂರು ಶಿವಶಂಕರಪ್ಪ, ಬಾಗಲಕೋಟೆಯಲ್ಲಿ ಕಾಂಗ್ರೆಸ್ನ ಎಚ್.ವೈ.ಮೇಟಿ ಅವರ ನಿಧನದಿಂದ ಸ್ಥಾನಗಳು ತೆರವಾಗಿದ್ದು, ಏ.9ರಂದು ಮತದಾನ ನಡೆದಿತ್ತು.
ದಾವಣಗೆರೆ ದಕ್ಷಿಣ ಕ್ಷೇತ್ರದಲ್ಲಿ ಕಾಂಗ್ರೆಸ್ನಿಂದ ಸಮರ್ಥ್ ಶಾಮನೂರು ಮಲ್ಲಿಕಾರ್ಜುನ್ ಮತ್ತು ಬಿಜೆಪಿಯಿಂದ ಶ್ರೀನಿವಾಸ್ ಟಿ.ದಾಸಕರಿಯಪ್ಪ ಸೇರಿದಂತೆ ಒಟ್ಟು 25 ಅಭ್ಯರ್ಥಿಗಳು ಕಣದಲ್ಲಿದ್ದರೆ, ಅತ್ತ ಬಾಗಲಕೋಟೆ ಕ್ಷೇತ್ರದಲ್ಲಿ ಕಾಂಗ್ರೆಸ್ನ ಉಮೇಶ್ ಮೇಟಿ ಮತ್ತು ಬಿಜೆಪಿಯ ವೀರಣ್ಣ ಚರಂತಿಮಠ ಸೇರಿದಂತೆ ಒಟ್ಟು 9 ಅಭ್ಯರ್ಥಿಗಳು ಕಣದಲ್ಲಿದ್ದಾರೆ.
Karnataka By-Election Results 2026 LIVESharath R Ashok scuba diving - ಸಮುದ್ರದಾಳದಲ್ಲಿ ಆರ್ ಅಶೋಕ್ ಪುತ್ರನ ಗಿನ್ನೆಸ್ ಸಾಹಸ
ಅಂಡಮಾನ್ನ ಸ್ವರಾಜ್ ದ್ವೀಪದ ಸಮುದ್ರದಾಳದಲ್ಲಿ ಭಾರತದ ಅತಿ ದೊಡ್ಡ ತ್ರಿವರ್ಣ ಧ್ವಜವನ್ನು ಅನಾವರಣಗೊಳಿಸಿ ಗಿನ್ನೆಸ್ ವಿಶ್ವ ದಾಖಲೆ ನಿರ್ಮಿಸಲಾಗಿದೆ. ಈ ಐತಿಹಾಸಿಕ ಸಾಧನೆಯಲ್ಲಿ ಬೆಂಗಳೂರಿನ ಸಾಹಸ ಕ್ರೀಡಾಪಟು ಹಾಗೂ ಆರ್. ಅಶೋಕ್ ಅವರ ಪುತ್ರ ಶರತ್ ಆರ್. ಅಶೋಕ್ ಕೂಡ ಭಾಗವಹಿಸಿದ್ದರು.
Read Full StoryKarnataka By-Election Results 2026 LIVEಬಾಗಲಕೋಟೆ ಉಪಚುನಾವಣೆ ಮತ ಎಣಿಕೆ - ಬಿಗಿ ಭದ್ರತೆಯೊಂದಿಗೆ ಸ್ಟ್ರಾಂಗ್ ರೂಮ್ ಓಪನ್ ಮಾಡಿದ ಅಧಿಕಾರಿಗಳು
ಬಾಗಲಕೋಟೆ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಮತ ಎಣಿಕೆ ಇಂದು ನಡೆಯುತ್ತಿದ್ದು, ಬಿಜೆಪಿ ಮತ್ತು ಕಾಂಗ್ರೆಸ್ ಅಭ್ಯರ್ಥಿಗಳ ನಡುವಿನ ನೇರ ಹಣಾಹಣಿಯ ಫಲಿತಾಂಶಕ್ಕಾಗಿ ತೀವ್ರ ಕುತೂಹಲ ಕೆರಳಿದೆ. ನವನಗರದ ತೋಟಗಾರಿಕೆ ವಿಶ್ವವಿದ್ಯಾಲಯದಲ್ಲಿ ಬಿಗಿ ಭದ್ರತೆಯೊಂದಿಗೆ ಮತ ಎಣಿಕೆ ಪ್ರಕ್ರಿಯೆ ಆರಂಭವಾಗಿದ್ದು, ಜಿಲ್ಲೆಯ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.
Read Full StoryKarnataka By-Election Results 2026 LIVEಬಾಗಲಕೋಟೆ ಉಪಚುನಾವಣೆ - ಇಂದು ತೋವಿವಿಯಲ್ಲಿ ಮತ ಎಣಿಕೆ; ನಿಷೇಧಾಜ್ಞೆ ಜಾರಿ
ಬಾಗಲಕೋಟೆ ವಿಧಾನಸಭಾ ಉಪ ಚುನಾವಣೆಯ ಮತ ಎಣಿಕೆ ಕಾರ್ಯ ಮೇ 4ರಂದು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯದಲ್ಲಿ ನಡೆಯಲಿದೆ. ಈ ಹಿನ್ನೆಲೆಯಲ್ಲಿ, ಜಿಲ್ಲಾಡಳಿತವು ಬಿಗಿ ಭದ್ರತೆ, ಸಿಬ್ಬಂದಿ ನಿಯೋಜನೆ ಮತ್ತು ನಿಷೇಧಾಜ್ಞೆ ಜಾರಿ ಸೇರಿದಂತೆ ಸಕಲ ಸಿದ್ಧತೆಗಳನ್ನು ಮಾಡಿಕೊಂಡಿದೆ.
Read Full StoryKarnataka By-Election Results 2026 LIVEಬಾಗಲಕೋಟೆ ಉಪಚುನಾವಣೆ ಫಲಿತಾಂಶಕ್ಕೆ ಕ್ಷಣಗಣನೆ - ಯಾರಿಗೆ ವಿಜಯ ಮಾಲೆ?
ಎಚ್.ವೈ. ಮೇಟಿಯವರ ನಿಧನದಿಂದ ತೆರವಾದ ಬಾಗಲಕೋಟೆ ವಿಧಾನಸಭೆ ಕ್ಷೇತ್ರದ ಉಪಚುನಾವಣೆಯ ಫಲಿತಾಂಶ ಸೋಮವಾರ ಪ್ರಕಟವಾಗಲಿದೆ. ಆಡಳಿತಾರೂಢ ಕಾಂಗ್ರೆಸ್ ಮತ್ತು ಪ್ರತಿಪಕ್ಷ ಬಿಜೆಪಿ ನಡುವೆ ತೀವ್ರ ಹಣಾಹಣಿ ನಡೆದಿದ್ದು, ಎರಡೂ ಪಕ್ಷಗಳು ಗೆಲುವಿಗಾಗಿ ತಮ್ಮದೇ ಆದ ತಂತ್ರಗಳನ್ನು ನೆಚ್ಚಿಕೊಂಡಿವೆ.
Read Full Story