Asianet Suvarna News Asianet Suvarna News

ಕೊರೋನಾ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಜ್ಜು: ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚನೆ

* ಕೊರೋನಾ 3ನೇ ಅಲೆ ಎದುರಿಸಲು ರಾಜ್ಯ ಸರ್ಕಾರ ಸಜ್ಜು
* ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ 
* ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿದ ರಾಜ್ಯ ಸರ್ಕಾರ

Karnataka Govt forms medical-experts committee For Corona third-wave rbj
Author
Bengaluru, First Published May 26, 2021, 6:21 PM IST

ಬೆಂಗಳೂರು, (ಮೇ.26): ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ, ಉಪ ಮುಖ್ಯಮಂತ್ರಿ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಅವರು ಕೊರೊನಾ 3ನೇ ಅಲೆ ಎದುರಿಸಲು ಸಜ್ಜಾಗಿದ್ದಾರೆ. 

ಈ ಸಂಬಂಧ ಖ್ಯಾತ ವೈದ್ಯ ಡಾ. ದೇವಿ ಶೆಟ್ಟಿ ಅವರ ನೇತೃತ್ವದಲ್ಲಿ ರಾಜ್ಯದಲ್ಲಿ ಕೋವಿಡ್​ ಉನ್ನತ ವೈದ್ಯ ಸಮಿತಿ ರಚನೆ ಮಾಡಿದ್ದಾರೆ. ತಜ್ಞ ವೈದ್ಯರ ಉನ್ನತ ಮಟ್ಟದ ಸಮಿತಿ ರಚಿಸಿ ರಾಜ್ಯ ಸರ್ಕಾರ ಅಧಿಕೃತ ಆದೇಶ ಹೊರಡಿಸಿದ್ದು, ಸಮಿತಿಯಲ್ಲಿ ಒಟ್ಟು 13 ಮಂದಿ ವೈದ್ಯರು ಇದ್ದಾರೆ. 

ಈ ಬಗ್ಗೆ ಕರ್ನಾಟಕ ಕೋವಿಡ್​ ನಿಯಂತ್ರಣ ಕಾರ್ಯಪಡೆ ಮುಖ್ಯಸ್ಥ ಡಾ. ಸಿ ಎನ್​ ಅಶ್ವತ್ಥ ನಾರಾಯಣ್​ ಟ್ವೀಟ್​ ಮಾಡಿ ಮಾಹಿತಿ ತಿಳಿಸಿದ್ದಾರೆ.

ಮಾತುಕತೆ ಸಫಲ: ರಾಜ್ಯಕ್ಕೆ 1200 ಮೆಟ್ರಿಕ್‌ ಟನ್‌ ಆಕ್ಸಿಜನ್ ಹಂಚಿಕೆ

ಕೊರೋನಾ ಸೋಂಕು ಎರಡನೇ ಅಲೆ ಸಂದರ್ಭದಲ್ಲಿ ರಾಜ್ಯ ಸರ್ಕಾರ ಎಡವಿದ್ದು ಸ್ಪಷ್ಟವಾಗಿತ್ತು. ಅದರ ಸರಿಪಡಿಸಿಕೊಂಡು ಮುಂದೆ ಎದುರಾಗಬಹುದಾದ ಮೂರನೇ ಕೊವಿಡ್​ ಅಲೆಯನ್ನು ಎದುರಿಸಲು ರಾಜ್ಯ ಸರ್ಕಾರ ಈ ಬಾರಿ ಮುಂಚಿತವಾಗಿಯೇ ಸಿದ್ಧತೆ ನಡೆಸಿದೆ.

 ಮುಖ್ಯವಾಗಿ ಪರಿಣತ ವೈದ್ಯರಿಂದ ಸಲಹೆ, ಸೂಚನೆ ಪಡೆಯಲು ತಯಾರಿ ನಡೆಸಿದೆ. ಅಕ್ಟೋಬರ್​- ನವೆಂಬರ್​ ತಿಂಗಳಲ್ಲಿ ಮೂರನೇ ಕೊವಿಡ್​ ಅಲೆ ಎದುರಾಗುವ ಸಾಧ್ಯತೆಯಿದೆ. ಖ್ಯಾತ ಹೃದಯತಜ್ಞ ಡಾ. ದೇವಿ ಪ್ರಸಾದ್​ ಶೆಟ್ಟಿ ಕೋವಿಡ್​ ವೈದ್ಯಕೀಯ ಉನ್ನತ ಸಮಿತಿಯ ಮುಖ್ಯಸ್ಥರಾಗಿದ್ದಾರೆ. ಗಮನಾರ್ಹವೆಂದರೆ ಕೇಂದ್ರ ಸರ್ಕಾರವೂ ಸಹ ಕೊರೊನಾ ನಿಯಂತ್ರಣದಲ್ಲಿ ಡಾ. ದೇವಿ ಪ್ರಸಾದ್​ ಶೆಟ್ಟಿ ಅವರ ವೈದ್ಯ ನೆರವು ಪಡೆದಿದೆ ಎಂದು ಅಶ್ವತ್ಥ್ ನಾರಾಯಣ ಹೇಳಿದ್ದಾರೆ.

Follow Us:
Download App:
  • android
  • ios