Asianet Suvarna News Asianet Suvarna News

ಪ್ರವೀಣ್‌ ಹತ್ಯೆ ಬಳಿಕ 2 ದಿನ ನನಗೆ ಊಟ ಸೇರಲಿಲ್ಲ: ಗೃಹ ಸಚಿವ ಆರಗ

ಹರ್ಷನ ನಂತರ ಪ್ರವೀಣ್‌ ಕೊಲೆ ಆಗಿದ್ದರಿಂದ ನಿಜಕ್ಕೂ ನನಗೆ ಎರಡು ದಿನ ಊಟವೇ ಸೇರಲಿಲ್ಲ. ಈ ಕೊಲೆಗಾರರನ್ನು ಶೀಘ್ರವೇ ಬಂಧಿಸುತ್ತೇವೆ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಒಂದು ವ್ಯವಸ್ಥೆಯ ಮುಖ್ಯಸ್ಥನಾಗಿರುವ ನನಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು.

karnataka home minister araga jnanendra react on praveen nettaru murder case gvd
Author
Bangalore, First Published Jul 31, 2022, 5:00 AM IST

ಶಿವಮೊಗ್ಗ (ಜು.31): ಹರ್ಷನ ನಂತರ ಪ್ರವೀಣ್‌ ಕೊಲೆ ಆಗಿದ್ದರಿಂದ ನಿಜಕ್ಕೂ ನನಗೆ ಎರಡು ದಿನ ಊಟವೇ ಸೇರಲಿಲ್ಲ. ಈ ಕೊಲೆಗಾರರನ್ನು ಶೀಘ್ರವೇ ಬಂಧಿಸುತ್ತೇವೆ. ಅಗತ್ಯ ಕ್ರಮ ಕೈಗೊಳ್ಳುತ್ತೇವೆ. ಒಂದು ವ್ಯವಸ್ಥೆಯ ಮುಖ್ಯಸ್ಥನಾಗಿರುವ ನನಗೆ ಶೀಘ್ರ ತೀರ್ಮಾನ ತೆಗೆದುಕೊಳ್ಳಲು ಸಾಧ್ಯವಿಲ್ಲ. ಇದನ್ನು ಅರ್ಥ ಮಾಡಿಕೊಳ್ಳಬೇಕು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಹೇಳಿದರು. ಬಿಜೆಪಿ ಕಚೇರಿಯಲ್ಲಿ ಶನಿವಾರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇತ್ತೀಚಿನ ದಿನಗಳಲ್ಲಿ ಹಿಂದೂ ಯುವಕರ ಮೇಲೆ ದಾಳಿಯಾಗುತ್ತಿದೆ. ಮತಾಂಧ ಶಕ್ತಿಗಳನ್ನು ಬೆಳೆಸಿದ್ದೇ ಕಾಂಗ್ರೆಸ್‌. 

ಆ ಶಕ್ತಿಗಳನ್ನು ಮಟ್ಟ ಹಾಕುವುದೇ ಬಿಜೆಪಿ ಸರ್ಕಾರಕ್ಕೆ ಇರುವ ದೊಡ್ಡ ಸವಾಲು ಎಂದರು. ಸರ್ಕಾರದ ಮತ್ತು ನನ್ನ ವಿರುದ್ಧ ಪ್ರತಿಭಟನೆ ಮಾಡುತ್ತಿರುವವರು ನಮ್ಮವರೇ. ಅವರದು ಸಾತ್ವಿಕ ಪ್ರತಿಭಟನೆಯಾಗಿದೆ. ಇಂತಹ ಪ್ರತಿಭಟನೆಯ ಹಿಂದಿನ ಉದ್ದೇಶ ಅರ್ಥ ಮಾಡಿಕೊಳ್ಳಬೇಕು. ಸರ್ಕಾರ ಕೂಡ ನಿಟ್ಟಿನಲ್ಲಿ ಅಗತ್ಯ ಕ್ರಮ ಕೈಗೊಂಡಿದೆ. ವೋಟ್‌ ಬ್ಯಾಂಕ್‌ಗಾಗಿ ಹಲವು ವರ್ಷಗಳಿಂದ ಕಾಂಗ್ರೆಸ್‌ ಮತೀಯ ಶಕ್ತಿಗಳ ಸಖ್ಯ ಬೆಳೆಸಿದೆ. ಆ ಹೊಲಸನ್ನು ಸುಧಾರಣೆ ಮೂಲಕ ಹೋಗಲಾಡಿಸಬೇಕಿದೆ ಎಂದು ಖಾರವಾಗಿ ಹೇಳಿದರು.

ಹೋಂ ಮಿನಿಸ್ಟ್ರು ಟೀಚರ್ ತರ ವರ್ತಿಸಬಾರದು; ಖಡಕ್ ಆಗಿಬೇಕು -ಶಾಸಕ ರಾಜೂ ಗೌಡ

ಕಾಂಗ್ರೆಸ್‌ ಸರ್ಕಾರ ಅಧಿಕಾರದಲ್ಲಿ ಇದ್ದಾಗ 2 ಸಾವಿರ ಮತೀಯ ಶಕ್ತಿಗಳ ವಿರುದ್ಧ ದಾಖಲಿಸಿದ್ದ ಕೇಸ್‌ಗಳನ್ನು ವಾಪಸ್‌ ತೆಗೆದುಕೊಂಡಿದೆ. ಅವರು, ಅಧಿಕಾರದಲ್ಲಿದ್ದಾಗಲೂ ಹಿಂದೂಗಳ ಹತ್ಯೆಯಾಗಿದೆ. ಈಗ ರಾಜಕಾರಣಕ್ಕಾಗಿ ಈ ರೀತಿಯ ಮಾತನಾಡುತ್ತಿದ್ದಾರೆ. ಸರ್ಕಾರ ಶಾಂತಿ, ಸುವ್ಯವಸ್ಥೆ ಕಾಪಾಡಲು ಈಗಾಗಲೇ ಅಗತ್ಯ ಕ್ರಮ ಕೈಗೊಂಡಿದೆ. ಮಂಗಳೂರು ಶಾಂತವಾಗಿದೆ. ಜೈಲಿನಲ್ಲಿ ನಡೆದ ಘಟನೆಗಳಿಗೆ ಸಂಬಂಧಿಸಿದಂತೆ ಇದುವರೆಗೂ 15 ಹಿರಿಯ ಕಿರಿಯ ಅಧಿಕಾರಿಗಳನ್ನು ಸಸ್ಪೆಂಡ್‌ ಮಾಡಲಾಗಿದೆ. ಎಲ್ಲ ಹತ್ಯೆಗಳ ಕುರಿತಂತೆ ಶೀಘ್ರ ನ್ಯಾಯಾಲಯ ಮೂಲಕ ಬೇಗನೆ ತೀರ್ಪು ತೆಗೆದುಕೊಳ್ಳುವಂತೆ ಅಗತ್ಯ ಕ್ರಮ ಕೈಗೊಳ್ಳಲಾಗಿದೆ ಎಂದು ವಿವರಿಸಿದರು.

ಬಿಜೆಪಿ ಯುವ ಮೋರ್ಚಾ ಕಾರ್ಯಕರ್ತರು ರಾಜಿನಾಮೆ ಕೊಟ್ಟಿದ್ದರು. ಈಗಾಗಲೇ ದುಡುಕಿನ ಕ್ರಮ ಕೈಗೊಂಡಿದ್ದೇವು. ವಾಪಸ್‌ ತೆಗೆದುಕೊಳ್ಳುತ್ತೇವೆ ಎಂದಿದ್ದಾರೆ. ಯಾರದ್ದೋ ಸಿಟ್ಟನ್ನು ಯಾರದ್ದೋ ಮೇಲೆ ಹಾಕಿದ್ದರು. ಕೊಲೆಗಡುಕರ ವಿರುದ್ದ ನಿಮ್ಮ ಆಕ್ರೋಶ ಇರಬೇಕಿತ್ತು. ಅನೇಕ ಹಿರಿಯರು ನಮ್ಮ ಪಕ್ಷ ಕಟ್ಟಿದ್ದಾರೆ. ನಮ್ಮ ಹಿರಿಯರ ಆಸೆ ಒಂದೊಂದೇ ಈಡೇರುತ್ತಿವೆ. ಸಿಟ್ಟು, ಆಕ್ರೋಶ, ನೋವು ನಿಜ. ಅದು ರಾಷ್ಟ್ರದ್ರೋಹಿಗಳ ವಿರುದ್ಧ ಆಗಬೇಕು ಎಂದು ಪ್ರಶ್ನೆಯೊಂದಕ್ಕೆ ಉತ್ತರಿಸಿದರು.

ಗೃಹ ಸಚಿವ ಆರಗ ಜ್ಞಾನೇಂದ್ರ ಮನೆಗೆ ಮುತ್ತಿಗೆ; 40 ಎಬಿವಿಪಿ ಕಾರ್ಯಕರ್ತರ ಬಂಧನ

ರಾಜಿನಾಮೆ ಕೇಳಲು ಸಿದ್ದರಾಮಯ್ಯಗೆ ಏನು ನೈತಿಕತೆ ಇದೆ?: ಬೆಂಗಳೂರು ನಿವಾಸದ ಮುಂದೆ ಎಬಿವಿಪಿ ಪ್ರತಿಭಟನೆ ಅದು ನನ್ನ ವಿರುದ್ಧ ಸಿಟ್ಟಲ್ಲ. ಈ ರೀತಿ ಮಾಡಿ ಎಂದು ಆಗ್ರಹಿಸುತ್ತಿದ್ದಾರೆ ಅಷ್ಟೇ. ಬಿಜೆಪಿ ಕಾರ್ಯಕರ್ತರನ್ನು ಕಳೆದುಕೊಂಡ ನೋವು ಇರುತ್ತದೆ. ಆರೋಪಿಗಳನ್ನು ಬಂಧಿಸಿ, ಶಿಕ್ಷಿಸಿ ಎಂದು ಆಗ್ರಹಿಸುತ್ತಿದ್ದಾರೆ. ಸಿದ್ದರಾಮಯ್ಯ ಅವರಿಗೆ ರಾಜಿನಾಮೆ ಕೇಳಲು ಏನು ನೈತಿಕತೆ ಇದೆ. ಮತೀಯ ಸಂಘಟನೆ ಕೇಸ್‌ ವಾಪಸ್‌ ಪಡೆದಿದ್ದಾರೆ. ಟಿಪ್ಪು ಜಯಂತಿ ಮಾಡಿ ರಕ್ತಪಾತ ಹರಿಸಿದರು. ಓಟ್‌ ಬ್ಯಾಂಕ್‌ ನಿರ್ಮಾಣಕ್ಕಾಗಿ ಯಾರು ಯಾರನ್ನೋ ಬೆಳೆಸಿಟ್ಟರು ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕಿಡಿಕಾರಿದರು.

Follow Us:
Download App:
  • android
  • ios