06:08 AM (IST) Aug 17

Karnataka Latest News Live 17 August 2026ಕೆಎಎಸ್‌ ಅಧಿಕಾರಿ ಮಲ್ಲಿಕಾರ್ಜುನ ತೊದಲಬಾಗಿ ಅವರಿಂದ 283 ಸರ್ಕಾರಿ ಶಾಲೆಗಳಿಗೆ ಬಣ್ಣ

ಧಾರವಾಡ ಜಿಲ್ಲಾ ಪಂಚಾಯಿತಿ ಉಪಕಾರ್ಯದರ್ಶಿ ಮಲ್ಲಿಕಾರ್ಜುನ ತೊದಲಬಾಗಿ ಅವರು ತಮ್ಮ 'ಪರಿಸರ ಪ್ರೇಮ ತಂಡ'ದೊಂದಿಗೆ ಸ್ವಂತ ಖರ್ಚಿನಲ್ಲಿ ಬಣ್ಣ ಮಾಸಿದ ಸರ್ಕಾರಿ ಶಾಲೆ ಮತ್ತು ಅಂಗನವಾಡಿಗಳಿಗೆ ಬಣ್ಣ ಬಳಿಯುತ್ತಿದ್ದಾರೆ. ಇಲ್ಲಿಯವರೆಗೆ 283 ಕಟ್ಟಡಗಳನ್ನು ಸುಂದರಗೊಳಿಸಿರುವ ಇವರು, ತಮ್ಮ ಬಾಲ್ಯದ ಅನುಭವದಿಂದ ಪ್ರೇರಿತರಾಗಿ ಈ ಸಮಾಜಮುಖಿ ಕಾರ್ಯದಲ್ಲಿ ತೊಡಗಿಸಿಕೊಂಡಿದ್ದಾರೆ.
Read Full Story
05:58 AM (IST) Aug 17

Karnataka Latest News Live 17 August 2026ಇನ್ಮುಂದೆ ಅನುಮತಿ ಪಡೆಯದೆ ರ್‍ಯಾಲಿ ಮಾಡಿದರೆ 3 ವರ್ಷ ಜೈಲು ಶಿಕ್ಷೆ? ವಿಧೇಯಕದಲ್ಲಿ ಏನಿದೆ?

ಕರ್ನಾಟಕ ಸರ್ಕಾರವು 'ಸರ್ಕಾರಿ ಆವರಣ ಮತ್ತು ಸಾರ್ವಜನಿಕ ಆಸ್ತಿಗಳ ಬಳಕೆ ನಿಯಂತ್ರಣ ವಿಧೇಯಕ-2026' ಅನ್ನು ಜಾರಿಗೆ ತರಲು ಮುಂದಾಗಿದೆ. ಈ ವಿಧೇಯಕದ ಪ್ರಕಾರ, ಸಾರ್ವಜನಿಕ ಸ್ಥಳಗಳಲ್ಲಿ ಖಾಸಗಿ ಚಟುವಟಿಕೆಗಳಿಗೆ ಸರ್ಕಾರದ ಅನುಮತಿ ಕಡ್ಡಾಯವಾಗಲಿದ್ದು, ನಿಯಮ ಉಲ್ಲಂಘಿಸಿದರೆ ಜಾಮೀನು ರಹಿತ ಅಪರಾಧವಾಗಿ ಪರಿಗಣಿಸಿ ಕಠಿಣ ಜೈಲು ಶಿಕ್ಷೆ ಮತ್ತು ದಂಡ ವಿಧಿಸಲಾಗುತ್ತದೆ.

Read Full Story
05:41 AM (IST) Aug 17

Karnataka Latest News Live 17 August 2026ಹನೂರು ಎನ್ಕೌಂಟರ್‌ಗೆ ಅರಣ್ಯ ಸಿಬ್ಬಂದಿ ‘ಜಿಂಕೆ ಮಾಂಸ’ ಸಾಕ್ಷ್ಯ; ತ.ನಾಡು ವಿಪಕ್ಷಗಳ ಆಕ್ರೋಶ

ಕಾವೇರಿ ವನ್ಯಜೀವಿ ವಿಭಾಗದಲ್ಲಿ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮೃತಪಟ್ಟ ಘಟನೆಯ ತನಿಖೆ ಆರಂಭವಾಗಿದೆ. ಇದು ನಕಲಿ ಎನ್‌ಕೌಂಟರ್‌ ಅಲ್ಲವೆಂದು ಸಾಬೀತುಪಡಿಸಲು, ಅರಣ್ಯ ಇಲಾಖೆಯು ಬೇಟೆಗಾರರಿಂದ ವಶಪಡಿಸಿಕೊಂಡ ಸುಮಾರು 30 ಕೆ.ಜಿ. ವನ್ಯಪ್ರಾಣಿ ಮಾಂಸವನ್ನು ತನಿಖಾಧಿಕಾರಿಗಳ ಮುಂದೆ ಸಾಕ್ಷಿಯಾಗಿ ಇರಿಸಿದೆ. ಈ ಘಟನೆಯಿಂದ ಉದ್ರಿಕ್ತರಾದ ಜನರು ಅರಣ್ಯ ಇಲಾಖೆಯ ಆಸ್ತಿಪಾಸ್ತಿಗಳನ್ನು ಧ್ವಂಸಗೊಳಿಸಿದ್ದಾರೆ.
Read Full Story
05:30 AM (IST) Aug 17

Karnataka Latest News Live 17 August 2026SIR ನಮೂನೆ ವಾಪಸ್ ಕೊಡಲು ಇಂದೇ ಕೊನೆ ದಿನ; ಹೆಸರು ತೆಗೆದುಹಾಕಿದ್ದಾರಾ? ನೋಡಿಕೊಳ್ಳಿ

ರಾಜ್ಯದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿ ವಿಶೇಷ ಸಮಗ್ರ ಪರಿಷ್ಕರಣೆಯಲ್ಲಿ, ಗಣತಿ ನಮೂನೆ ವಾಪಸ್ ನೀಡಲು ಮತ್ತು ರೋಲ್‌ಬ್ಯಾಕ್‌ಗೆ ಸೋಮವಾರ ಕೊನೆಯ ದಿನವಾಗಿದೆ. ಎಎಸ್‌ಡಿಡಿಒ ವರ್ಗಕ್ಕೆ ಸೇರಿದ ಅಂದಾಜು 1.08 ಕೋಟಿ ಮತದಾರರ ಹೆಸರುಗಳು ಪಟ್ಟಿಯಿಂದ ರದ್ದಾಗುವ ಸಾಧ್ಯತೆಯಿದ್ದು, ಅರ್ಹರು ತಮ್ಮ ಹೆಸರು ಉಳಿಸಿಕೊಳ್ಳಲು ತಕ್ಷಣ ಕ್ರಮ ಕೈಗೊಳ್ಳಬೇಕಿದೆ. ಪರಿಷ್ಕೃತ ಕರಡು ಮತದಾರರ ಪಟ್ಟಿಯು ಆಗಸ್ಟ್ 24 ರಂದು ಪ್ರಕಟವಾಗಲಿದೆ.
Read Full Story