ತರಕಾರಿ ಹೊತ್ತ ರಾಜ್ಯದ ಮೊದಲ ರೈಲು ದೆಹಲಿಗೆ ಪ್ರಯಾಣ
ರಾಜ್ಯದ ಮೊದಲ ಕಿಸಾನ್ ರೈಲು ಕಾರ್ಯಾರಂಭ ಮಾಡಿದೆ. ಇಲ್ಲಿನ ಸರಕುಗಳನ್ನು ಹೊತ್ತು ದಿಲ್ಲಿಗೆ ಪ್ರಯಾಣ ಬೆಳೆಸಿದೆ.
ಬೆಂಗಳೂರು (ಸೆ.20): ಕರ್ನಾಟಕದ ಮೊದಲ ‘ಕಿಸಾನ್ ರೈಲು’ ಬೆಂಗಳೂರಿನ ಕ್ರಾಂತಿವೀರ ಸಂಗೊಳ್ಳಿ ರಾಯಣ್ಣ ರೈಲು ನಿಲ್ದಾಣ (ಕೆಎಸ್ಆರ್)ದಿಂದ ದೆಹಲಿಯ ನಿಜಾಮುದ್ದೀನ್ಗೆ ಶನಿವಾರ ಸಂಜೆ ಪ್ರಯಾಣ ಬೆಳೆಸಿತು.
ಶನಿವಾರ ಸಂಜೆ 4.45ಕ್ಕೆ ಬೆಂಗಳೂರಿನಿಂದ ಹೊರಟಿರುವ ಈ ರೈಲು ಸೋಮವಾರ ರಾತ್ರಿ 11.45ಕ್ಕೆ ನಿಜಾಮುದ್ದೀನ್ ತಲುಪಲಿದೆ. ಈ ರೈಲಿಗೆ ಕೆಎಸ್ಆರ್ ನಿಲ್ದಾಣದ ಸ್ಟೇಷನ್ ಮಾಸ್ಟರ್ ಹಸಿರು ನಿಶಾನೆ ತೋರಿದ್ದಾರೆ. ಕಿಸಾನ್ ರೈಲಿನಲ್ಲಿ ಕೃಷಿ ಉತ್ಪನ್ನಗಳಾದ ಕ್ಯಾಬೇಜ್, ಕ್ಯಾಪ್ಸಿಕಂ, ಮೆಣಸಿನಕಾಯಿ, ಹಾಲು, ಮಾಂಸ, ಮೀನು ಸೇರಿದಂತೆ ಬೇಗನೆ ಕೆಡಬಲ್ಲ ಪದಾರ್ಥಗಳನ್ನು ಸಾಗಿಸಬಹುದಾಗಿದೆ.
ಡ್ರೋನ್ ಮೂಲಕ ಪಾಕ್ನಿಂದ ಉಗ್ರರಿಗೆ ಶಸ್ತ್ರಾಸ್ತ್ರ ಪೂರೈಕೆ! .
ಅದಕ್ಕಾಗಿ ಕೋಲ್ಡ್ ಸ್ಟೋರೇಜ್ ಬೋಗಿಗಳನ್ನು ಅಳವಡಿಸಲಾಗಿದೆ. ಇದು ಬಹು ವಿಧದ ರೈಲಾಗಿದ್ದು, ಒಂದು ಸಂಸ್ಥೆ ಅಥವಾ ಒಬ್ಬ ವ್ಯಕ್ತಿಗೆ ಸಂಬಂಧಿಸಿದ ಸರಕುಗಳನ್ನು ಮಾತ್ರ ರೈಲಿನಲ್ಲಿ ತೆಗೆದುಕೊಂಡು ಹೋಗುವುದಿಲ್ಲ. ರೈತರು ಬೆಳೆದ ಯಾವುದೇ ತರಕಾರಿಗಳನ್ನು ಸಾಗಣೆ ಮಾಡಲಾಗುತ್ತದೆ ಎಂದು ಪ್ರಕಟಣೆಯಲ್ಲಿ ತಿಳಿಸಲಾಗಿದೆ.