Suvarna Special: ಯಾರಿಗುಂಟು ಲಕ್ಷ್ಮೀ?ಯಾರಿಗಿಲ್ಲ ಜ್ಯೋತಿ? ಕಾಸು, ಕರೆಂಟು, ಲಕ್ಷ್ಮೀ, ಜ್ಯೋತಿ..ಇದು ಆಪರೇಷನ್ ಗ್ಯಾರಂಟಿ

ಕರ್ನಾಟಕ ಸರ್ಕಾರವು 'ಗೃಹಲಕ್ಷ್ಮಿ' ಮತ್ತು 'ಗೃಹಜ್ಯೋತಿ' ಯೋಜನೆಗಳನ್ನು ಪರಿಷ್ಕರಿಸಲು ಮುಂದಾಗಿದ್ದು, ಅನರ್ಹರನ್ನು ತೆಗೆದುಹಾಕುವ ಗುರಿ ಹೊಂದಿದೆ. ಈ ಕ್ರಮವು ರಾಜಕೀಯ ಚರ್ಚೆಗೆ ಕಾರಣವಾಗಿದ್ದು, ವಿರೋಧ ಪಕ್ಷಗಳು ಟೀಕಿಸುತ್ತಿವೆ.

Share this Video
  • FB
  • Linkdin
  • Whatsapp

ಬೆಂಗಳೂರು (ಜೂ.17): ಕರ್ನಾಟಕ ಸರ್ಕಾರದ ಮಹತ್ವಾಕಾಂಕ್ಷೆಯ ‘ಗೃಹಲಕ್ಷ್ಮಿ’ ಮತ್ತು ‘ಗೃಹಜ್ಯೋತಿ’ ಯೋಜನೆಗಳ ಪರಿಷ್ಕರಣೆಗೆ ರಾಜ್ಯ ಸರ್ಕಾರ ಮುಂದಾಗಿದ್ದು, ರಾಜಕೀಯ ವಲಯದಲ್ಲಿ ತಲ್ಲಣ ಸೃಷ್ಟಿಸಿದೆ. ಅನರ್ಹರಾಗಿದ್ದರೂ ಉಚಿತ ಕರೆಂಟ್ ಹಾಗೂ ಎರಡು ಸಾವಿರ ರೂಪಾಯಿ ಹಣ ಪಡೆಯುತ್ತಿದ್ದವರಿಗೆ ಬ್ರೇಕ್ ಹಾಕಲು ಸರ್ಕಾರ ಅಖಾಡಕ್ಕಿಳಿದಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಪರೇಷನ್ ಗೃಹಲಕ್ಷ್ಮೀ: ಸತ್ತವರ ಖಾತೆಗೆ ಹಣ! 4 ಲಕ್ಷ ಅನರ್ಹರ ಮೇಲೆ ಸರ್ಕಾರದ ಬಿಗ್ ಆ್ಯಕ್ಷನ್

ಇದರಿಂದಾಗಿ ರಾಜ್ಯದಲ್ಲಿ ವೋಟ್ ಇದ್ದವರಿಗೆ ಮಾತ್ರವೇ ಗ್ಯಾರಂಟಿ ಸೌಲಭ್ಯ ಸಿಗಲಿದೆಯೇ ಹಾಗೂ ಫಲಾನುಭವಿಗಳು ಮತ್ತೆ ಅರ್ಜಿ ಸಲ್ಲಿಸಬೇಕೇ ಎಂಬ ಆತಂಕ ಶುರುವಾಗಿದೆ. ಈ ಪರಿಷ್ಕರಣೆಯನ್ನು "ತುಘಲಕ್ ದರ್ಬಾರ್" ಎಂದು ಕರೆದಿರುವ ವಿರೋಧ ಪಕ್ಷ ಬಿಜೆಪಿ, ಸರ್ಕಾರ ಯೋಜನೆಗಳನ್ನೇ ನಿಲ್ಲಿಸಲು ಸಂಚು ರೂಪಿಸಿದೆ ಎಂದು ಮುಗಿಬಿದ್ದಿದೆ.

ಆದರೆ, ಈ ಆರೋಪಗಳನ್ನು ಸ್ಪಷ್ಟವಾಗಿ ನಿರಾಕರಿಸಿರುವ ಡಿಸಿಎಂ ಡಿ.ಕೆ. ಶಿವಕುಮಾರ್, "ಇದು ಹೃದಯದ ಪ್ರೀತಿಯ ಯೋಜನೆ, ಯಾವುದೇ ಕಾರಣಕ್ಕೂ ನಿಲ್ಲಲ್ಲ" ಎಂದು ಸ್ಪಷ್ಟಪಡಿಸಿದ್ದಾರೆ. ಕೇವಲ ತಾಂತ್ರಿಕ ಪರಿಷ್ಕರಣೆ ಮಾತ್ರ ನಡೆಯುತ್ತಿದ್ದು, ಅರ್ಹರಿಗೆ ಯೋಜನೆ ಮುಂದುವರೆಯಲಿದೆ ಎಂದು ಸರ್ಕಾರ ಸಮರ್ಥಿಸಿಕೊಂಡಿದೆ.

Related Video