ಸಾರಾಂಶ
ಬೆಂಗಳೂರು: ರಾಜ್ಯದಲ್ಲಿ ಮಳೆ ಕೊರತೆ ನೀಗಿಸಲು ರಾಜ್ಯ ಸರ್ಕಾರ ಸೋಮವಾರದಿಂದ ವಿವಿಧೆಡೆ ಆರಂಭಿಸಲು ಉದ್ದೇಶಿಸಿದ್ದ ಮೋಡಬಿತ್ತನೆ ಕಾರ್ಯ ಒಂದೆರಡು ದಿನ ತಡವಾಗಲಿದೆ.
ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿ
ಕರ್ನಾಟಕ ನೀರಾವರಿ ನಿಗಮ (ಕೆಎನ್ಎನ್ಎಲ್) ಮತ್ತು ಮೋಡಬಿತ್ತನೆ ನಡೆಸುವ ಗುತ್ತಿಗೆ ಪಡೆದ ಕಂಪನಿಯೊಂದಿಗೆ ಸೋಮವಾರ ಅಧಿಕೃತ ಒಡಂಬಡಿಕೆ ಆಗಲಿದೆ. ನಂತರದಲ್ಲಿ ಈ ಪ್ರಕ್ರಿಯೆ ಆರಂಭವಾಗಲಿದೆ. ಬಹುತೇಕ ಮುಂದಿನ ಎರಡು ದಿನಗಳಲ್ಲಿ ಕರ್ನಾಟಕ ನೈಸರ್ಗಿಕ ವಿಕೋಪ ಉಸ್ತುವಾರಿ ಕೇಂದ್ರದ(ಕೆಎಸ್ಎನ್ಡಿಎಂಸಿ) ಸಹಯೋಗದಲ್ಲಿ ಪ್ರಕ್ರಿಯೆ ಆರಂಭಗೊಳ್ಳುವ ನಿರೀಕ್ಷೆ ಇದೆ ಎಂದು ಜಲಸಂಪನ್ಮೂಲ ಇಲಾಖೆ ಮೂಲಗಳು ತಿಳಿಸಿವೆ.
ಈಗಾಗಲೇ ಕೆಲ ಶಾಸಕರು ಸ್ಥಳೀಯವಾಗಿ ತಮ್ಮ ಅನುದಾನದಲ್ಲಿ ಮಳೆ ಕೊರತೆ ನೀಗಿಸಲು ಖಾಸಗಿ ಕಂಪನಿಯಿಂದ ಮೋಡಬಿತ್ತನೆ ಮಾಡಿಸಿದ್ದಾರೆ. ಅದರ ಮುಂದುವರಿದ ಭಾಗವಾಗಿ ಸರ್ಕಾರವೇ ಈಗ ಕೈಗೆತ್ತಿಕೊಳ್ಳಲು ಉದ್ದೇಶಿಸಿದೆ.
ಈಗಾಗಲೇ ನಿರ್ಧರಿಸಿದಂತೆ ಒಂದು ವಿಮಾನದ ಮೂಲಕ 60 ದಿನಗಳ ಅವಧಿಗೆ 200 ಗಂಟೆಗಳ ವೈಮಾನಿಕ ಹಾರಾಟವನ್ನು ನಡೆಸಲಾಗುತ್ತದೆ. ಖ್ಯಾತಿ ಕ್ಲೈಮೇಟ್ ಮಾಡಿಫಿಕೇಷನ್ ಕನ್ಸಲ್ಟೆಂಟ್ಸ್ ಈ ಯೋಜನೆಯನ್ನು ಅನುಷ್ಠಾನಗೊಳಿಸಲಿದ್ದು, ಒಟ್ಟು 28.52 ಕೋಟಿ ರು. ವೆಚ್ಚಕ್ಕೆ ಸರ್ಕಾರ ಆಡಳಿತಾತ್ಮಕ ಅನುಮೋದನೆ ನೀಡಲಾಗಿದೆ.
Karnataka Latest News Live 24 August 2026ಸರಿಗಮಪ ವಿನ್ನರ್ ಶಿವಾನಿ ಈಗ ಸಾಂಸ್ಕೃತಿಕ ರಾಯಭಾರಿ - 8 ಪ್ರತಿಷ್ಠಿತ ಪ್ರಶಸ್ತಿಗಳ ಒಡತಿ
ಮುಂಬೈನ ಅಖಿಲ ಭಾರತ ಗಂಧರ್ವ ಮಹಾವಿದ್ಯಾಲಯ ನಡೆಸಿದ ಸಂಗೀತ ವಿಶಾರದ ಪರೀಕ್ಷೆಯಲ್ಲಿ ಬೀದರ್ನ ಗಾಯಕಿ ಶಿವಾನಿ ಶಿವದಾಸಸ್ವಾಮಿ ದೇಶಕ್ಕೆ ಪ್ರಥಮ ರ್ಯಾಂಕ್ ಗಳಿಸಿದ್ದಾರೆ. ಈ ಸಾಧನೆಗಾಗಿ ಅವರು ಒಟ್ಟು 8 ಪ್ರತಿಷ್ಠಿತ ಪ್ರಶಸ್ತಿಗಳಿಗೆ ಭಾಜನರಾಗಿದ್ದು, ತಮ್ಮ ಈ ಯಶಸ್ಸಿಗೆ ಗುರುಗಳು, ಕುಟುಂಬ ಮತ್ತು ಬೀದರ್ ಜನತೆಯ ಪ್ರೋತ್ಸಾಹವೇ ಕಾರಣವೆಂದು ಸಂತಸ ವ್ಯಕ್ತಪಡಿಸಿದ್ದಾರೆ.
Read Full StoryKarnataka Latest News Live 24 August 2026ಬೆಲೆ ಕುಸಿತ - ಟೊಮ್ಯಾಟೋ 1 ರೂ, ಕೊತ್ತಂಬರಿ 3 ರೂ, ಲೋಡ್ ತಂದು ರಸ್ತೆಗೆ ಎಸೆದ ರೈತ!
ಬೆಳಗಾವಿ ಮತ್ತು ದಾವಣಗೆರೆಯಲ್ಲಿ ಬೆಲೆ ಕುಸಿತದಿಂದ ರೈತರು ತೀವ್ರ ಸಂಕಷ್ಟಕ್ಕೆ ಸಿಲುಕಿದ್ದಾರೆ. ಕೊತ್ತಂಬರಿ ಸೊಪ್ಪಿನ ಬೆಲೆ ಕುಸಿದಿದ್ದರಿಂದ ಬೆಳಗಾವಿಯಲ್ಲಿ ರೈತರು ಬೆಳೆಯನ್ನು ರಸ್ತೆಗೆ ಎಸೆದರೆ, ದಾವಣಗೆರೆಯಲ್ಲಿ ಟೊಮ್ಯಾಟೋಗೆ ಕೆಜಿಗೆ ಕೇವಲ 1 ರೂ. ಸಿಕ್ಕಿದ್ದರಿಂದ ಕಟಾವು ಮಾಡದೆ ಗಿಡದಲ್ಲೇ ಬಿಟ್ಟಿದ್ದಾರೆ.
Read Full StoryKarnataka Latest News Live 24 August 20262000-2002ನೇ ಸಾಲಿನ ಕನ್ನಡ ಎಂ.ಎ. ವಿದ್ಯಾರ್ಥಿಗಳ ಸ್ನೇಹ ಸಮ್ಮಿಲನ - ಕುವೆಂಪು ವಿಶ್ವವಿದ್ಯಾಲಯ
ಕುವೆಂಪು ವಿಶ್ವವಿದ್ಯಾಲಯದ 2000-2002ನೇ ಸಾಲಿನ ಕನ್ನಡ ಎಂ.ಎ ವಿದ್ಯಾರ್ಥಿಗಳು 25 ವರ್ಷಗಳ ನಂತರ ಮತ್ತೆ ಒಂದಾದರು. 'ಗುರು ನಮನ ಮತ್ತು ಸ್ನೇಹ ಸಂಭ್ರಮ' ಕಾರ್ಯಕ್ರಮವನ್ನು ಆಯೋಜಿಸಿ, ತಮ್ಮ ಗುರುಗಳಿಗೆ ಗೌರವ ಸಲ್ಲಿಸಿ, ಹಳೆಯ ನೆನಪುಗಳನ್ನು ಮೆಲುಕು ಹಾಕಿದರು.
Read Full StoryKarnataka Latest News Live 24 August 2026ಹಿಂದು ಧರ್ಮೀಯ ನಿಧನಕ್ಕೆ ಮಸೀದಿಯಲ್ಲಿ ಈದ್ ನಿಲ್ಲಿಸಿ ಗೌರವ; ಕಾರ್ಯಕ್ರಮ ಮುಂದೂಡಿಕೆ
ದಕ್ಷಿಣ ಕನ್ನಡ ಜಿಲ್ಲೆಯ ಕೊಯಿಲ ಗ್ರಾಮದಲ್ಲಿ, ಹಿಂದು ಧರ್ಮೀಯ ಗುರುಪ್ರಸಾದ್ ಅವರ ನಿಧನಕ್ಕೆ ಗೌರವ ಸೂಚಕವಾಗಿ ಕುದುಲೂರು ಮಸೀದಿಯು ಈದ್ ಮಿಲಾದ್ ಕಾರ್ಯಕ್ರಮವನ್ನು ಮುಂದೂಡಿದೆ. ಗುರುಪ್ರಸಾದ್ ಅವರ ಮನೆಯ ಸಮೀಪದಲ್ಲೇ ಇದ್ದ ಮಸೀದಿಯ ಆಡಳಿತ ಮಂಡಳಿಯು, ಸೂತಕದ ಸಮಯದಲ್ಲಿ ಸಂಭ್ರಮಾಚರಣೆ ಸೂಕ್ತವಲ್ಲವೆಂದು ಈ ಸೌಹಾರ್ದಯುತ ನಿರ್ಧಾರ ಕೈಗೊಂಡಿದೆ.
Read Full StoryKarnataka Latest News Live 24 August 2026ಸಚಿವ ನಾಗೇಂದ್ರಗಾಗಿ ತೀವ್ರ ಕದನ - ಬಿಜೆಪಿಯಿಂದ ವಿಧಾನಸೌಧಕ್ಕೆ ಮುತ್ತಿಗೆಯ ರಣತಂತ್ರ?
ವಾಲ್ಮೀಕಿ ನಿಗಮದ ಹಗರಣಕ್ಕೆ ಸಂಬಂಧಿಸಿದಂತೆ ಸಚಿವ ಬಿ.ನಾಗೇಂದ್ರ ರಾಜೀನಾಮೆಗೆ ಆಗ್ರಹಿಸಿ ಪ್ರತಿಪಕ್ಷ ಬಿಜೆಪಿ ವಿಧಾನಸೌಧಕ್ಕೆ ಮುತ್ತಿಗೆ ಹಾಕಲು ನಿರ್ಧರಿಸಿದೆ. ಪ್ರತಿಪಕ್ಷ ನಾಯಕ ಆರ್. ಅಶೋಕ್ ನೇತೃತ್ವದಲ್ಲಿ ನಡೆಯಲಿರುವ ಈ ಪ್ರತಿಭಟನೆಯು, ಸರ್ಕಾರದ ವಿರುದ್ಧದ ಹೋರಾಟವನ್ನು ತೀವ್ರಗೊಳಿಸುವ ಗುರಿ ಹೊಂದಿದೆ.
Read Full StoryKarnataka Latest News Live 24 August 2026SIR ಬಳಿಕ ರಾಜ್ಯದ ಕರಡು ಮತದಾರರ ಪಟ್ಟಿ ಇಂದು ಪ್ರಕಟ; ನಿಮ್ಮ ಹೆಸರು ಚೆಕ್ ಮಾಡೋದು ಹೇಗೆ?
ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ಪರಿಷ್ಕರಣೆ ನಂತರ ಕರಡು ಮತದಾರರ ಪಟ್ಟಿ ಪ್ರಕಟವಾಗಿದ್ದು, ಸುಮಾರು 1.08 ಕೋಟಿ ಮತದಾರರ ಹೆಸರುಗಳನ್ನು ಪಟ್ಟಿಯಿಂದ ಹೊರಗಿಡಲಾಗಿದೆ. ಆಕ್ಷೇಪಣೆ ಸಲ್ಲಿಸಲು ಸೆಪ್ಟೆಂಬರ್ 23ರವರೆಗೆ ಅವಕಾಶವಿದ್ದು, ಮತದಾರರು ತಮ್ಮ ಹೆಸರು ಇದೆಯೇ ಎಂದು ಪರಿಶೀಲಿಸಿಕೊಳ್ಳುವ ಬಗ್ಗೆ ಚುನಾವಣಾ ಆಯೋಗ ಮಾಹಿತಿ ನೀಡಲಿದೆ.
Read Full StoryKarnataka Latest News Live 24 August 2026ದೇಶಕ್ಕೆ 2 ತಿಂಗಳು ಶುಗರ್ ಪ್ರಾಬ್ಲಂ ಸಾಧ್ಯತೆ - ಕರ್ನಾಟಕದಲ್ಲಿ ಬೆಲೆ ಇಳಿಕೆ ಯಾವಾಗ?
ದೇಶದಲ್ಲಿ ಸಕ್ಕರೆ ಬೆಲೆ ಏರಿಕೆಯಾಗಿದ್ದು, ಇದನ್ನು ನಿಭಾಯಿಸಲು ಸರ್ಕಾರ ಬ್ರೆಜಿಲ್ನಿಂದ 10 ಲಕ್ಷ ಟನ್ ಕಚ್ಚಾ ಸಕ್ಕರೆಯನ್ನು ಆಮದು ಮಾಡಿಕೊಳ್ಳುತ್ತಿದೆ. ಈ ಸಕ್ಕರೆ ಅಕ್ಟೋಬರ್ 15ರ ವೇಳೆಗೆ ಭಾರತ ತಲುಪಲಿದ್ದು, ಅಲ್ಲಿಯವರೆಗೆ ದರ ಏರಿಕೆಯ ಬಿಸಿ ಮುಂದುವರೆಯುವ ಸಾಧ್ಯತೆಯಿದೆ. ಕರ್ನಾಟಕ ಸೇರಿದಂತೆ ಕರಾವಳಿ ರಾಜ್ಯಗಳಿಗೆ ಮೊದಲು ಸಕ್ಕರೆ ಪೂರೈಕೆಯಾಗಲಿದೆ.
Read Full Story