Asianet Suvarna News Asianet Suvarna News

ದೇವಸ್ಥಾನ ತೆರೆಯಲು ಸರ್ಕಾರ ಅನುಮತಿ: ಕಂಡೀಷನ್ಸ್ ಅಪ್ಲೈ

* ರಾಜ್ಯದಲ್ಲಿ ಕಡಿಮೆಯಾ  ಕೋವಿಡ್ ಎರಡನೇ ಅಲೆ ಹಾವಳಿ
* ದೇವಸ್ಥಾನ ಓಪನ್‌ಗೆ ಸರ್ಕಾರ ಗ್ರೀನ್ ಸಿಗ್ನಲ್
* ಈ ಬಗ್ಗೆ ಮುಜರಾಯಿ ಇಲಾಖೆಯ ಆಯುಕ್ತರಿಗೆ ನಿರ್ದೇಶನ

Karnataka Govt Green Signal To Open temples rbj
Author
Bengaluru, First Published Jul 3, 2021, 6:48 PM IST

ಬೆಂಗಳೂರು, (ಜುಲೈ.03): ಕೋವಿಡ್ ಎರಡನೇ ಅಲೆ ಹಾವಳಿ ಮತ್ತಷ್ಟು ಕಡಿಮೆಯಾದ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಇನ್ನಷ್ಟು ನಿರ್ಬಂಧಗಳ ಸಡಿಲಿಕೆಗೆ ಸರ್ಕಾರ ಚಿಂತನೆ ನಡೆಸಿದೆ.

ಇದರ ಮೊದಲ ಭಾಗವಾಗಿ ರಾಜ್ಯದಲ್ಲಿ ದೇವಸ್ಥಾನಗಳನ್ನ ತೆರೆಯಲು ಸರ್ಕಾರ ಗ್ರೀನ್ ಸಿಗ್ನಲ್ ನೀಡಿದೆ. ಈ ಬಗ್ಗೆ ಇಂದು (ಶನಿವಾರ) ಸಿಎಂ ಬಿಎಸ್‌ ಯಡಿಯೂರಪ್ಪ ಅವರು ಮುಜರಾಯಿ ಇಲಾಖೆಯ ಆಯುಕ್ತರಿಗೆ ನಿರ್ದೇಶನ ನೀಡಿದ್ದಾರೆ. 

ಕರ್ನಾಟಕದಲ್ಲಿ ಶೇ.1.92ಕ್ಕೆ ಇಳಿದ ಕೊರೋನಾ ಪಾಸಿಟಿವಿಟಿ ದರ

ಈ ಮೂಲಕ ಎರಡು ತಿಂಗಳ ಬಳಿಕ ದೇವಸ್ಥಾನಗಳು ಓಪನ್ ಆಗುತ್ತಿದ್ದು, ಜುಲೈ.05ರಿಂದ ಭಕ್ತರು ದೇವರ ಆಶೀರ್ವಾದ ಪಡೆದುಕೊಳ್ಳಬಹುದು. ಆದ್ರೆ, ಹೋಮ-ಹವನ ಮಾಡುವುದಕ್ಕೆ ಅವಕಾಶ ಇಲ್ಲ, ಪ್ರಸಾದ ವಿತರಣೆ ಮಾಡುವಂತಿಲ್ಲ ಎಂದು ಸರ್ಕಾರ ತಿಳಿಸಿದೆ.

ಬಹುಮುಖ್ಯವಾಗಿ ಮಾಸ್ಕ್, ಸಮಾಜಿಕ ಅಂತರ ಕಾಪಾಡಿಕೊಳ್ಳುವುದು ಮುಖ್ಯವಾಗಿರುತ್ತದೆ. ಈ ಹಿನ್ನೆಲೆಯಲ್ಲಿ ದೇವಸ್ಥಾನದ ಅರ್ಚಕರು ಹಾಗೂ ಸಮಿತಿಗಳು ಕೋವಿಡ್ ಮಾರ್ಗಸೂಚಿ ಪಾಲಿಸಬೇಕೆಂದು ಸೂಚಿಸಲಾಗಿದೆ.
 

Follow Us:
Download App:
  • android
  • ios