Asianet Suvarna News Asianet Suvarna News

ಲಾಕ್ ಡೌನ್ 4.0: ಬೇರೆ ಜಿಲ್ಲೆಗೆ ಹೋಗಲು ಪಾಸ್ ಬೇಕಾ? ಬೇಡ್ವಾ? ಎಲ್ಲಾ ಗೊಂದಲಗಳಿಗೆ ತೆರೆ

ಲಾಕ್‌ಡೌನ್ 4.0 ಮಾರ್ಗಸೂಚಿಯಲ್ಲಿ ಅಂತರ್ ಜಿಲ್ಲೆಗಳಿಗೆ ತೆರಳಲು ಪಾಸ್ ಬೇಕೋ? ಬೇಡವೋ? ಎನ್ನುವ ಗೊಂದಲಗಳಿಗೆ ತೆರೆಬಿದ್ದಿದೆ.

Karnataka DGP praveen sood orders pass not required for inter district movement
Author
Bengaluru, First Published May 20, 2020, 2:29 PM IST

ಬೆಂಗಳೂರು, (ಮೇ.20): ಲಾಕ್ ಡೌನ್ 4.0 ವೇಳೆಯಲ್ಲಿ ಅಂತರ್ ಜಿಲ್ಲೆಯೊಳಗೆ ಪ್ರಯಾಣಿಸಲು ಪಾಸ್ ಅಗತ್ಯವಿರುವುದಿಲ್ಲ ಎಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ್ ಸೂದ್ ಸ್ಪಷ್ಟಪಡಿಸಿದ್ದಾರೆ.

ಈ ಬಗ್ಗೆ ಡಿಜಿಪಿ ಕರ್ನಾಟಕ ಟ್ವಿಟ್ಟರ್ ನಲ್ಲಿ ತಿಳಿಸಿದ್ದು, ಪ್ರಯಾಣ ಮಾಡುವಾಗ ಅಗತ್ಯ ವಸ್ತುಗಳನ್ನು, ದಾಖಲೆಗಳನ್ನು ಕೊಂಡೊಯ್ಯಿರಿ. ಆದ್ರೆ, ಸಂಜೆ 7ರಿಂದ ಬೆಳಗ್ಗೆ 7ಯವರೆಗೆ ಎಂದಿನಿಂತೆ ಲಾಕ್‌ ಡೌನ್ ಜಾರಿಯಲ್ಲಿರುತ್ತೆ. ಆದ್ದರಿಂದ ಈ ಸಮಯದೊಳಗೆ ಮಾತ್ರ ಪ್ರಯಾಣ ಮಾಡಲು ಅವಕಾಶವಿದೆ ಎಂದು ಹೇಳಿದ್ದಾರೆ.

ಪ್ರಯಾಣಿಕರ ಗಮನಕ್ಕೆ: ಬಸ್ ಸಂಚಾರದಲ್ಲಿ ಕೊಂಚ ಬದಲಾವಣೆ....!

ಇನ್ನೊಂದು ಪ್ರಮುಖಾಂಶ ಅಂದ್ರೆ ರಾಜ್ಯ ಸರ್ಕಾರದ ಮಾರ್ಗಸೂಚಿಯಂತೆ ಮೇ.31ರ ವರೆಗೆ ಪ್ರತಿ ಭಾನುವಾರ ಸಂಪೂರ್ಣ ಲಾಕ್‌ಡೌನ್ ಇರಲಿದೆ.ಹಾಗಾಗಿ ಯಾವುದೇ ಅಂಗಡಿ-ಮುಂಗಟ್ಟುಗಳು ತೆಗೆಯುವಂತಿಲ್ಲ. ಇನ್ನು ಯಾವುದೇ ವಾಹನಗಳ ಸಂಚಾರಕ್ಕೆ ಅನುಮತಿ ಇರುವುದಿಲ್ಲ. 

ಮಾರ್ಚ್ 25ರಿಂದ ಹೊರಡಿಸಲಾಗಿದ್ದ ಲಾಕ್ ಡೌನ್ ಹಿನ್ನೆಲೆಯಲ್ಲಿ ವಾಹನ ಸಂಚಾರಕ್ಕೆ ಅವಕಾಶವಿರಲಿಲ್ಲ. ಬಳಿಕ ಸ್ವಲ್ಪ ವಿನಾಯ್ತಿ ನೀಡಿ ಪಾಸ್ ಹೊಂದಿರುವವರಿಗೆ ನಿಯಮ ಹೇರಿ ಸಂಚಾರಕ್ಕೆ ಅನುವು ಮಾಡಿಕೊಡಲಾಗಿತ್ತು.

ಆದರೆ, ಇದೀಗ ಲಾಕ್‌ಡೌನ್ 4.0 ರಾಜ್ಯಸರ್ಕಾರ ಬಹುತೇಕ ಚಟುವಟಿಕೆಗಳಿಗೆ ನಿರ್ಬಂಧ ಸಡಿಲಿಸಿದ್ದು, ಅಂತರ್ ಜಿಲ್ಲೆಗಳ ವಾಹನ ಸಂಚಾರಕ್ಕೆ ಇನ್ನು ಮುಂದೆ ಪಾಸ್ ಅಗತ್ಯವಿಲ್ಲ. 

Follow Us:
Download App:
  • android
  • ios