Asianet Suvarna News Asianet Suvarna News

Panchamasali Reservation: ಸರ್ಕಾರಕ್ಕೆ ಬಿಗ್ ರಿಲೀಫ್, ಕುತೂಹಲ ಮೂಡಿಸಿದ ನಾಳಿನ ಸಚಿವ ಸಂಪುಟ ಸಭೆ

ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್  ಸಿಕ್ಕಿದೆ. ಹೈಕೋರ್ಟ್  ಯಥಾಸ್ಥಿತಿ ಆದೇಶ ತೆರವುಗೊಳಿಸಿದೆ.

Karnataka High Court permits government to take a decision on Panchamasali reservation gow
Author
First Published Mar 23, 2023, 2:24 PM IST | Last Updated Mar 23, 2023, 3:23 PM IST

ಬೆಂಗಳೂರು (ಮಾ.23): ಲಿಂಗಾಯತ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ವಿಚಾರಕ್ಕೆ ಸಂಬಂಧಿಸಿದಂತೆ ಚುನಾವಣೆ ಹೊಸ್ತಿಲಿನಲ್ಲಿ ಸರ್ಕಾರಕ್ಕೆ ಬಿಗ್ ರಿಲೀಫ್  ಸಿಕ್ಕಿದೆ. ಹೈಕೋರ್ಟ್ ಯಥಾಸ್ಥಿತಿ ಆದೇಶ ತೆರವುಗೊಳಿಸಿದೆ. ರಾಘವೇಂದ್ರ ಡಿ.ಜಿ. ಎಂಬುವವರು  ಪಂಚಮಸಾಲಿಗೆ 2 ಎ ಮೀಸಲಾತಿ ನೀಡದಂತೆ ಪಿಐಎಲ್ ಅರ್ಜಿ ಸಲ್ಲಿಸಲಿದ್ದರು. ಕೇಂದ್ರ ಸರ್ಕಾರದ ಸಾಲಿಸಿಟರ್  2ಎ ಮೀಸಲಾತಿಯಲ್ಲಿ ಪರಿವರ್ತನೆ ಮಾಡುವುದಿಲ್ಲ ಎಂದು ಹೈಕೋರ್ಟ್ ಗೆ  ಭರವಸೆ ನೀಡಿದ ಹಿನ್ನೆಲೆಯಲ್ಲಿ ಯಥಾಸ್ಥಿತಿ ಕಾಯ್ದುಕೊಳ್ಳುವಂತೆ ಸೂಚಿಸಿದ್ದ  ಮಧ್ಯಂತರ ಆದೇಶ ತೆರವುಗೊಳಿಸಲಾಗಿದೆ. 

ಹೀಗಾಗಿ ಪಂಚಮಸಾಲಿಗೆ 2 ಸಿ, 2 ಡಿ ಮೀಸಲಾತಿ ನೀಡಲು ಅಡ್ಡಿ  ಇಲ್ಲದಂತಾಗಿದೆ.   2 ಎ ಮೀಸಲಾತಿಯಲ್ಲಿ ಬದಲಾವಣೆ ಮಾಡದಂತೆ ಲಿಖಿತ ಹೇಳಿಕೆ ಸಲ್ಲಿಸಲು ಕೇಂದ್ರ ಸರ್ಕಾರಕ್ಕೆ ಸೂಚನೆ ನೀಡಲಾಗಿದೆ. ಯಾವುದೇ ಕ್ರಮ ಹೈಕೋರ್ಟ್ ಅಂತಿಮ ತೀರ್ಪಿಗೆ ಬದ್ದವಾಗಿರಬೇಕೆಂದು ಸೂಚನೆ ನೀಡಲಾಗಿದೆ.

ನಾಳೆ ಸಂಪುಟ ಸಭೆ ನಿರ್ಧಾರ: 
ಈ ಹಿನ್ನೆಲೆಯಲ್ಲಿ ಪಂಚಮಸಾಲಿ ಸಮುದಾಯದ ಮೀಸಲಾತಿ ವಿಚಾರ ನಾಳೆ  ಸಂಜೆ 4ಗಂಟೆಗೆ ನಡೆಯುವ ಸಂಪುಟ ಸಭೆಯಲ್ಲಿ ಅಂತಿಮ ನಿರ್ಧಾರ ತೆಗೆದುಕೊಳ್ಳುವ ಸಾಧ್ಯತೆ ಇದೆ. ಹಿಂದುಳಿದ ವರ್ಗಗಳ ಆಯೋಗದ ಮಧ್ಯಂತರ ವರದಿ ಪ್ರಕಾರ ಸರ್ಕಾರದಿಂದ ತಿರ್ಮಾನ ಹೊರಬೀಳುವ ಸಾಧ್ಯತೆ ಇದೆ. ಈ ಹಿಂದೆ ಘೋಷಣೆ ಮಾಡಿದಂತೆ ಲಿಂಗಾಯತರಿಗೆ ಪ್ರತ್ಯೇಕ ಮೀಸಲಾತಿ. 2 ಡಿ ಪ್ರವರ್ಗದ ಮೂಲಕ 7% ಮೀಸಲಾತಿ ಸಾಧ್ಯತೆ.

ಪಂಚಮಸಾಲಿ ಮೀಸಲು ಬಗ್ಗೆ ನಾಡಿದ್ದು ನಿರ್ಧಾರ?

ಈಗಾಗಲೇ ಲಿಂಗಾಯತರು 3ಬಿ ಯಡಿ5% ಮೀಸಲಾತಿ ಪಡೆಯುತ್ತಿದ್ದಾರೆ. ಲಿಂಗಾಯತ ಸಮುದಾಯದ ಎಲ್ಲಾ ಪಂಗಡಗಳು ಮತ್ತು ಜಾತಿಗಳು ಒಂದೇ ಸೂರಿನಡಿ ತರುವ ನಿರ್ಧಾರದ ಹಿನ್ನೆಲೆಯಲ್ಲಿ ಲಿಂಗಾಯತ ಸಮುದಾಯ 2ಡಿ ಅನ್ನೋ ಪ್ರವರ್ಗ ದಡಿ 5% ಮೀಸಲಾತಿ ಜೊತೆಗೆ ಹೆಚ್ಚುವರಿಯಾಗಿ 2% ಪಡೆಯಲಿದ್ದಾರೆ. ಈ ನಿರ್ಧಾರ ಜಾರಿಯಾದರೆ ಲಿಂಗಾಯತರು ಒಟ್ಟು 7 % ಮೀಸಲಾತಿ ಪಡೆಯಲಿದ್ದಾರೆ.

 

ಎಸ್ಸಿ ಎಸ್ಟಿ ಮೀಸಲು ಹೆಚ್ಚಳ ಕಾಯ್ದೆ ಬೋಗಸ್‌: ಸುರ್ಜೇವಾಲಾ ಆರೋಪ

ಇದರ ಜತೆಗೆ ಒಕ್ಕಲಿಗ ಸಮುದಾಯದ ಮೀಸಲಾತಿ ಪ್ರಮಾಣ ಏರಿಕೆಯಾಗಲಿದೆ. ಸದ್ಯ ಒಕ್ಕಲಿಗರು 3ಎ ಪ್ರವರ್ಗದಡಿ 4% ಮೀಸಲಾತಿ ಪಡೆಯುತ್ತಿದ್ದಾರೆ. ನಾಳೆಯ ಸಂಪುಟ ಸಭೆಯಲ್ಲಿ 3ಎ ಪ್ರವರ್ಗ ರದ್ದು ಮಾಡಿ 2 ಸಿ ಪ್ರವರ್ಗ ಸೃಷ್ಟಿಸಲು ಸರ್ಕಾರ ಮುಂದಾಗಿದೆ. ಈ ಪ್ರವರ್ಗದ ಮೂಲಕ ಹೆಚ್ಚುವರಿಯಾಗಿ 2% ಮೀಸಲಾತಿ ನೀಡಲು ಸರ್ಕಾರದ ಲೆಕ್ಕಾಚಾರ ಹಾಕಿಕೊಂಡಿದೆ. ಇದರಿಂದ 2ಸಿ ಮೂಲಕ ಮೀಸಲಾತಿ ಪ್ರಮಾಣ 6% ಕ್ಕೆ ಏರಿಕೆಯಾಗಲಿದೆ. ಸರ್ಕಾರದ ಈ ಕ್ರಮದಿಂದ ಲಿಂಗಾಯತ ಮತ್ತು ಒಕ್ಕಲಿಗ ಸಮುದಾಯಕ್ಕೆ ಹೆಚ್ಚಿನ ಬಲ ಸಿಗಲಿದೆ. ಹೀಗಾಗಿ ನಾಳೆಯ ಸಚಿವ ಸಂಪುಟ ಸಭೆ ಕುತೂಹಲ ಮೂಡಿಸಿದೆ.

Latest Videos
Follow Us:
Download App:
  • android
  • ios