Asianet Suvarna News Asianet Suvarna News

ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ : ಸಿಎಂ ಬೊಮ್ಮಾಯಿ ಘೋಷಣೆ

  • ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ
  • 10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ  ಸಿಎಂ ಬಸವರಾಜ ಬೊಮ್ಮಾಯಿ ಘೋಷಣೆ
Karnataka CM Basavaraj Bommai Announced To build Kannada Bhavan in Goa snr
Author
Bengaluru, First Published Nov 9, 2021, 1:28 PM IST

ಬೆಂಗಳೂರು (ನ.09):  ಗೋವಾದಲ್ಲಿ (Goa) ಕನ್ನಡ ಭವನ (Kannada Bhavan) ನಿರ್ಮಾಣಕ್ಕೆ 10 ಕೋಟಿ ಅನುದಾನ ಬಿಡುಗಡೆ ಮಾಡುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ (Basavaraj Bommai) ಘೋಷಣೆ ಮಾಡಿದ್ದಾರೆ. 

ಅಖಿಲ ಗೋವಾ ಕನ್ನಡ ಮಹಾ ಸಂಘದ (Goa Kannada maha sangh) ಪದಾಧಿಕಾರಿಗಳು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.  

ಬಿಜೆಪಿ (BJP) ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿಟಿ ರವಿ (CT Ravi) ನೇತೃತ್ವದಲ್ಲಿ ಗೋವಾ ಕನ್ನಡ ಮಹಾ ಸಂಘ ಮುಖ್ಯಮಂತ್ರಿಗಳನ್ನು (CM Basavaraj Bommai) ಭೇಟಿ ಮಾಡಿದ್ದು, ಈ ವೇಳೆ  ಮಾತನಾಡಿದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಗೋವಾ  ರಾಜ್ಯದಲ್ಲಿ ಉತ್ತರ ಕರ್ನಾಟಕ ಭಾಗದ ಬಹುತೇಕ ಜನರು ನೆಲೆಸಿದ್ದಾರೆ. ಅವರು ಹೊರನಾಡು ಗೋವಾದಲ್ಲಿ ಕನ್ನಡವನ್ನು (Kannada) ಉಳಿಸಿ ಬೆಳೆಸುತ್ತಿದ್ದಾರೆ. ಕನ್ನಡ ಸಂಸ್ಕೃತಿಯನ್ನು ಕಾಪಾಡುತ್ತಿದ್ದಾರೆ. ಆದರೆ ಕನ್ನಡಿಗರಿಗೆ  ಅಲ್ಲಿ ನೆಲೆಯಿಲ್ಲ ಎಂದು ಹೇಳಿದರು.  

 ಗೋವಾದಲ್ಲಿ ಕನ್ನಡ ಭವನ ನಿರ್ಮಾಣಕ್ಕೆ ಕರ್ನಾಟಕ ಸರ್ಕಾರ ಸಿದ್ಧವಿದೆ.  ಸೂಕ್ತ ಭೂಮಿಯನ್ನು ಗುರುತಿಸಿ ಡಿಪಿಆರ್ (DPR) ಸಿದ್ಧಪಡಿಸುವಂತೆ ಸಿಎಂ ಅಧಿಕಾರಿಗಳಿಗೆ ಸೂಚನೆ ನೀಡಿದ್ದು,  ಅದರ ಜತೆ  ಕನ್ನಡ ಭವನ ನಿರ್ಮಾಣಕ್ಕೆ 10 ಕೋಟಿ ರೂಪಾಯಿ ಮಂಜೂರು ಮಾಡುವಂತೆ  ಸಿಎಂ ಅಧಿಕಾರಿಗಳಿಗೆ ಆದೇಶಿಸಿದರು.  

ಮುಖ್ಯಮಂತ್ರಿಗಳ ಈ ನಿರ್ಧಾರಕ್ಕೆ ಗೋವಾ ಕನ್ನಡ ಸಂಘದ ಪದಾಧಿಕಾರಿಗಳು ಸಂತಸ ವ್ಯಕ್ತಪಡಿಸಿದರು.

ಮಿಷನ್ 2022 ಪ್ರಗತಿ ಪರಿಶೀಲನಾ ಸಭೆ :  ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ (Basavaraj Bommai) ಅವರು ಭಾನುವಾರ ಗೃಹ ಕಚೇರಿ ಕೃಷ್ಣಾದಲ್ಲಿ ಬೆಂಗಳೂರು ಮಿಷನ್‌-2022ರ (Bengaluru Mission 2022) ಪ್ರಗತಿ ಪರಿಶೀಲನೆ ನಡೆಸಿದರು

ಮಳೆಯಿಂದಾಗಿ (Rain) ನಗರದ ರಸ್ತೆಗಳಲ್ಲಿ ಗುಂಡಿ ಬಿದ್ದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸುತ್ತಿರುವ ಬೆನ್ನಲ್ಲೇ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಭಾನುವಾರ ಬೆಂಗಳೂರು ಮಿಷನ್‌-2022 ರ ಪ್ರಗತಿ ಪರಿಶೀಲನೆ ನಡೆಸಿ, ರಸ್ತೆಗಳ ಅತ್ಯುತ್ತಮ ನಿರ್ವಹಣೆ ಹಾಗೂ ಸುಗಮ ಸಂಚಾರ ವ್ಯವಸ್ಥೆಗೆ ಕ್ರಮ ಕೈಗೊಳ್ಳುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮಳೆ ಹಾನಿ ಸಿಎಂ ಸಭೆಗೆ ಸಚಿವರೇ ಗೈರು: ಮಕ್ಕಳ ಜೊತೆ ಕ್ರಿಕೆಟ್‌ ಆಡ್ತಿದ್ದ ಅಶೋಕ್‌..!

ಗೃಹ ಕಚೇರಿ ಕೃಷ್ಣಾದಲ್ಲಿ ವಿವಿಧ ಇಲಾಖೆಗಳ ಸಭೆ ನಡೆಸಿ ಪ್ರಗತಿ ಪರಿಶೀಲನೆ ನಡೆಸಿದ ಅವರು, ನಗರದ ಕೇಂದ್ರ ಭಾಗದ ರಸ್ತೆಗಳನ್ನು ಸರಿಯಾಗಿ ನಿರ್ವಹಣೆ ಮಾಡಿ ಸುಗಮ ಸಂಚಾರಕ್ಕೆ ಅನುವು ಮಾಡಿಕೊಡಬೇಕು. ಈ ಬಗ್ಗೆ ಸ್ಮಾರ್ಟ್‌ ಸಿಟಿ ಯೋಜನೆಗೆ ಸಂಬಂಧಿಸಿದಂತೆ ಪ್ರತ್ಯೇಕ ಸಭೆ ನಡೆಸಿ ಪರಿಶೀಲಿಸುವುದಾಗಿ ತಿಳಿಸಿದರು.

ಬೆಂಗಳೂರು ಮೆಟ್ರೋ ರೈಲು ಯೋಜನೆಯನ್ನು ನಿಗದಿತ ಗುರಿಗೆ ಒಂದು ವರ್ಷ ಮೊದಲೇ ಪೂರ್ಣಗೊಳಿಸಬೇಕು. ಇದಕ್ಕೆ ಅಗತ್ಯವಿರುವ ಎಲ್ಲ ಸಿದ್ಧತೆಗಳನ್ನು ಅಧಿಕಾರಿಗಳು ಮಾಡಿಕೊಳ್ಳಬೇಕು. ಉಪನಗರ ರೈಲು ಯೋಜನೆಯು ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಮಹತ್ವಾಕಾಂಕ್ಷಿ ಯೋಜನೆಯಾಗಿದ್ದು, 15.40 ಕಿ.ಮೀ. ಮಾರ್ಗ ನಿರ್ಮಾಣಕ್ಕೆ ಕೆಐಎಡಿಬಿ ಮೂಲಕ ಕೈಗೊಂಡಿರುವ ಭೂಸ್ವಾಧೀನ ಪ್ರಕ್ರಿಯೆಯನ್ನು ಚುರುಕುಗೊಳಿಸುವಂತೆ ನಿರ್ದೇಶನ ನೀಡಿದರು.

ಮುಖ್ಯ ಕಾರ್ಯದರ್ಶಿ ಪಿ.ರವಿಕುಮಾರ್‌, ಸರ್ಕಾರದ ಅಪರ ಮುಖ್ಯ ಕಾರ್ಯದರ್ಶಿ ಹಾಗೂ ಅಭಿವೃದ್ಧಿ ಆಯುಕ್ತೆ ವಂದಿತಾ ಶರ್ಮ, ಮುಖ್ಯಮಂತ್ರಿಯವರ ಪ್ರಧಾನ ಕಾರ್ಯದರ್ಶಿ ಮಂಜುನಾಥ್‌ ಪ್ರಸಾದ್‌ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಪಾಲ್ಗೊಂಡಿದ್ದರು.

25 ಕೆರೆ ಅಭಿವೃದ್ಧಿ :  ಕೆ 100 ವಾಟರ್‌ ವೇ ಯೋಜನೆಯಡಿ 11 ಕಿ.ಮೀ. ರಾಜಕಾಲುವೆಯನ್ನು ಪ್ರೇಕ್ಷಣೀಯ ಸ್ಥಳವಾಗಿ ಅಭಿವೃದ್ಧಿಪಡಿಸುವ ಕಾಮಗಾರಿಯಲ್ಲಿ ಒಳಚರಂಡಿ ನೀರು ಕಾಲುವೆಗೆ ಸೇರದಂತೆ ಮುನ್ನೆಚ್ಚರಿಕೆ ವಹಿಸಿ. ಕೆರೆಗಳ ಅಭಿವೃದ್ಧಿ ಮತ್ತು ಪುನಶ್ಚೇತನ ಯೋಜನೆಯಡಿ ಸುಮಾರು .128 ಕೋಟಿ ವೆಚ್ಚದಲ್ಲಿ 25 ಕೆರೆ ಅಭಿವೃದ್ಧಿ ಮಾಡಲಾಗುತ್ತಿದ್ದು, ಜನವರಿ ಅಂತ್ಯಕ್ಕೆ ಕಾಮಗಾರಿ ಪೂರ್ಣಗೊಳ್ಳಲಿದೆ. ಕೆರೆ ಅಭಿವೃದ್ಧಿ ಮಾಡುವಾಗ ಒತ್ತುವರಿ ತೆರವುಗೊಳಿಸಿ ಹಸಿರು ಬೇಲಿ ಹಾಕಬೇಕು. ಕೆರೆಗಳಿಗೆ ಒಳಚರಂಡಿ ನೀರು ಸೇರದಂತೆ ಕ್ರಮ ಕೈಗೊಳ್ಳುವಂತೆ ಸೂಚಿಸಿದರು.

Follow Us:
Download App:
  • android
  • ios