ಕೊರೋನಾ ಕಾಲದಲ್ಲಿ ಜನರ ನೆರವಿಗೆ ಬಂದ ಇಶಾ ಫೌಂಡೇಷನ್, ಧನ್ಯವಾದ ಎಂದ ಸರ್ಕಾರ!
* ಕೊರೋನಾದ ಎರಡನೇ ಅಲೆ ಗರಿಷ್ಠ ಮಟ್ಟ ತಲುಪಿದಾಗ ಜನ ಸಾಮಾನ್ಯರಿಗೆ ಇಶಾ ನೆರವು
* ಇಶಾ ಪ್ರತಿಷ್ಠಾನಕ್ಕೆ ಧನ್ಯವಾದ ಎಂದ ಕರ್ನಾಟಕ ಸರ್ಕಾರ
* ಪತ್ರ ಬರೆದು ಮೆಚ್ಚುಗೆ ವ್ಯಕ್ತಪಡಿಸಿದ ಬಿಎಸ್ವೈ
ಬೆಂಗಳೂರು(ಜು.21): ಕೊರೋನಾದ ಎರಡನೇ ಅಲೆ ಗರಿಷ್ಠ ಮಟ್ಟ ತಲುಪಿದಾಗ, ಮುಂಚೂಣಿ ಆರೋಗ್ಯ ಕಾರ್ಯಕರ್ತರಿಂದ ಜನಸಾಮಾನ್ಯರವರೆಗೆ ಆಹಾರ ಮತ್ತು ಇತರ ಅಗತ್ಯ ವಸ್ತುಗಳನ್ನು ಪೂರೈಸಿದ್ದಕ್ಕಾಗಿ ಕರ್ನಾಟಕ ಸರ್ಕಾರ ಇಶಾ ಪ್ರತಿಷ್ಠಾನಕ್ಕೆ ಧನ್ಯವಾದಗಳನ್ನು ಅರ್ಪಿಸಿದೆ.
ಈ ಸಂಬಂಧ ಮುಖ್ಯಮಂತ್ರಿ ಬಿ.ಎಸ್.ಯಡಿಯುರಪ್ಪ, ಇಶಾ ಫೌಂಡೇಶನ್ ಸಂಸ್ಥಾಪಕ ಆಧ್ಯಾತ್ಮಿಕ ಗುರು ಸದ್ಗುರುಗೆ ಪತ್ರ ಬರೆದು ಕಳೆದ 75 ದಿನಗಳಲ್ಲಿ ಇಶಾ ಸಂಸ್ಥೆ ಕೊಟ್ಟ ಸಹಕಾರವನ್ನು ಶ್ಲಾಘಿಸಿದ್ದಾರೆ ಮತ್ತು ಧನ್ಯವಾದಗಳನ್ನು ತಿಳಿಸಿದ್ದಾರೆ.
ಸಿಎಂ ಪತ್ರವನ್ನು ಟ್ವೀಟ್ ಮಾಡಿದ ಇಶಾ ಫೌಂಡೇಶನ್
ಸಿಎಂ ಬರೆದ ಈ ಪತ್ರವನ್ನು ಇಶಾ ಫೌಂಡೇಶನ್ ಟ್ವೀಟ್ ಮಾಡಿ ಮುಖ್ಯಮಂತ್ರಿಗೆ ಧನ್ಯವಾದ ತಿಳಿಸಿದ್ದಾರೆ. ಅಗತ್ಯ ಸಾಮಗ್ರಿಗಳೊಂದಿಗೆ ಅಗತ್ಯವಿರುವವರನ್ನು ತಲುಪಲು ಪ್ರತಿಷ್ಠಾನಕ್ಕೆ ಸಹಾಯ ಮಾಡಿದ ಕರ್ನಾಟಕ ಸರ್ಕಾರದ ಬೆಂಬಲಕ್ಕೆ ಕೃತಜ್ಞರಾಗಿದ್ದೇವೆ ಎಂದು ಪ್ರತಿಷ್ಠಾನ ತಿಳಿಸಿದೆ. ಇದೇ ವೇಳೆ ಮುಂಚೂಣಿ ಆರೋಗ್ಯ ಕಾರ್ಯಕರ್ತರಿಗೂ ಧನ್ಯವಾದ ತಿಳಿಸಿದೆ.