ರಸ್ತೆ ಅಪಘಾತದಲ್ಲಿ ಮೃತಪಟ್ಟ ಕ್ಷೌರಿಕನ ಕುಟುಂಬಕ್ಕೆ ಹೈಕೋರ್ಟ್ ನ್ಯಾಯ ಒದಗಿಸಿದೆ. ನ್ಯಾಯಾಧೀಕರಣ ನೀಡಿದ್ದ 32 ಲಕ್ಷ ರೂ. ಪರಿಹಾರವನ್ನು 44.47 ಲಕ್ಷ ರೂ.ಗೆ ಹೆಚ್ಚಿಸಿ, ಆರು ವಾರಗಳಲ್ಲಿ ಹಣ ಪಾವತಿಸುವಂತೆ ವಿಮಾ ಕಂಪನಿಗೆ ಆದೇಶಿಸಿದೆ.

ಬೆಂಗಳೂರು: ರಸ್ತೆ ಅಪಘಾತದಲ್ಲಿ ಮೃತಪಟ್ಟ ಕ್ಷೌರಿಕ ವೃತ್ತಿಯಲ್ಲಿ ತೊಡಗಿದ್ದ ವ್ಯಕ್ತಿಯ ಕುಟುಂಬದವರಿಗೆ 44.47 ಲಕ್ಷ ರು. ಪರಿಹಾರ ಪಾವತಿಸುವಂತೆ ವಿಮಾ ಕಂಪೆನಿಗೆ ಹೈಕೋರ್ಟ್‌ ಆದೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಘಟನೆ ಸಂಬಂಧ ರಸ್ತೆ ಅಪಘಾತ ಪರಿಹಾರ ಕ್ಲೇಮು ನ್ಯಾಯಾಧೀಕರಣ ನಿಗದಿಪಡಿಸಿದ್ದ 32 ಲಕ್ಷ ರು. ಪರಿಹಾರ ಮೊತ್ತವನ್ನು ಹೆಚ್ಚಿಸುವಂತೆ ಕೋರಿ ಮೃತ ಮಂಜುನಾಥ್‌ ಎಂಬಾತನ ಕುಟುಂಬದವರು ಸಲ್ಲಿಸಿದ್ದ ಮೇಲ್ಮನವಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಡಿ.ಕೆ. ಸಿಂಗ್ ಅವರ ನೇತೃತ್ವದ ವಿಭಾಗೀಯ ಪೀಠ ಈ ಆದೇಶ ಮಾಡಿದೆ.

ಶೇ.6 ರಷ್ಟು ಬಡ್ಡಿಯೊಂದಿಗೆ ಹಣ ನೀಡುವಂತೆ ಆದೇಶ

ಮೃತ ವ್ಯಕ್ತಿ ಕ್ಷೌರಿಕ ವೃತ್ತಿಯಲ್ಲಿ ತೊಡಗಿದ ಹಾಗೂ ಮಾಸಿಕ 14 ಸಾವಿರು. ಸಂಪಾದಿಸುತ್ತಿದ್ದ ಅಂಶವನ್ನು ಪರಿಗಣಿಸಿದ ಹೈಕೋರ್ಟ್‌, ನ್ಯಾಯಾಧೀಕರಣ ನಿಗದಿಪಡಿಸಿದ್ದ 32.56 ಲಕ್ಷ ರು. ಪರಿಹಾರ ಮೊತ್ತವನ್ನು 44.47,100 ರು.ಗೆ ಹೆಚ್ಚಿಸಿದೆ. ಹೆಚ್ಚುವರಿಯಾಗಿರುವ 11.91 ಲಕ್ಷ ರು. ಪರಿಹಾರ ಮೊತ್ತವನ್ನು ಶೇ.6 ರಷ್ಟು ಬಡ್ಡಿಯೊಂದಿಗೆ ಮುಂದಿನ ಆರು ವಾರಗಳಲ್ಲಿ ಹಣ ಜಮೆ ಮಾಡಬೇಕು ಎಂದು ವಿಮಾ ಕಂಪನಿಗೆ ನ್ಯಾಯಪೀಠ ಆದೇಶಿಸಿದೆ.

ಪ್ರಕರಣವೇನು?

ಮಂಜುನಾಥ್ 2018ರ ಸೆ.4ರಂದು ತಮ್ಮ ಸಂಬಂಧಿಕರೊಬ್ಬರ ಬೈಕ್‌ನಲ್ಲಿ ಹಿಂಬದಿ ಸವಾರನಾಗಿ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದಾಬಸ್ ಪೇಟೆಯಿಂದ ಮಾಗಡಿ ರಸ್ತೆಯ ಶ್ರೀಗಿರಿಪುರಕ್ಕೆ ತೆರಳುತ್ತಿದ್ದರು. ಪ್ರಯಾಣದ ವೇಳೆ ನೆಲಮಂಗಲ ತಾಲ್ಲೂಕಿನ ಹೊನ್ನೇನಹಳ್ಳಿ ತಾಂಡ್ಯ ಬಳಿ ಬಂದ ರಸ್ತೆಯ ಹಂಪ್​ ನೋಡದೆ ಸವಾರ ಬೈಕ್‌ ಚಲಾಯಿಸಿದ ಪರಿಣಾಮ ನಿಯಂತ್ರಣಕ್ಕೆ ಸಿಗದೆ ಮಂಜುನಾಥ್‌ ಕೆಳಗೆ ಬಿದ್ದಿದ್ದು, ಗಂಭೀರವಾಗಿ ಗಾಯಗೊಂಡಿದ್ದರು.

ಇದನ್ನೂ ಓದಿ: Durandhar-2 ಸಕ್ಸಸ್​ ಬೆನ್ನಲ್ಲೇ ಕ್ಷಮೆ ಕೋರಿ ಕರ್ನಾಟಕ ಹೈಕೋರ್ಟ್​ಗೆ ನಟ ರಣವೀರ್ ಸಿಂಗ್​: ಆಗಿದ್ದೇನು?

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆಯ ಪಡೆಯುತ್ತಿದ್ದ ಸಂದರ್ಭದಲ್ಲಿ ಚಿಕಿತ್ಸೆ ಫಲಕಾರಿಯಾಗದೆ 2019ರ ಫೆ.23ರಂದು ಮಂಜುನಾಥ್‌ ಮೃತಪಟ್ಟಿದ್ದರು. ಘಟನೆ ಸಂಬಂಧ ಮೃತರ ಸಂಬಂಧಿಕರು ಪರಿಹಾರ ಕೋರಿದ ಅರ್ಜಿ ವಿಚಾರಣೆ ನಡೆಸಿದ್ದ ನ್ಯಾಯಾಧಿಕರಣ, ಘಟನೆ ನಡೆದ ದಿನದಿಂದ ಶೇ.7ರ ಬಡ್ಡಿ ದರ ಸೇರಿಸಿ 32,56,100 ರು.ಗಳ ಪರಿಹಾರ ಪಾವತಿಸಲು ಬೈಕ್‌ಗೆ ವಿಮಾ ಪಾಲಿಸಿ ವಿತರಿಸಿದ್ದ ವಿಮಾ ಕಂಪನಿಗೆ ಆದೇಶಿಸಿತ್ತು. ಈ ಮೊತ್ತ ಹೆಚ್ಚಿಸಲು ಕೋರಿ ಮೃತನ ಕುಟುಂಬದವರು ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನೂ ಓದಿ: ಶಾಲೆಗಳಲ್ಲಿ 'ವಂದೇ ಮಾತರಂ' ಕಡ್ಡಾಯ ವಿರೋಧಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಿಚಾರಣೆ ನಿರಾಕರಿಸಿದ ಹೈಕೋರ್ಟ್

Scroll to load tweet…