ನ್ಯಾಯಮೂರ್ತಿಗಳು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು| ಸಾಧ್ಯವಾದಷ್ಟು ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಬಳಸಬೇಕು| ಕೋರ್ಟ್ ಹಾಲ್‌ ಗಳಲ್ಲಿ ಎಸಿ ಬದಲು ಫ್ಯಾನ್ ಬಳಸಬೇಕು| ನಿಶ್ಯಬ್ಧವಾಗಿ ಲ್ಯಾಪ್ಟಾಪ್, ಟ್ಯಾಬ್ ಬಳಕೆ ಮಾಡಲು ಅನುಮತಿ|

ಬೆಂಗಳೂರು(ಮೇ.27): ಜೂನ್ 1 ರಿಂದ ಹೈಕೋರ್ಟ್ ಕಲಾಪಗಳು ಆರಂಭವಾಗಲಿವೆ. ಆದರೆ, ಕಟ್ಟುನಿಟ್ಟಿನ ಆದೇಶಗಳನ್ನ ಪಾಲನೆ ಮಾಡಿಕೊಂಡು ಕಲಾಪಗಳನ್ನ ನಡೆಸಬೇಕು ಎಂದು ರಾಜ್ಯ ಸರಕಾರ ಆದೇಶಿಸಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಇಂದು(ಬುಧವಾರ) ಹೈಕೋರ್ಟ್ ಕಲಾಪಗಳು ಆರಂಭ ವಿಚಾರಕ್ಕೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಾರ್ಗಸೂಚಿ ಬಿಡುಗಡೆ ಮಾಡಿದೆ. ಈ ಮಾರ್ಗಸೂಚಿಯನ್ವಯ ನ್ಯಾಯಮೂರ್ತಿಗಳು ಕಡ್ಡಾಯವಾಗಿ ಮಾಸ್ಕ್ ಬಳಸಬೇಕು, ಸಾಧ್ಯವಾದಷ್ಟು ಹ್ಯಾಂಡ್ ಗ್ಲೌಸ್, ಸ್ಯಾನಿಟೈಸರ್ ಬಳಸಬೇಕು, ಕೋರ್ಟ್ ಹಾಲ್‌ ಗಳಲ್ಲಿ ಎಸಿ ಬದಲು ಫ್ಯಾನ್ ಬಳಸಬೇಕು, ನಿಶ್ಯಬ್ಧವಾಗಿ ಲ್ಯಾಪ್ಟಾಪ್, ಟ್ಯಾಬ್ ಬಳಕೆ ಮಾಡಲು ಅನುಮತಿ ನೀಡಲಾಗಿದೆ. 

ದೇವರಿಗೆ ಬಿಡುಗಡೆ: ರಾಜ್ಯದಲ್ಲಿ ದೇವಸ್ಥಾನ, ಚರ್ಚ್, ಮಸೀದಿ ತೆರೆಯಲು ಸಿಎಂ ಆದೇಶ!

ರೆಡ್ ಝೋನ್ ಪ್ರದೇಶಕ್ಕೆ ಭೇಟಿ ನೀಡುವುದಿಲ್ಲ ಎಂದು ವಕೀಲರು ಈ ಬಗ್ಗೆ ಹೈಕೋರ್ಟ್‌ಗೆ ಆಫಿಡವಿಟ್ ಸಲ್ಲಿಸಬೇಕು. ಹೈಕೋರ್ಟ್ ಸಿಬ್ಬಂದಿ, ವಕೀಲರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು. ವಕೀಲರು 15 ರಿಂದ 20 ನಿಮಿಷದಲ್ಲಿ ವಾದ ಮಂಡನೆ ಮುಗಿಸಬೇಕು. ಕೋರ್ಟ್ ಹಾಲ್‌ನಲ್ಲಿ ಒಂದು ಬಾರಿ 20 ವಕೀಲರು ಮಾತ್ರ ಇರಬೇಕು. ಅದಕ್ಕಿಂತ ಹೆಚ್ಚಿನ ವಕೀಲರ ಪ್ರವೇಶಕ್ಕೆ ಅನುಮತಿ ನಿರಾಕರಿಸಲಾಗಿದೆ. 

ವೈರಸ್‌ ನಿಲ್ಲುವವರೆಗೆ ವಕೀಲರು ಕೋಟ್‌, ಗೌನ್‌ ಧರಿಸುವಂತಿಲ್ಲ!

ಹೈಕೋರ್ಟ್ ಕಚೇರಿಗೆ ಯಾರು ಸಹ ಪ್ರವೇಶ ಮಾಡಬಾರದು. ವಕೀಲರು, ಕ್ಲರ್ಕ್, ಕಕ್ಷಿದಾರರಿಗೆ ಕಚೇರಿಗೆ ಪ್ರವೇಶವಿಲ್ಲ. ಎಲ್ಲರೂ ಕಡ್ಡಾಯವಾಗಿ ಆರೋಗ್ಯ ಸೇತು ಆ್ಯಪ್ ಬಳಸಬೇಕು. ಇ- ಫೈಲಿಂಗ್ ಮೂಲಕ ಕೇಸ್ ದಾಖಲಿಸಲು ಅವಕಾಶ ನೀಡಲಾಗಿದೆ. ನಿಗದಿತ ಸ್ಥಳದಲ್ಲಿ ಖುದ್ದು ಕೇಸ್ ದಾಖಲಿಸಲು ಅವಕಾಶ ನೀಡಲಾಗಿದೆ. ಜೂನ್ 1 ರಿಂದ ಈ ಎಲ್ಲ ಮಾರ್ಗಸೂಚಿಗಳನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ರಾಜ್ಯ ಸರ್ಕಾರ ಹೇಳಿದೆ.