* ರಾಜ್ಯ ಸಾರಿಗೆ ಸಿಬ್ಬಂದಿಗೆ ಗುಡ್ ನ್ಯೂಸ್* ಸಾರಿಗೆ ನೌಕರರ ಸಂಬಳಕ್ಕೆ ಹಣ ಬಿಡುಗಡೆ ಮಾಡಿದ ರಾಜ್ಯ ಸರ್ಕಾರ* ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಆದೇಶ

ಬೆಂಗಳೂರು, (ಆ.23): ರಾಜ್ಯ ಸರ್ಕಾರ ಜುಲೈ ತಿಂಗಳ ವೇತನ ಬಿಡುಗಡೆಗೊಳಿಸಿ ಆದೇಶ ಹೊರಡಿಸಿದೆ. ಒಟ್ಟು 60.82 ಕೋಟಿ ಹಣವನ್ನ ಬಿಡುಗಡೆ ಮಾಡಿ ಸಾರಿಗೆ ಇಲಾಖೆ ಅಧೀನ ಕಾರ್ಯದರ್ಶಿ ಸತ್ಯವತಿ ಇಂದು (ಆ.23) ಆದೇಶ ಹೊರಡಿಸಿದ್ದಾರೆ. 

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

2021-22 ನೇ ಸಾಲಿನ ಆಯವ್ಯಯದ ಸಹಾಯಧನದಡಿ ಒದಗಿಸಿರುವ ಅನುದಾನದಡಿ ಒಟ್ಟಾರೆ 60.82 ಕೋಟಿ ರೂ ಹಣ ಬಿಡುಗಡೆಗೊಳಿಸಿದ್ದಾರೆ. 

ರಾಷ್ಟ್ರೀಯ ನಗದೀಕರಣ ಪೈಪ್‌ಲೈನ್‌ಗೆ ಚಾಲನೆ; 6 ಲಕ್ಷ ಕೋಟಿ ರೂ ಯೋಜನೆ ಘೋಷಿಸಿದ ನಿರ್ಮಲಾ!

ಕೆಎಸ್‌ಆರ್‌ಟಿಸಿ, ವಾಯುವ್ಯ, ಕಲ್ಯಾಣ ಕರ್ನಾಟಕ ಸಾರಿಗೆ ನಿಗಮಗಳ ಸಿಬ್ಬಂದಿ ಜುಲೈ ತಿಂಗಳ ಸಂಬಳಕ್ಕಾಗಿ ಶೇಕಡ 25% ರಷ್ಟು ಹಣವನ್ನ ನೀಡಿದೆ.

ಕೆಎಸ್‌ಆರ್‌ಟಿಸಿಗೆ 27.74 ಕೋಟಿ, ವಾಯುವ್ಯ ಸಾರಿಗೆ ನಿಗಮಕ್ಕೆ 17.48 ಕೋಟಿ, ಕಲ್ಯಾಣ ಕರ್ನಾಟಕ ಸಾರಿಗೆಗೆ 15.61 ಕೋಟಿ ಹಣವನ್ನ ಬಿಡುಗಡೆ ಮಾಡಿದೆ.