Asianet Suvarna News Asianet Suvarna News

ದಸರಾ ಆಚರಿಸಲು ರಾಜ್ಯ ಸರ್ಕಾರ ಅನುಮತಿ, ಈ ಮಾರ್ಗಸೂಚಿ ಅನುಸರಿಸುವುದು ಕಡ್ಡಾಯ

ದಸರಾ ಹಬ್ಬ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಜೊತೆ ಜೊತೆಗೆ ಕಡ್ಡಾಯವಾಗಿ ಕೊರೋನಾ ಸೋಂಕಿನ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ಸೂಚಿಸಿ ಮಾರ್ಗಸೂಚಿ ಕ್ರಮಗಳನ್ನು ಬಿಡುಗಡೆ ಮಾಡಿದೆ.

Karnataka govt issues guidelines to prevent Covid spread during Dasara 2020 rbj
Author
Bengaluru, First Published Oct 14, 2020, 5:11 PM IST

ಬೆಂಗಳೂರು, (ಅ.14): ರಾಜ್ಯದಲ್ಲಿ ದಿನಾಂಕ 17-10-2020ರ ಶನಿವಾರದಿಂದ ದಿನಾಂಕ 26-10-2020ರ ಮಂಗಳವಾರದವರೆಗೆ ಒಟ್ಟು 9 ದಿನಗಳ ಕಾಲ ನಾಡ ಹಬ್ಬ ದಸರಾವನ್ನು ಆಚರಿಸಲಾಗಿತ್ತಿದೆ.  

ಕೊರೋನಾ ಸೋಂಕಿನ ಸಂದರ್ಭದಲ್ಲಿ ಸರಳ ಮತ್ತು ಭಕ್ತಿಪೂರ್ವಕವಾಗಿ ಆಚರಿಸಲು ರಾಜ್ಯ ಸರ್ಕಾರ ಅನುಮತಿ ನೀಡಿದೆ. ಜೊತೆ ಜೊತೆಗೆ ಕಡ್ಡಾಯವಾಗಿ ಕೊರೋನಾ ಸೋಂಕಿನ ನಿಯಂತ್ರಣ ಕ್ರಮಗಳನ್ನು ಪಾಲಿಸುವಂತೆ ದಸರಾ ಹಬ್ಬ ಆಚರಣೆಗೆ ಮಾರ್ಗಸೂಚಿಯನ್ನು ಬಿಡುಗಡೆ ಮಾಡಿದೆ.

ಕೊರೋನಾ ನಿಯಂತ್ರಣದಲ್ಲಿ ಆರೋಗ್ಯ ಸೇತು ಆ್ಯಪ್ ಪ್ರಮಖ ಪಾತ್ರ; WHO ಮೆಚ್ಚುಗೆ!

ಈ ಕುರಿತಂತೆ ರಾಜ್ಯ ಸರ್ಕಾರ ಮುಖ್ಯ ಕಾರ್ಯದರ್ಶಿ ಟಿಎಂ ವಿಜಯ್ ಭಾಸ್ಕರ್ ದಸರಾ ಹಬ್ಬ ಆಚರಣೆಗೆ ಅನುಮತಿ ನೀಡಿದ್ದು, ಅದರೊಂದಿಗೆ ಕೊರೋನಾ ನಿಯಂತ್ರಣ ಕ್ರಮಗಳನ್ನು ಕೈಗೊಳ್ಳಲು ದಸರಾ ಹಬ್ಬ ಆಚರಣೆ ಸಂದರ್ಭದಲ್ಲಿ ಪಾಲಿಸಬೇಕಾದಂತ ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಪ್ರಕಟಿಸಿದ್ದಾರೆ.

ರಾಜ್ಯಾದ್ಯಂತ ಮುಂಬರಲಿರುವ ದಸರಾ ಹಬ್ಬವನ್ನು ಸರಳ ರೀತಿಯಲ್ಲಿ ಆಚರಿಸಲು ಸೂಚಿಸಿರುವ ಅವರು, ಕೊರೋನಾ ಮಾರ್ಗಸೂಚಿ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸುವ ಷರತ್ತಿನೊಂದಿಗೆ, ಅನುಮತಿಸಿದೆ. ಈ ಮಾರ್ಗಸೂಚಿಗಳ್ನು ಮಹಾನಗರ ಪಾಲಿಕೆಗಳ ಆಯುಕ್ತರು, ಪೊಲೀಸ್ ಆಯುಕ್ತರು, ಜಿಲ್ಲೆಗಳ ಜಿಲ್ಲಾಧಿಕಾರಿಗಳು ಮತ್ತು ಇತರೆ ಇಲಾಖಾ ಮುಖ್ಯಸ್ಥರುಗಳು, ಇಲಾಖಾ ಪ್ರಾಧಿಕಾರಗಳು ಕಟ್ಟುನಿಟ್ಟಾಗಿ ಅನುಷ್ಠಾನಗಳಿಸುವಂತೆ ಸುತ್ತೋಲೆಯಲ್ಲಿ ತಿಳಿಸಿದ್ದಾರೆ. 

ಪಾಲಿಸಬೇಕಾದ ಮಾರ್ಗಸೂಚಿ ನಿಯಮಗಳು
* ಪ್ರಸಕ್ತ ವರ್ಷದ ನಾಡ ಹಬ್ಬ ದಸರಾವನ್ನು ಅತ್ಯಂತ ಸರಳವಾಗಿ ಆಚರಿಸಿ
* ಮೈಸೂರು ಹೊರತಾಗಿ ರಾಜ್ಯದ ಇತರೆಡೆ ನಡೆಸಲಾಗುವ ದಸರಾ ಆಚರಣೆಯ ಕಾರ್ಯಕ್ರಮಗಳಲ್ಲಿ 10ಕ್ಕಿಂತ ಹೆಚ್ಚು ಜನರು ಒಮ್ಮೆಲೆ ಸೇರುವಂತಿಲ್ಲ. ಸಾಮಾಜಿಕ ಅಂತರವನ್ನು ಕಡ್ಡಾಯವಾಗಿ ಪಾಲಿಸಬೇಕು
* ನಾಡಹಬ್ಬ ದಸರಾ ಆಚರಣೆಯಲ್ಲಿ ಸಾಮಾಜಿಕ ಅಂತರವಿಲ್ಲದೇ ನಡೆಸುವ ಕಾರ್ಯಕ್ರಮ ನಿಷೇಧ
* ಕೋವಿಡ್-19 ನಿಯಂತ್ರ ಕ್ರಮಗಳನ್ನು ಕಡ್ಡಾಯವಾಗಿ ಪಾಲಿಸಬೇಕು
* ಸಮಾಜದಲ್ಲಿ ಕಾನೂನು ಮತ್ತು ಸುವ್ಯವಸ್ಥೆಗೆ ಯಾವುದೇ ಭಂಗ ಬಾರದಂತೆ ದಸರಾ ಹಬ್ಬ ಆಚರಿಸಬೇಕು

ಮೈಸೂರು ದಸರಾ ಕುರಿತು ಮಾರ್ಗಸೂಚಿ
* ಅರಮನೆಯ ಆವರಣದಲ್ಲಿ ನಡೆಸಲಾಗುವ ಸಾಂಸ್ಕೃತಿಕ ಕಾರ್ಯಕ್ರಮಗಳಲ್ಲಿ ಸಾಮಾಜಿಕ ಅಂತರ, ಮಾಸ್ಕ್ ಬಳಕೆ ಮತ್ತು ಸ್ಯಾನಿಟೈಸರ್ ಗಳನ್ನು ಕಡ್ಡಾಯವಾಗಿ ಬಳಸಬೇಕು.

* ಈ ಬಾರಿಯ ದಸರಾ ಹಬ್ಬ ಆಚರಣೆಯನ್ನು ದೃಶ್ಯ ಸಂವಹನ ಮೂಲಕ, ಸಾರ್ವಜನಿಕರು ವೀಕ್ಷಿಸಲು ಅವಕಾಶ ಮಾಡಬೇಕು. ಈ ಸಮಾರಂಭಗಳಿಗೆ ಸಾರ್ವಜನಿಕರ ಪ್ರವೇಶ ನಿಷೇಧಿಸಿದೆ.

* ಮೈಸೂರು ದಸರಾ ಹಬ್ಬದ ಆಚರಣೆಗೆ ವ್ಯಕ್ತಿಗಳ ಪಾಲ್ಗೊಳ್ಳುವಿಕೆಯ ಸಂಖ್ಯೆಯಲ್ಲಿ ಸೀಮಿತಗೊಳಿಸಿದ್ದು, ಕಡ್ಡಾಯವಾಗಿ ಈ ಕೆಳಗಿನಷ್ಟು ಜನರು ಪಾಲ್ಗೊಳ್ಳಬೇಕು.

* ಚಾಮುಂಡಿ ಬೆಟ್ಟದಲ್ಲಿ -200 ಜನರಿಗೆ ಮಾತ್ರ ಅವಕಾಶ

*ಮೈಸೂರು ಅರಮನೆ ಸಂಜೆಯ ಸಾಂಸ್ಕೃತಿಕ ಕಾರ್ಯಕ್ರಮದಲ್ಲಿ 50 ಜನರು ಮೀರದಂತೆ ಜನರು ಭಾಗವಹಿಸಬೇಕು

* ಜಂಬೂ ಸವಾರಿಯಲ್ಲಿ 300 ಜನರಿಗೆ ಮಾತ್ರ ಪ್ರವೇಶ

Follow Us:
Download App:
  • android
  • ios