Asianet Suvarna News Asianet Suvarna News

ನೀತಿ ಆಯೋಗದ ಸಭೆಯಲ್ಲಿ ಮೋದಿ ಮುಂದೆ ಕೆಲ ಮಹತ್ವದ ಬೇಡಿಕೆ ಇಟ್ಟ ಸಿಎಂ

ನೀತಿ ಆಯೋಗದ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯಕ್ಕೆ ಸಂಬಂಧಿಸಿದಂತೆ ಕೆಲ ಬೇಡಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಅವು ಇಂತಿವೆ.

Karnataka CM BSY Some demands sharing with To PM Modi In niti aayog meeting rbj
Author
Bengaluru, First Published Feb 20, 2021, 6:12 PM IST

ಬೆಂಗಳೂರು, (ಫೆ.20): ಪ್ರಧಾನಮಂತ್ರಿ ನೇತೃತ್ವದಲ್ಲಿ ಇಂದು (ಶನಿವಾರ) ನೀತಿ ಆಯೋಗದ ಆಡಳಿತ ಮಂಡಳಿಯ ಸಭೆ ನಡೆಯಿತು. ಈ ಸಭೆಯಲ್ಲಿ ಕರ್ನಾಟಕದ ಪರವಾಗಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ಪಾಲ್ಗೊಂಡಿದ್ದರು.

ಮೋದಿ ಜತೆಗಿನ ನೀತಿ ಆಯೋಗದ ಸಭೆಯಲ್ಲಿ ಬಿಎಸ್ ವೈ ಭಾಷಣದ ಮುಖ್ಯಾಂಶಗಳು

ಇನ್ನು ಈ ಸಭೆಯಲ್ಲಿ ಮುಖ್ಯಮಂತ್ರಿ ಬಿಎಸ್ ಯಡಿಯೂರಪ್ಪ ಅವರು ರಾಜ್ಯಕ್ಕೆ ಸಂಬಂಧಿಸಿದಂತೆ ಕೆಲ ಬೇಡಿಕೆಗಳನ್ನು ಪ್ರಧಾನಿ ನರೇಂದ್ರ ಮೋದಿ ಅವರ ಮುಂದಿಟ್ಟಿದ್ದಾರೆ. ಹಾಗಾದ್ರೆ, ಸಿಎಂ ಇಟ್ಟ ಬೇಡಿಕೆಗಳಾವುವು ಎನ್ನುವ ಮಾಹಿತಿ ಈ ಕೆಳಗಿನಂತಿದೆ.

 ಕೆಲ ಬೇಡಿಕೆಗಳನ್ನ ಪಿಎಂ ಎದರು ಇಟ್ಟ ಸಿಎಂ
* ಭದ್ರಾ ಮೇಲ್ದಂಡೆ ಮತ್ತು ಕೃಷ್ಣಾ ಮೇಲ್ದಂಡೆ ಯೋಜನೆಗಳನ್ನು ರಾಷ್ಟ್ರೀಯ ಯೋಜನೆ ಎಂದು ಘೋಷಿಸುವಂತೆ ಮನವಿ ಮಾಡಲಾಗಿದೆ....

* ಜೊತೆಗೆ ನದೀ ತಿರುವು ಯೋಜನೆಗಳಿಗೆ ಅನುದಾನ ಒದಗಿಸುವಂತೆ ಹಾಗೂ ಕಾಲುವೆಗಳ ಆಧುನೀಕರಣ ಯೋಜನೆಯಡಿ ರಾಜ್ಯದಿಂದ 6673 ಕೋಟಿ ರೂ. ಗಳ ಪ್ರಸ್ತಾವನೆ ಸಲ್ಲಿಸಲಾಗಿದ್ದು, ಅವುಗಳನ್ನು ಮಂಜೂರು ಮಾಡುವಂತೆ ಮನವಿ ಮಾಡಲಾಗಿದೆ...

* ಖಾಸಗಿ ಸಹಭಾಗಿತ್ವದಲ್ಲಿ 3 ಬಂದರುಗಳ ಅಭಿವೃದ್ಧಿ, ರೈಲ್ವೆಯೊಂದಿಗೆ ಜಂಟಿ ಪಾಲುದಾರಿಕೆಯಲ್ಲಿ ಬೆಂಗಳೂರು ಉಪ ನಗರ ರೈಲು ಅಭಿವೃದ್ಧಿ ಯೋಜನೆ ಜಾರಿಗೊಳಿಸಲಾಗುತ್ತಿದೆ.

* ಕಾನೂನು ತೊಡಕುಗಳು ಮತ್ತು ಪರಿಸರ ಹೋರಾಟಗಳ ಹಿನ್ನೆಲೆಯಲ್ಲಿ ಮೂಲಸೌಕರ್ಯ ಯೋಜನೆಗಳು ವಿಳಂಬವಾಗುತ್ತಿರುವ ಹಿನ್ನೆಲೆಯಲ್ಲಿ ನ್ಯಾಯಾಲಯಗಳಲ್ಲಿ ಇಂತಹ ವ್ಯಾಜ್ಯಗಳ ತ್ವರಿತ ವಿಲೇವಾರಿಗೆ ವ್ಯವಸ್ಥೆ ರೂಪಿಸುವಂತೆ ಮನವಿ ಮಾಡಲಾಗಿದೆ...

* ನೂತನ ಶಿಕ್ಷಣ ನೀತಿಯ ಅನುಷ್ಠಾನಕ್ಕಾಗಿ ಕೈಗೊಳ್ಳಬೇಕಾಗಿರುವ ಹಲವು ಉಪಕ್ರಮಗಳಿಗೆ ಕೇಂದ್ರ ಸರ್ಕಾರದ ಆರ್ಥಿಕ ನೆರವು ಒದಗಿಸುವಂತೆ ಪ್ರಧಾನ ಮಂತ್ರಿಯವರಿಗೆ ಮನವಿ ಮಾಡಲಾಯಿತು.

 * ಎಲ್ಲ ಸರ್ಕಾರಿ ಕಚೇರಿಗಳಿಗೆ ಇಂಟರ್ನೆಟ್ ಸೌಲಭ್ಯ ಒದಗಿಸಲು ಒಪ್ಟಿಕಲ್ ಫೈಬರ್ ನೆಟ್ ವರ್ಕ್ ರೂಪಿಸಲು ನಿರ್ಧರಿಸಲಾಗಿದ್ದು, ಇದಕ್ಕೆ ಕೇಂದ್ರ ಸರ್ಕಾರದಿಂದ 4300 ಕೋಟಿ ರೂ. ನೆರವು ಒದಗಿಸುವಂತೆ ಕೋರಲಾಯಿತು...

Follow Us:
Download App:
  • android
  • ios