ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯದಲ್ಲಿ ಏರುಪೇರು!
ಮಾಜಿ ಸಿಎಂ ಸಿದ್ದರಾಮಯ್ಯ ಆಸ್ಪತ್ರೆಗೆ ದಾಖಲು| ಎದೆನೋವು, ರಕ್ತದೊತ್ತಡ ಹಿನ್ನಲೆಯಲ್ಲಿ ಆಸ್ಪತ್ರೆಗೆ ದಾಖಲು| ಸಿದ್ದರಾಮಯ್ಯರನ್ನು ಆಸ್ಪತ್ರೆಗೆ ದಾಖಲಿಸಿದ ಸಂಬಂಧಿಕರು| ಬೆಂಗಳೂರಿನ ಖಾಸಗಿ ಆಸ್ಪತ್ರೆಯಲ್ಲಿ ಸಿದ್ದರಾಮಯ್ಯಗೆ ಚಿಕಿತ್ಸೆ
ಬೆಂಗಳೂರು[ಡಿ.11]: ಮಾಜಿ ಸಿಎಂ ಸಿದ್ದರಾಮಯ್ಯ ಆರೋಗ್ಯ ಏರುಪೇರಾಗಿದ್ದು, ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
"
ಬೆಳಗ್ಗೆ ಸುಮಾರು 06.30ರ ಹೊತ್ತಿಗೆ ಎದೆನೋವು ಕಾಣಿಸಿಕೊಂಡಿದ್ದು, ರಕ್ತದೊತ್ತಡವೂ ಏರುಪೇರಾದ ಹಿನ್ನಲೆಯಲ್ಲಿ ಸಿದ್ದರಾಮಯ್ಯಯರನ್ನು ಬಸವೇಶ್ವರನಗರದ ಖಾಸಗಿ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.
ಸಿದ್ದರಾಮಯ್ಯಗೆ ಕುಟುಂಬ ವೈದ್ಯರು ಚಿಕಿತ್ಸೆ ನೀಡುತ್ತಿದ್ದು, ಹೆಚ್ಚಿನ ಮಾಹಿತಿ ಇನ್ನಷ್ಟೇ ಲಭಿಸಬೇಕಿದೆ.