* 16 ಐಎಎಸ್ ಅಧಿಕಾರಿಗಳ ವರ್ಗಾವಣೆ * ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ* ಇಂದು(ಗುರುವಾರ) ಆದೇಶ ಹೊರಡಿಸಿದ  ರಾಜ್ಯ ಸರ್ಕಾರ

ಬೆಂಗಳೂರು, (ಮೇ.05): 40% ಕಮಿಷನ್ ಹಾಗೂ ಅಕ್ರಮ ನೇಮಕಾತಿ ಗದ್ದಲದ ಮಧ್ಯೆ ಕರ್ನಾಟಕ ಸರ್ಕಾರ ಆಡಳಿತ ಯಂತ್ರ'ಕ್ಕೆ ಮೇಜರ್ ಸರ್ಜರಿ ಮಾಡಿದೆ 16 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಇಂದು(ಗುರುವಾರ) ಸರ್ಕಾರ ಆದೇಶ ಹೊರಡಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ ಗುಪ್ತ ಅವರನ್ನ ವರ್ಗಾವಣೆ ಮಾಡಲಾಗಿದ್ದು, ಓರ್ವ ಐಎಎಸ್ ಅಧಿಕಾರಿಗೆ ಹೆಚ್ಚುವರಿ ಹೊಣೆಗಾರಿಕೆಗೆ ನೀಡಿದೆ. ದೆಹಲಿ ಕರ್ನಾಟಕ ಭವನದ ಉಪಸ್ಥಾನೀಯ ಆಯುಕ್ತರಾಗಿ ಖುಷ್ಬೂ ಚೌಧರಿ ನೇಮಕಗೊಂಡಿದ್ದಾರೆ. 

ಕೆಪಿಎಸ್​ಸಿ ಕಾರ್ಯದರ್ಶಿಯಾಗಿ ಕ್ಯಾ.‌ಡಾ.ರಾಜೇಂದ್ರ, ಕೆಆರ್​ಐಡಿಎಲ್ ಎಂಡಿ ಆಗಿ ಎಂ.ಜಿ.ಹಿರೇಮಠ, ಬೆಳಗಾವಿ ಜಿಲ್ಲಾಧಿಕಾರಿಯಾಗಿ ಆಗಿ ನಿತೇಶ್ ಪಾಟೀಲ್​, ಧಾರವಾಡ ಜಿಲ್ಲಾಧಿಕಾರಿಯಾಗಿ ಗುರುದತ್ತ ಹೆಗ್ಡೆ ವರ್ಗಾವಣೆಯಾಗಿದ್ದಾರೆ.

ಮೇಜರ್ ಸರ್ಜರಿ, 16 IAS​ ಅಧಿಕಾರಿಗಳ ವರ್ಗಾವಣೆ

ಕೆಎಸ್​ಆರ್​ಟಿಸಿ ನಿರ್ದೇಶಕರಾಗಿ ಡಾ. ನವೀನ್ ಭಟ್, ಬಾಗಲಕೋಟೆ ಜಿಲ್ಲಾಧಿಕಾರಿ ಭೂ ಬಾಲನ್ ಟಿ., ಇಡಿಸಿಎಸ್ ನಿರ್ದೇಶಕರಾಗಿ ಡಾ.ದಿನೇಶ್ ಸಸಿ, ವಾಯವ್ಯ ಕರ್ನಾಟಕ ಸಾರಿಗೆ ಸಂಸ್ಥೆ ಎಂಡಿ ಭರತ್ ಎಸ್, ಕೆಯುಐಡಿಎಫ್​ಸಿ ಎಂಡಿಯಾಗಿ ಶಿಲ್ಪಾ ಎಂ, ಉಡುಪಿ ಜಿಲ್ಲಾ ಪಂಚಾಯಿತಿ ಸಿಇಒ ಆಗಿ ಪ್ರಸನ್ನ ಹೆಚ್, ಕಲಬುರಗಿ ಜಿ.ಪಂ. ಸಿಇಒ ಆಗಿ ಡಾ.ಗಿರೀಶ್ ದಿಲೀಪ್ ಬಾಡೋಲೆ ಅವರನ್ನು ವರ್ಗಾವಣೆ ಮಾಡಲಾಗಿದೆ.

ಬಿಬಿಎಂಪಿ ಮುಖ್ಯ ಆಯುಕ್ತ ಗೌರವ್ ಗುಪ್ತಾ ವರ್ಗಾವಣೆ
ಬಿಬಿಎಂಪಿ (BBMP) ಮುಖ್ಯ ಆಯುಕ್ತ ಗೌರವ್ ಗುಪ್ತಾ (Gaurav Gupta) ಅವರನ್ನು ವರ್ಗಾವಣೆ ಮಾಡಿ ಕರ್ನಾಟಕ ಸರ್ಕಾರ ಆದೇಶ ಹೊರಡಿಸಿದ್ದು, ಮುಖ್ಯ ಆಯುಕ್ತರಾಗಿ ತುಷಾರ್ ಗಿರಿನಾಥ್​ರನ್ನು (Tushar Girinath) ನೇಮಕ ಮಾಡಿದೆ.

ಮೂಲ ಸೌಕರ್ಯ ಅಭಿವೃದ್ಧಿ ಇಲಾಖೆ ಎಸಿಎಸ್ ಆಗಿ ಗೌರವ್ ಗುಪ್ತಾ ವರ್ಗಾವಣೆ ಹೊಂದಿದ್ದಾರೆ. ಜೊತೆಗೆ ಕಂದಾಯ ಇಲಾಖೆ ಪ್ರಧಾನ ಕಾರ್ಯದರ್ಶಿಯಾಗಿ ಟಿಕೆ ಅನಿಲ್ ಕುಮಾರ್​ಗೆ ಹೆಚ್ಚುವರಿ ಹೊಣೆ ವಹಿಸಲಾಗಿದೆ.

2022 ಏಪ್ರಿಲ್ 18ರಂದು ಕರ್ನಾಟಕ ಸರ್ಕಾರ 16 ಐಎಎಸ್ ಅಧಿಕಾರಿಗಳನ್ನ ವರ್ಗಾವಣೆ ಮಾಡಿತ್ತು. ಇದೀಗ ಒಂದು ತಿಂಗಳೊಳಗೆ ಮತ್ತೆ ವರ್ಗಾವಣೆ ಮಾಡಿದೆ.