ಬೆಂಗಳೂರಿನಲ್ಲಿ ನಡೆಯುತ್ತಿರುವ ಸಾಮಾಜಿಕ ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯಕ್ಕೆ ವೇತನ ಬಟವಾಡೆ ಅಧಿಕಾರಿಗಳನ್ನು ನಿಯೋಜಿಸಿರುವುದರಿಂದ, ನಗರದ ಸುಮಾರು 25 ರಿಂದ 30 ಸಾವಿರ ಸರ್ಕಾರಿ ನೌಕರರಿಗೆ ತಿಂಗಳ ವೇತನ ವಿಳಂಬ ಬಟವಾಡೆ ಅಧಿಕಾರಿಗಳು ಕಚೇರಿಗೆ ಬಂದು ಬಿಲ್ ಪ್ರಕ್ರಿಯೆ ನಡೆಸದ ಕಾರಣ ಈ ಸಮಸ್ಯೆ.

ಬೆಂಗಳೂರು (ಅ.11): ಬೆಂಗಳೂರು ನಗರದ ಸಾಮಾಜಿಕ ಮತ್ತು ಶೈಕ್ಷಣಿಕ ಸಮೀಕ್ಷೆ (ಜಾತಿ ಗಣತಿ) ಕಾರ್ಯಕ್ಕೆ ಅನೇಕ ಬಟವಾಡೆ ಅಧಿಕಾರಿಗಳನ್ನೂ ನಿಯೋಜಿಸಿರುವ ಹಿನ್ನೆಲೆಯಲ್ಲಿ ನಗರ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ವಿವಿಧ ಇಲಾಖೆಗಳ ಸಾವಿರಾರು ಸರ್ಕಾರಿ ನೌಕರರಿಗೆ ವೇತನ ವಿಳಂಬವಾಗಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಸರ್ಕಾರಿ ನೌಕರರಿಗೆ ಪ್ರತೀ ತಿಂಗಳು 1ನೇ ತಾರೀಕು ಅಥವಾ ಆರಂಭದಲ್ಲೇ ವೇತನ ಬಿಡುಗಡೆಯಾಗುತ್ತದೆ. ಆದರೆ, ಈ ತಿಂಗಳಲ್ಲಿ 10 ದಿನ ಕಳೆದರೂ ಇನ್ನೂ ಕೂಡ ನಗರದ ಸುಮಾರು 25ರಿಂದ 30 ಸಾವಿರ ನೌಕರರಿಗೆ ವೇತನ ಬಿಡುಗಡೆಯಾಗಿಲ್ಲ ಎಂದು ಹೇಳಲಾಗುತ್ತಿದೆ.

ಇದನ್ನೂ ಓದಿ: ಪರಿಶಿಷ್ಟ ಜಾತಿ ಒಳ ಮೀಸಲಾತಿ: ಸಚಿವ ಮಹದೇವಪ್ಪ ಮನೆಗೆ ಮುತ್ತಿಗೆ ಹಾಕಿ ಪ್ರತಿಭಟನೆ

ಸರ್ಕಾರಿ ನೌಕರರ ಸಂಘದ ಪದಾಧಿಕಾರಿಗಳು ಹೇಳುವ ಪ್ರಕಾರ, ಸರ್ಕಾರ ವೇತನ ಬಿಡುಗಡೆ ಮಾಡುವ ಅಥವಾ ಬಟವಾಡೆ ಅಧಿಕಾರಿಗಳನ್ನೂ ಜಾತಿ ಗಣತಿ ಸಮೀಕ್ಷೆಗೆ ನಿಯೋಜಿಸಲಾಗಿದೆ. ಅವರು ಕಚೇರಿಗೆ ಆಗಮಿಸಿ ಬಟವಾಡೆ ನೀಡುವವರೆಗೆ ವೇತನ ಆಗುವುದಿಲ್ಲ. ಬಟವಾಡೆ ಅಧಿಕಾರಿಗಳು ಇರುವ ಕೆಲವು ಇಲಾಖೆಗಳಲ್ಲಿ ಮಾತ್ರ ವೇತನ ಆಗಿದೆ. ವಿವಿಧ ಇಲಾಖೆಗಳ ಸುಮಾರು 30 ಸಾವಿರ ನೌಕರರಿಗೆ ಇನ್ನೂ ವೇತನ ಆಗಿಲ್ಲ ಎನ್ನಲಾಗಿದೆ.