07:45 AM (IST) Aug 12

Karnataka Latest News Live 12 August 2026ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್; ಅ.ನಲ್ಲಿ 3 ರೈಲುಗಳ ಸಂಚಾರ ಬಂದ್

ಮೈಸೂರು ವಿಭಾಗದಲ್ಲಿ ಹಳಿ ನಿರ್ವಹಣೆ ಕಾಮಗಾರಿಯಿಂದಾಗಿ ಅಕ್ಟೋಬರ್ ಮತ್ತು ನವೆಂಬರ್‌ನಲ್ಲಿ ಮಂಗಳೂರು-ಬೆಂಗಳೂರು ನಡುವಿನ ಹಲವು ರೈಲುಗಳ ಸಂಚಾರವನ್ನು ರದ್ದುಗೊಳಿಸಲಾಗಿದೆ. ಇದೇ ವೇಳೆ, ಸಕಲೇಶಪುರ-ಸುಬ್ರಹ್ಮಣ್ಯ ಮಾರ್ಗದಲ್ಲಿ ವಂದೇ ಭಾರತ್ ಎಕ್ಸ್‌ಪ್ರೆಸ್ ರೈಲಿನ ಪ್ರಾಯೋಗಿಕ ಸಂಚಾರ ನಡೆಯಲಿದೆ.
Read Full Story
07:41 AM (IST) Aug 12

Karnataka Latest News Live 12 August 2026FSSAI - ಆಹಾರ ಸುರಕ್ಷತಾ ನಿಯಮ ಉಲ್ಲಂಘನೆ - ಇಂದಿರಾ ಕ್ಯಾಂಟೀನ್‌, ಜೆಪ್ಟೋ ಗೋದಾಮಿಗೆ ಬೀಗ!

ಆಹಾರ ಸುರಕ್ಷತೆ ಮತ್ತು FSSAI ನಿಯಮಗಳ ಉಲ್ಲಂಘನೆಗಾಗಿ, ಅಧಿಕಾರಿಗಳು ಗೊಟ್ಟಿಗೆರೆಯ ಇಂದಿರಾ ಕ್ಯಾಂಟೀನ್, ಹೊಸಕೋಟೆಯ ಜೆಪ್ಟೋ ಗೋದಾಮಿನ ಮೇಲೆ ದಾಳಿ ನಡೆಸಿ ಬೀಗ ಜಡಿದಿದ್ದಾರೆ. ಈ ಹಿನ್ನೆಲೆಯಲ್ಲಿ, ಆರೋಗ್ಯ ಇಲಾಖೆಯು ರಾಜ್ಯದ ಎಲ್ಲಾ ಹೋಟೆಲ್‌ಗಳು ಮತ್ತು ಆಹಾರ ಸೇವಾ ಸಂಸ್ಥೆಗಳಿಗೆ ಮಾರ್ಗಸೂಚಿ ಬಿಡುಗಡೆ.

Read Full Story
07:27 AM (IST) Aug 12

Karnataka Latest News Live 12 August 2026ಬೆಳಗಾವಿ - ಸುಮಾರು 9 km ಉದ್ದದ ಎಲಿವೇಟೆಡ್ ರೈಲ್ವೆ ಟ್ರ್ಯಾಕ್ ನಿರ್ಮಾಣಕ್ಕೆ ಆಗ್ರಹ

ರಾಜ್ಯಸಭಾ ಸದಸ್ಯ ಪ್ರೊ.ಎಂ.ನಾಗರಾಜ ಅವರು ಬೆಳಗಾವಿ ನಗರದ ನಿರಂತರ ಸಂಚಾರ ದಟ್ಟಣೆ ಮತ್ತು ರೈಲ್ವೆ ಗೇಟ್‌ಗಳಿಂದಾಗುವ ಸಮಸ್ಯೆಗಳಿಗೆ ಶಾಶ್ವತ ಪರಿಹಾರವಾಗಿ, ಸುಮಾರು 9 ಕಿ.ಮೀ ಉದ್ದದ ಎಲಿವೇಟೆಡ್ ರೈಲ್ವೆ ಟ್ರ್ಯಾಕ್ ನಿರ್ಮಿಸುವಂತೆ ಕೇಂದ್ರ ಸರ್ಕಾರವನ್ನು ಒತ್ತಾಯಿಸಿದ್ದಾರೆ.

Read Full Story
07:15 AM (IST) Aug 12

Karnataka Latest News Live 12 August 2026ಶಿವಭಕ್ತರ ಅನುಕೂಲಕ್ಕಾಗಿ Athani ಸಾರಿಗೆ ಘಟಕದಿಂದ 2 ನೂತನ ಬಸ್; ವೇಳಾಪಟ್ಟಿ ಹೀಗಿದೆ

ಶಿವಭಕ್ತರ ಅನುಕೂಲಕ್ಕಾಗಿ ಅಥಣಿ ಸಾರಿಗೆ ಘಟಕದಿಂದ ಶ್ರೀಶೈಲ ಮಲ್ಲಿಕಾರ್ಜುನ ದೇವಾಲಯಕ್ಕೆ ಎರಡು ನೂತನ ಬಸ್ ಸೇವೆಗಳನ್ನು ಆರಂಭಿಸಲಾಗಿದೆ. ಶ್ರೀಶೈಲ ಪೀಠದ ಡಾ.ಚನ್ನಸಿದ್ಧರಾಮ ಪಂಡಿತಾರಾಧ್ಯ ಶಿವಾಚಾರ್ಯರು ಈ ಸೇವೆಗೆ ಚಾಲನೆ ನೀಡಿದ್ದು, ಬಸ್‌ನ ಸಮಯ, ಮಾರ್ಗ ಮತ್ತು ₹938 ಟಿಕೆಟ್ ದರದ ಬಗ್ಗೆ ಲೇಖನದಲ್ಲಿ ಮಾಹಿತಿ ನೀಡಲಾಗಿದೆ.
Read Full Story